ಸಾತ್ವಿಕ ಯಾಗ, ದಾನ, ಜ್ಞಾನ ಭಗವಂತನ ಅನುಸಂಧಾನಕ್ಕೆ ಸರಿಯಾದ ಹಾದಿ- ಒಡಿಯೂರು ಶ್ರೀ

ಉಡುಪಿ: ಯಾಗ, ದಾನ ಮತ್ತು ತಪಸ್ಸು ಇವು ಮೂರು ಕೂಡ ಭಗವಂತನ ಅನುಸಂಧಾನಕ್ಕೆ ಸರಿಯಾದ ಹಾದಿ. ಆದರೆ ಅವುಗಳಲ್ಲಿ ಶ್ರೇಷ್ಠವಾದುದು ಸಾತ್ವಿಕವಾದ ಯಾಗ, ದಾನ ಮತ್ತು ಜ್ಞಾನ. ಇವು ಮೂರಕ್ಕೂ ಅನುಕೂಲವಾಗುವಂತೆ ಪ್ರಸಾದ್ ರಾಜ್ ಕಾಂಚನ್ ಅವರು ಈ ಮಹಾರುದ್ರಯಾಗವನ್ನು ಆಯೋಜಿಸಿದ್ದಾರೆ. ಅದು ಸಾತ್ವಿಕವಾಗಿದ್ದು, ಅದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಒಡಿಯೂರು ಗುರು ದೇವದತ್ತಾ ಸಂಸ್ಥಾನದ ಗುರು ದೇವಾನಂದ ಸ್ವಾಮೀಜಿ ಹೇಳಿದರು. ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್‌ರಾಜ್‌ ಕಾಂಚನ್‌ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಮಹಾ […]

ಕುಕ್ಕೆ ಸುಬ್ರಹ್ಮಣ್ಯ: ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಕಡಬ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ಅನುಕೂಲಕ್ಕಾಗಿ ದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿ ಹೊಸ ವೇಳಾಪಟ್ಟಿಯನ್ನು ಜಾರಿಗೆ ತಂದಿದ್ದು, ಭಕ್ತರಿಗೆ ಇದೀಗ ಪ್ರತಿದಿನ ಹೆಚ್ಚುವರಿ ಒಂದು ಗಂಟೆ ದರ್ಶನದ ಅವಕಾಶ ದೊರೆಯಲಿದೆ. ಈ ಮೊದಲು ಮಧ್ಯಾಹ್ನ 1.30ರಿಂದ 3.30ರವರೆಗೆ ದೇವರ ದರ್ಶನವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತಿತ್ತು. ಆದರೆ ಹೊಸ ನಿರ್ಧಾರದಂತೆ ಇದೀಗ ಮಧ್ಯಾಹ್ನ 2.00ರಿಂದ 3.00ರವರೆಗೆ ಮಾತ್ರ ದೇವಸ್ಥಾನ ಬಂದ್ ಮಾಡಲಾಗುತ್ತದೆ. ಇದರಿಂದ ಮಧ್ಯಾಹ್ನದ ವೇಳೆಯಲ್ಲಿ ಭಕ್ತರಿಗೆ ಹೆಚ್ಚುವರಿ ದರ್ಶನ ಸೌಲಭ್ಯ […]

ಇಲ್ಲಿದೆ ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದರ ಹಿಂದಿನ ಅರ್ಥ!

ಹಿಂದೂ ಧರ್ಮ ಮತ್ತು ಭಾರತೀಯ ಸಂಪ್ರದಾಯದಲ್ಲಿ ವಿವಾಹವು ಕೇವಲ ಒಂದು ಸಾಮಾಜಿಕ ಕಾರ್ಯಕ್ರಮವಲ್ಲ, ಅದು ಪವಿತ್ರ ಸಂಸ್ಕಾರವೆಂದು ಪರಿಗಣಿಸಲಾಗುತ್ತದೆ. ಮದುವೆಯ ಸಂದರ್ಭದಲ್ಲಿ ವರ ವಧುವಿನ ಕೊರಳಿಗೆ ತಾಳಿ ಅಥವಾ ಮಾಂಗಲ್ಯಸೂತ್ರ ಕಟ್ಟುವ ಕ್ಷಣ ಅತ್ಯಂತ ಮಹತ್ವದ್ದಾಗಿದೆ. ಈ ತಾಳಿ ದಾಂಪತ್ಯ ಜೀವನದ ಶಾಶ್ವತ ಬಾಂಧವ್ಯದ ಪ್ರತೀಕವೆಂದು ನಂಬಲಾಗುತ್ತದೆ. ಆದರೆ ತಾಳಿ ಕಟ್ಟುವಾಗ ಸಾಮಾನ್ಯವಾಗಿ ಮೂರು ಗಂಟುಗಳನ್ನು ಹಾಕುವ ಸಂಪ್ರದಾಯದ ಹಿಂದೆ ಏನು ಅರ್ಥ ಇದೆ ಎಂಬುದನ್ನು ಅನೇಕರು ತಿಳಿದಿರಲಾರರು. ಹಿಂದೂ ಶಾಸ್ತ್ರಗಳ ಪ್ರಕಾರ ಈ ಮೂರು ಗಂಟುಗಳಿಗೆ […]

ಉಡುಪಿ ಕೃಷ್ಣಮಠದಲ್ಲಿ ಐಡಿ ಆಧಾರಿತ ಎಂಟ್ರೆನ್ಸ್ ವ್ಯವಸ್ಥೆಗೆ ಚಾಲನೆ

ಉಡುಪಿ: ಶ್ರೀರಥಬೀದಿ- ರಾಜಾಂಗಣ ರಾಜಮಾರ್ಗದಲ್ಲಿ ನೂತನವಾಗಿ ನವೀಕರಿಸಲಾದ ಶ್ರೀ ಕೃಷ್ಣ ದರ್ಶನಕ್ಕಾಗಿ ಸರತಿ ಸಾಲು ವ್ಯವಸ್ಥೆ ಮತ್ತು ಮೇಲ್ಛಾವಣಿ ವ್ಯವಸ್ಥೆ ಹಾಗೂ ವಿಐಪಿ ದರ್ಶನಕ್ಕಾಗಿ ಹಾಗೂ ಸ್ಥಳೀಯ ಭಕ್ತರಿಗಾಗಿ ಐಡಿ ಆಧಾರಿತ ಎಂಟ್ರೆನ್ಸ್ ವ್ಯವಸ್ಥೆಗೆ ಇಂದು ಚಾಲನೆ ನೀಡಲಾಯಿತು. ಪರ್ಯಾಯ ಶ್ರೀ ಶೀರೂರು ಮಠ ಪೀಠಾಧೀಶರಾದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ ನೂತನ ವ್ಯವಸ್ಥೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು,ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ […]

ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿ ಮೂಡಿಸಲು ಪರಿಣಾಮಕಾರಿ-ಡಾ. ಎಚ್. ಎಸ್.ಬಲ್ಲಾಳ್

ಉಡುಪಿ: ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ, ನಾಗಮಂಡಲ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿ ಮೂಡಿಸುವ ನಿಟ್ಟಿನಲ್ಲಿ ಹೆಚ್ಚು ಪರಿಣಾಮಕಾರಿ ಎಂದು ಮಾಹೆ ವಿವಿ ಸಹ ಕುಲಾಧಿಪತಿ ಡಾ. ಎಚ್. ಎಸ್.ಬಲ್ಲಾಳ್ ಹೇಳಿದರು. ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೈವಭಕ್ತಿ, ಶಿಕ್ಷಣ ಹಾಗೂ ಆರೋಗ್ಯ ಎಲ್ಲರಿಗೂ ಆವಶ್ಯಕ. ಈ ನಿಟ್ಟಿನಲ್ಲಿ ಡಾ. ಜಿ. ಶಂಕರ್ ಅವರು ಬಡ ರೋಗಿಗಳಿಗೆ ಸಹಾಯಹಸ್ತ ಚಾಚುವ ಬಹುದೊಡ್ಡ ಕಾರ್ಯಗಳನ್ನು ದಶಕಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. […]