ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇಗುಲ- ಶ್ರೀ ಮುಖ್ಯಪ್ರಾಣ ದೇವರಿಗೆ ಬ್ರಹ್ಮಕುಂಭಾಭಿಷೇಕ

ಉಡುಪಿ: ಇಂದ್ರಾಳಿಯ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಗುಡಿಯಲ್ಲಿ ಭಾನುವಾರ ಅತ್ಯಂತ ವೈಭವದಿಂದ ಬ್ರಹ್ಮಕಲಶೋತ್ಸವ ನೇರವೇರಿತು. ಅಷ್ಟಬಂಧ ಸಹಿತವಾಗಿ ಪುನಃ ಪ್ರತಿಷ್ಠಾಪಿತ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರಿಗೆ ವೇದಮೂರ್ತಿ ಪುತ್ತೂರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ಗೋಪಾಲಕೃಷ್ಣ ಉಪಾಧ್ಯಾಯರ ಉಪಸ್ಥಿತಿಯಲ್ಲಿ ಬೆಳಿಗ್ಗೆ ಬ್ರಹ್ಮಕುಂಭಾಭಿಷೇಕ ನೆರವೇರಿಸಲಾಯಿತು. ಬೆಳಿಗ್ಗೆ ಗಣಹೋಮ, ಪ್ರಧಾನ ಕಲಾ ಸಾನಿಧ್ಯ ಹೋಮ, 1001 ಕಲಶಾರಾಧನೆ, ಪ್ರಸನ್ನ ಪೂಜೆ, ಮಹಾಪೂಜೆ, ಪಲ್ಲ ಪೂಜೆ ಜರುಗಿತು. ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು. […]
ಕಮಲಶಿಲೆಯ ಬ್ರಾಹ್ಮೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರದಲ್ಲಿ ಎ.5 ರಿಂದ ಶ್ರೀ ಮನ್ಮಹಾರಥೋತ್ಸವದ ಸಂಭ್ರಮ: ಸಾವಿರಾರು ಭಕ್ತರ ವೈಭವದ ಸಂಗಮ

ಕುಂದಾಪುರ: ಕಮಲಶಿಲೆಯಲ್ಲಿ ನೆಲೆಗೊಂಡಿರುವ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಶ್ರೀ ಮನ್ಮಹಾರಥೋತ್ಸವವು ಏಪ್ರಿಲ್ 5ರಿಂದ 10 ರವರೆಗೆ ಭಕ್ತಿಭಾವದಿಂದ ನಡೆಯಲಿದೆ. ದೇವಾಲಯದ ಪ್ರಮುಖ ಉತ್ಸವವಾಗಿರುವ ಮಹಾರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳು, ಪೂಜೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.ಇದರಲ್ಲಿಯೇ ಮುಖ್ಯ ಆಕರ್ಷಣೆಯಾಗಿರುವ ರಥೋತ್ಸವವು ಏಪ್ರಿಲ್ 8ರಂದು ಜರುಗಲಿದ್ದು, ಈ ದಿನ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸುವ ಸಾಧ್ಯತೆ ಇದೆ. ದೇವಾಲಯ ಆಡಳಿತ ಮಂಡಳಿ ಎಲ್ಲಾ ಭಕ್ತರನ್ನು ಉತ್ಸವದಲ್ಲಿ ಭಾಗವಹಿಸಿ […]
ಯಕ್ಷಗಾನ ರಂಗದ ಶ್ರೇಷ್ಠ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ

ಕುಂದಾಪುರ: ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ (89) ಬುಧವಾರ ನಿಧನರಾದರು ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ನಾಟಕ ಕಲಾವಿದರಾಗಿ ರಘುರಾಮ ಶೆಟ್ಟಿ ಅವರು ಯಕ್ಷಗಾನ ವಲಯದಲ್ಲಿ ಕಂದಾವರದವರು ಎಂಬ ಹೆಸರಿನಿಂದ ಪ್ರಸಿದ್ಧರಾಗಿದ್ದರು. ಕಂಡ್ಲೂರು ನೇತಾಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ-ಶಿಕ್ಷಕರಾಗಿ, ಮುಖ್ಯೋಪಾಧ್ಯರಾಗಿ 35 ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದರು. ‘ಚೆಲುವೆ ಚಿತ್ರಾವತಿ’, ‘ರತಿ ರೇಖಾ’, ‘ಶ್ರೀ ದೇವಿ ಬನಶಂಕರಿ’ ಮತ್ತು‘ಶೂದ್ರ ತಪಸ್ವಿನಿ’ ಅವರು ಬರೆದ ಪ್ರಮುಖ ಯಕ್ಷಗಾನ ಪ್ರಸಂಗಗಳಾಗಿವೆ. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು […]
ಶ್ರೀ ಸಾಯಿ ಈಶ್ವರ್ ಗುರೂಜಿಗಳಿಂದ ನೂರೆಂಟು ಮಠ, ಮಂದಿರಗಳಿಗೆ ಭೇಟಿ; ಮೂಡುಬಿದ್ರೆಯ ಜೈನಮಠದಲ್ಲಿ ಯಾತ್ರೆಗೆ ಚಾಲನೆ

ಕಟಪಾಡಿ: ರಾಷ್ಟ-ಧರ್ಮ ಹಾಗೂ ಯೋಧರು ಅವರ ಕುಟುಂಬದ ರಕ್ಷಣೆ ಹಿಂದೂಗಳ ಒಗ್ಗಟ್ಟು ಹಾಗೂ ಹಿಂದೂಗಳ ರಕ್ಷಣೆಯೊಂದಿಗೆ ಶ್ರೀ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ ಗುರೂಜಿಯವರ ಮಹಾ ಸಂಕಲ್ಪ ಸತ್ಯ – ಧರ್ಮದ ನಾಡಿನಲ್ಲಿ ಜ್ಞಾನದ ನಡೆ ಎಂಬ ಕರ್ಯಕ್ರಮವನ್ನು ಇಂದು ಜಗದ್ಗುರು ಡಾ. ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯ ವರ್ಯ ಮಹಾ ಸ್ವಾಮೀಜಿ ಶ್ರೀ ದಿಗಂಬರ ಜೈನಮಠ ಮೂಡುಬಿದಿರೆಯಲ್ಲಿ ಪ್ರಥಮ ದಿನದ ನಡೆಗೆ ಚಾಲನೆ ನೀಡಿ 108 ದಿನಗಳ ಯಾತ್ರೆ ಯಶಸ್ವಿಯಾಗುವಂತೆ ಪ್ರಾರ್ಥನೆ ಮಾಡಿದರು.
ಬದುಕಿಗೆ ಬಲ, ಯುಗಾದಿಯ ಫಲ: ಯುಗಾದಿ ವಿಶೇಷ ಬರಹ

ಯುಗಾದಿ ಎಂದರೆ ಹೊಸತರ ಸಮ್ಮಿಶ್ರಣ. ಈ ಯುಗಾದಿಯಲ್ಲಿ ಫಲವೂ ಸಿಗುತ್ತದೆ. ಯುಗಾದಿಯಂದು ಪಂಚಾಂಗ ಶ್ರವಣ ಮಾಡುವುದರಿಂದ ಹೆಚ್ಚಿನ ಪ್ರಯೋಜನವಿದೆ. ಪಂಚ ಎಂದರೆ ಐದು, ಅಂಗ ಎಂದರೆ ಭಾಗ, ವಾರ, ತಿಥಿ, ಯೋಗ, ನಕ್ಷತ್ರ ಮತ್ತು ಕರಣ ಇವೇ ಆ ಐದು ಅಂಗಗಳು. ಈ ಐದು ಭಾಗಗಳಿಂದ ಕೂಡಿದ ವಿವರವೇ ಪಂಚಾಂಗ, ಪಂಚ + ಅಂಗ = ಪಂಚಾಂಗ, ಇವುಗಳಲ್ಲಿ ಒಂದು ಭಾಗವನ್ನು ಬಿಟ್ಟರೂ ಪಂಚಾಂಗ ಶಾಸ್ತ್ರ ಪೂರ್ಣವಾಗುವುದಿಲ್ಲ. ಇದು ಐದು ಬೆರಳುಗಳ ಪೂರ್ಣಹಸ್ತವಿದ್ದಂತೆ. ಯಾವುದೇ ಶುಭ ಕಾರ್ಯವನ್ನು […]