ಸೆ.7ರಂದು ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಶ್ರೀ ವಿನಾಯಕ ಚತುರ್ಥಿ.

ಕುಂದಾಪುರ: ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಶ್ರೀ ವಿನಾಯಕ ಚತುರ್ಥಿ ಹಾಗೂ ಅಷ್ಟೋತ್ತರ ಸಹಸ್ರ ನಾಲಿಕೇರ ಗಣಯಾಗವು ಸೆ.7ರಂದು ಸಂಪ್ರದಾಯದಂತೆ ಜರಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸೆ.6ರಂದು ಪೂರ್ವಾಹ್ನ ಗಂಟೆ 10 ಗಂಟೆಗೆ ಉಪ್ಪಿನಂಗಡಿ, ರಾಮಕುಂಜ ಪುತ್ತೂರು ಶ್ರೀ ಗುರುಸಾರ್ವಭೌಮ ಮಹಿಳಾ ಭಜನ ಮಂಡಳಿ ಇವರಿಂದ ಭಜನೆ, ಮಧ್ಯಾಹ್ನ ಗಂಟೆ 3ರಿಂದ 5ರ ತನಕ ಕುಂಭಾಶಿ ಆನೆಗುಡ್ಡೆ ಶ್ರೀ ವಿಶ್ವೇಶ್ವರ ಮಹಿಳಾ ಭಜನ ಮಂಡಳಿಯವರಿಂದ ಭಜನೆ ಹಾಗೂ ಸಂಜೆ ಗಂಟೆ 5ರಿಂದ ಮಂಗಳೂರಿನ ಕೋಡಿಕಲ್‌ ಸರಯೂ […]

ಉಡುಪಿ‌ ಕೃಷ್ಣನೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಕಣ್ಮನ ಸೆಳೆಯಲಿದೆ ಸಾಂಸ್ಕೃತಿಕ-ಧಾರ್ಮಿಕ ಕಾರ್ಯಕ್ರಮಗಳು.

ಉಡುಪಿ: ಕೃಷ್ಣನೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಗರಿಗೆದರಿದೆ. ಶ್ರೀ ಕೃಷ್ಣಮಠದಲ್ಲಿ ಕಣ್ಮನ ಸೆಳೆಯುವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಕೃಷ್ಣಾಷ್ಟಮಿ ಆಚರಣೆ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಸಕಲ ಸಿದ್ಧತಾ ಕಾರ್ಯ ವಿಜೃಂಭಣೆಯಿಂದ ನಡೆಯುತ್ತಿದೆ. ಇಂದು (ಆ.26) ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆಗಳು, ವಿವಿಧ ಧಾರ್ಮಿಕ ಕಾರ್ಯಕ್ರಮ, ವಿಶೇಷ ಪೂಜೆ, ರಾತ್ರಿ ಅರ್ಘ್ಯಪ್ರದಾನ ನೆರವೇರಲಿದೆ. ಹಾಗೂ ರಥಬೀದಿಯಲ್ಲಿ ಆ. 27ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದೆ. ಕೃಷ್ಣ ಪ್ರಸಾದಕ್ಕೆ ಅಗತ್ಯ ಇರುವ ಉಂಡೆ, ಚಕ್ಕುಲಿ ತಯಾರಿಸಲಾಗಿದೆ. […]

ಕಾರ್ಕಳ ಶ್ರೀ ವೆಂಕಟರಮಣ ದೇವಳದ ರಥೋತ್ಸವ: ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಉಡುಪಿ: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮೇ 9 ರಿಂದ 14 ರ ವರೆಗೆ ರಥೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಮೇ 13 ರಂದು ಸಂಜೆ 4 ಗಂಟೆಯಿಂದ ಮೇ 14 ರ ಬೆಳಗ್ಗೆ 6 ಗಂಟೆಯವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ. ಪರ್ಯಾಯ ಮಾರ್ಗದ ವಿವರ: ಘನವಾಹನಗಳು ಬಂಗ್ಲೆಗುಡ್ಡೆ- ಹಿರಿಯಂಗಡಿ- ಪುಲ್ಕೆರಿ ಮಾರ್ಗವಾಗಿ […]

ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಶ್ರೀಮನ್ಮಹಾರಥೋತ್ಸವ.

ಮಹತೋಭಾರ ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ವಾರ್ಷಿಕ ಮಹೋತ್ಸವದ ಅಂಗವಾಗಿ ಗುರುವಾರ ಶ್ರೀ ಮನ್ಮಹಾರಥೋತ್ಸವ ನಡೆಯಿತು . ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ರಥಾರೋಹಣ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು. ನಾಲ್ಕು ಸಾವಿರಕ್ಕೂ ಅಧಿಕ ಮಂದಿ ಅನ್ನ ಪ್ರಸಾದ ಸ್ವೀಕರಿಸಿದರು. ಸಂಜೆ ಸ್ಯಾಕ್ಸೋಫೋನ್ ಕಛೇರಿ, ರಾತ್ರಿ ಶ್ರೀ ಮನ್ಮಹಾರಥೋತ್ಸವ, ಉತ್ಸವ ಬಲಿ, ಮಹಾರಂಗ ಪೂಜೆ, ಶ್ರೀ ಭೂತ ಬಲಿ, ಶಯನೋತ್ಸವ ನಡೆಯಿತು‌. ಪರ್ಯಾಯ ತಂತ್ರಿ ವೇ.ಮೂ. ಬೆಟ್ಟಿಗೆ ವೆಂಕಟರಾಜ ತಂತ್ರಿಗಳ ಮಾರ್ಗದರ್ಶನದಲ್ಲಿ ಸರದಿ ಅರ್ಚಕರಾದ ವೇ.ಮೂ ಗುರುರಾಜಭಟ್ ಅರ್ಚಕತ್ವದಲ್ಲಿ, […]

ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನ: ಶ್ರೀನಾಗದೇವರ ಪುನಃಪ್ರತಿಷ್ಠಾಪನಾ ಬ್ರಹ್ಮಕಲಶ ಸಂಪನ್ನ

ಬ್ರಹ್ಮಾವರ: ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನದ ಸಮೀಪ ಸೀತಾ ನದಿಯ ತಟದಲ್ಲಿರುವ ಪಂಚಮೀಕಾನು ನಾಗಸನ್ನಿಯಲ್ಲಿ ಗುರುವಾರ ಶ್ರೀನಾಗದೇವರ ಪುನಃಪ್ರತಿಷ್ಠಾಪನಾ ಬ್ರಹ್ಮಕಲಶ ಶ್ರದ್ಧಾಭಕ್ತಿಯಿಂದ ನಡೆಯಿತು. ಶ್ರೀ ನಾಗದೇವರಿಗೆ ಬ್ರಹ್ಮಕಲಾಭಿಷೇಕ, ಮಹಾಪೂಜೆ ಹಾಗೂ ನಾಗಪಾತ್ರಿ ವೈ. ಲಕ್ಷ್ಮೀನಾರಾಯಣ ಮಧ್ಯಸ್ಥ ಅವರಿಂದ ನಾಗದೇವರ ಸಂದರ್ಶನ ನಡೆಯಿತು. ನಂತರ ಪಲ್ಲಪೂಜೆ ಮತ್ತು ಮಹಾ ಅನ್ನಸಂತರ್ಪಣೆ ಜರಗಿತು. ಅರ್ಚಕರಾದ ಚಂದ್ರಶೇಖರ ಅಡಿಗ, ಕೃಷ್ಣ ಅಡಿಗ, ರಾಘವೇಂದ್ರ ಅಡಿಗರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ […]