ನಾಳೆ ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಅನ್ನಸಂತರ್ಪಣೆ

ಕಾಪು: ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಶ್ರೀ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಜರಗುವ ಚಂಡಿಕಾಯಾಗ ಪೂರ್ಣಾಹುತಿಯು ಅ. 31ರಂದು ನಡೆಯಲಿದೆ. ಮಂಗಳವಾರ ಬೆಳಗ್ಗೆ 8 ಗಂಟೆಗೆ ಪ್ರಾರ್ಥನೆ, 11.30ಕ್ಕೆ ಚಂಡಿಕಾಯಾಗ ಪೂರ್ಣಾಹುತಿ, ಮಧ್ಯಾಹ್ನ 12ಗಂಟೆಗೆ ಅನ್ನಸಂತರ್ಪಣೆ, ಸಂಜೆ 3ಗಂಟೆಗೆ ದರ್ಶನ ಸೇವೆ ನಡೆಯಲಿದೆ ಎಂದು ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಸಾದ್‌ ಜಿ. ಶೆಣೈ ಮತ್ತು ಕಾಪು ಪೇಟೆಯ ಹತ್ತು ಸಮಸ್ತರ ಜಂಟಿ ಪ್ರಕಟನೆ ತಿಳಿಸಿದೆ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ದಸರಾ ವೈಭವದ ಶೋಭಾಯಾತ್ರೆ: ಶೋಭಾಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗಿ

ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಹತ್ತು ದಿನಗಳ ಕಾಲ ಜರಗಿದ ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ಜರಗಿದ ವೈಭವದ ಶೋಭಾ ಯಾತ್ರೆಗೆ ಉಚ್ಚಿಲ ದಸರಾ ರೂವಾರಿ ಡಾ| ಜಿ. ಶಂಕರ್ ಮಂಗಳವಾರ ಸಂಜೆ ಗಣ್ಯರ ಜೊತೆಗೂಡಿ ಚಾಲನೆ ನೀಡಿದರು. ಪ್ರಧಾನ ಅರ್ಚಕ ವೇ| ಮೂ|ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆಗೆ ಮಹಾ ಮಂಗಳಾರತಿ ಬೆಳಗಿ, ವಿಸರ್ಜನಾ ಪೂಜೆ ನಡೆಸಿದರು. ವಿವಿಧ ಟ್ಯಾಬ್ಲೋಗಳೊಂದಿಗೆ ಉಚ್ಚಿಲದಿಂದ ಕಾಲ್ನಡಿಗೆ ಮೂಲಕ ಹೊರಟ ಶೋಭಾಯಾತ್ರೆಯು ರಾಷ್ಟ್ರೀಯ […]

ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ.24ರಂದು ವಿಜಯದಶಮಿ ಆಚರಣೆ.

ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು, ಸಾವಿರಾರು ಮಂದಿ ಭಕ್ತರು ದೇಗುಲಕ್ಕೆ ಆಗಮಿಸಿ, ದೇವರ ಪ್ರಸಾದವನ್ನು ಪಡೆದರು. ಶ್ರೀ ಕ್ಷೇತ್ರದಲ್ಲಿ ಅ.23ರಂದು ರಾತ್ರಿ ಶಾರದಾ ವಿಸರ್ಜನೆ, ಕನ್ನಿಕಾ ಪೂಜೆ, ಮಹಾಮಂತ್ರಾಕ್ಷತೆ ಹಾಗೂ ಅ.24ರಂದು ವಿಜಯದಶಮಿ ಆಚರಣೆ ನಡೆಯಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ|ಕಟ್ಟೆರವಿರಾಜ ವಿ. ಆಚಾರ್ಯ ತಿಳಿಸಿದ್ದಾರೆ.

ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿಯ ವಿಶೇಷ ಪೂಜೆ

ಬ್ರಹ್ಮಾವರ: ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿಯ ವಿಶೇಷ ಪೂಜಾ ಸಮಾರಂಭವು ಶ್ರೀ ದುರ್ಗಾಪರಮೇಶ್ವರೀ ದೇವಿ ಸನ್ನಿಧಿಯಲ್ಲಿ ಅ.24ರ ವರೆಗೆ ನಡೆಯಲಿದೆ. ನವರಾತ್ರಿಯ ಈ ಕಾರ್ಯಕ್ರಮಗಳಿಗೆ ತಾವೆಲ್ಲರೂ ಆಗಮಿಸಿ, ಶ್ರೀ ದೇವಿಯ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ, ಅಮ್ಮನವರ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಗೋವಿಂದರಾಜು ಎಸ್. ಕಾರ್ಯನಿರ್ವಹಣಾಧಿಕಾರಿ, ಹೆಚ್.ಧನಂಜಯ ಶೆಟ್ಟಿ ಅಧ್ಯಕ್ಷರು ಹೆಚ್.ಸುರೇಂದ್ರ ಶೆಟ್ಟಿ ಅನುವಂಶಿಕ ಮುಕ್ತೇಸರ, ಹೆಚ್. ಪ್ರಭಾಕರ ಶೆಟ್ಟಿ ಅನುವಂಶಿಕ ಮುಕ್ತೇಸರ, ಹೆಚ್.ಶಂಭು ಶೆಟ್ಟಿ ಅನುವಂಶಿಕ ಮುಕ್ತೇಸರ,‌ ಆರ್. ಶ್ರೀನಿವಾಸ ಶೆಟ್ಟಿ ಅನುವಂಶಿಕ […]

ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನ: ಅ.23ರಂದು ಮಹಾನವಮಿ, ಅ.24ರಂದು ವಿಜಯೋತ್ಸವ ಆಚರಣೆ

ಸಿದ್ದಾಪುರ: ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ಶ್ರೀ ಶರನ್ನವರಾತ್ರಿ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಅ.23 ಸೋಮವಾರ ನವಮಿಯಂದು ಮಧ್ಯಾಹ್ನ ಶ್ರೀ ಚಂಡಿಕಾ ಯಾಗ, ರಾತ್ರಿ ರಜತ ರಥೋತ್ಸವ ಮತ್ತು ಪುಷ್ಪಕವಾಹನದಲ್ಲಿ ಪುರ ಮೆರವಣಿಗೆ (ರಥ ಬೀದಿ ಮತ್ತು ರಾಜಬೀದಿ), ಸಂಜೆ ಗಂಟೆ 5:30 ರಿಂದ 7:15 ರ ತನಕ ನೃತ್ಯಾಂಗಣ ನಾಟ್ಯಾಲಯ ಸಿದ್ದಾಪುರ ಇವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ. ಅ.24 ಮಂಗಳವಾರ ಉದಯ ಪೂರ್ವ 6.05 ಗಂಟೆಗೆ ಕದಿರು ಮುಹೂರ್ತ, ಧಾನ್ಯ ಸಂಗ್ರಹ ಕಣಜ […]