ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಇಂದು ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ

ಹಿರಿಯಡಕ: ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 20 ರಿಂದ 25ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಇಂದು ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಮೆರವಣಿಗೆಯು ಇಂದು ಸಂಜೆ ಗುಡ್ಡೆಯಂಗಡಿ, ಪುಪಾಡಿಕಲ್ಲು, ಜೋಡುಕಟ್ಟೆ ಮಾರ್ಗವಾಗಿ ಹಸಿರು ಹೊರೆಕಾಣಿಕೆಯನ್ನು ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಮರ್ಪಿಸಲಾಯಿತು. ಹಲವು ಭಜನಾ ತಂಡಗಳು, ಚಂಡೆ ಬಳಗ ಹಾಗೂ ಬ್ಯಾಂಡ್ ಸೆಟ್ ಗಳ ಮೂಲಕ ವೈಭವದ ಮೆರೆವಣಿಗೆ ನಡೆಯಿತು. ಊರ- ಪರಪೂರ ಸಾವಿರಾರು ಭಕ್ತಾದಿಮಾನಿಗಳು ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. […]

ಉದ್ಯಾವರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸುತ್ತುಪೌಳಿ ಸಮರ್ಪಣೆ, ಬ್ರಹ್ಮಕುಂಭಾಭಿಷೇಕ: ವಿವಿಧ ಹೋಮ, ಗಣಯಾಗ ಸಂಪನ್ನ

ಉಡುಪಿ: ಉದ್ಯಾವರ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ನವೀಕೃತ ತಾಮ್ರದ ಸುತ್ತುಪೌಳಿ ಸಮರ್ಪಣೆ, ಬ್ರಹ್ಮಕುಂಭಾಭಿಷೇಕ ಹಾಗು ರಾಶಿಪೂಜಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ‌ ಕಾರ್ಯಕ್ರಮಗಳು ಇಂದು ದೇಗುಲದ ಆವರಣದಲ್ಲಿ ನಡೆಯಿತು. ದೇವಸ್ಥಾನದ ಪುರೋಹಿತರ ನೇತೃತ್ವದಲ್ಲಿ ಅಷ್ಟ ಬಂಧ, ಶಕ್ತಿ ಹೋಮ, ನವಕಪ್ರಧಾನ, ಅಥರ್ವಶೀರ್ಷ ಗಣಯಾಗ ಮತ್ತು ಮಹಾ ಸುದರ್ಶನ ಹೋಮ, ಬಲಿಪೀಠ ಪ್ರತಿಷ್ಠೆ ಹಾಗೂ ಶಾಂತಿ ಪ್ರಾಯಶ್ಚಿತ ಹೋಮಗಳು ಸಂಪನ್ನಗೊಂಡವು.

ಮೇ.20 ರಿಂದ 25: ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಹಿರಿಯಡಕ: ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 20 ರಿಂದ 25ರ ವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ ಇಂದು ಸಂಜೆ ಗಂಟೆ 3.30 ರಿಂದ ಗುಡ್ಡೆಯಂಗಡಿ, ಪುಪಾಡಿಕಲ್ಲು, ಜೋಡುಕಟ್ಟೆ ಮಾರ್ಗವಾಗಿ ಬೃಹತ್ ಹೊರೆ ಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪಡುಕುತ್ಯಾರು ಆನೆಗುಂದಿ ಶ್ರೀ ಪಟ್ಟಾಭಿಷೇಕ ವರ್ಧಂತಿ ಸಂಪನ್ನ

ಉಡುಪಿ: ಸಾಮಾಜಿಕ ಜಾಲತಾಣಗಳ ನವ ಮಾಧ್ಯಮದ ಸಂಪರ್ಕದಲ್ಲಿರುವ ಎಳೆಯ ಮಕ್ಕಳಿಗೆ ಹೆತ್ತವರು ಸಂಸ್ಕಾರಯುತ ಜೀವನ ನಡೆಸುವುದನ್ನು ಕಲಿಸುವ ಪ್ರಯತ್ನ ನಡೆಯಬೇಕು ಎಂದು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿ ಹೇಳಿದರು. ಪಡುಕುತ್ಯಾರು ಮಹಾಸಂಸ್ಥಾನದ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ಜರುಗಿದ ತಮ್ಮ ಪಟ್ಟಾಭಿಷೇಕ ಮಹೋತ್ಸವದ 13ನೇ ವರ್ಷದ ವರ್ಧಂತ್ಯುತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನದ ಅಧ್ಯಕ್ಷ ವಿ.ಶ್ರೀಧರ […]

ಮೇ.17ರಿಂದ 24: ಇತಿಹಾಸ ಪ್ರಸಿದ್ಧ ಉದ್ಯಾವರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಸುತ್ತುಪೌಳಿ ಸಮರ್ಪಣೆ, ಬ್ರಹ್ಮಕುಂಭಾಭಿಷೇಕ

ಉಡುಪಿ: ಇತಿಹಾಸ ಪ್ರಸಿದ್ಧ ಉದ್ಯಾವರದ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಇದೇ ಬರುವ ಮೇ.17ರಿಂದ 24ರ ವರೆಗೆ ನವೀಕೃತ ತಾಮ್ರ ಸುತ್ತುಪೌಳಿ ಸಮರ್ಪಣೆ, ಬ್ರಹ್ಮಕುಂಭಾಭಿಷೇಕ ಹಾಗೂ ರಾಶಿಪೂಜಾ ಮಹೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಕೆ. ಉದಯಕುಮಾರ್ ಶೆಟ್ಟಿ ಹೇಳಿದರು. ಇಂದು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ.19ರಂದು ಮಧ್ಯಾಹ್ನ 3.30ಕ್ಕೆ ಅಂಬಲಪಾಡಿ ದೇವಸಾನದಿಂದ ಹೊರಕಾಣಿಕೆ ಮೆರವಣಿಗೆಗೆ ಆರಂಭಗೊಳ್ಳಲಿದೆ. ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ.ವಿಜಯ ಬಲ್ಲಾಳ್ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬಳಿಕ […]