ಉಡುಪಿ: ಎ.11ರಂದು ಕಟಪಾಡಿ ಎಸ್ವಿಎಸ್ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ “ಶ್ರೀನಿವಾಸ ಕಲ್ಯಾಣೋತ್ಸವ”

ಉಡುಪಿ: ಕಟಪಾಡಿ ಎಸ್ವಿಎಸ್ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಏ. 11ರಂದು ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ತಿರುಪತಿಯಿಂದಲೇ ದೇವರ ವಿಗ್ರಹ ತಂದು, ತಿರುಪತಿ ತಿರುಮಲ ದೇವಸ್ಥಾನ ಸಮಿತಿಯ ಪ್ರಧಾನ ಅರ್ಚಕರಿಂದಲೇ ಕಲ್ಯಾಣೋತ್ಸವದ ಧಾರ್ಮಿಕ ಅನುಷ್ಠಾನ ಜರಗಲಿವೆ. ಮಧ್ಯಾಹ್ನ 3.30ಕ್ಕೆ ಕಟಪಾಡಿ ಪೇಟೆಯಲ್ಲಿ ಶ್ರೀನಿವಾಸ ದೇವರನ್ನು ಸ್ವಾಗತಿಸಿ, ಕಟಪಾಡಿ ಪೇಟೆಯಿಂದ ಕಲ್ಯಾಣ ಮಂಟಪದ ವೇದಿಕೆಗೆ ಮೆರವಣಿಗೆಯಲ್ಲಿ ಕರೆತರಲಾಗುವುದು’ ಎಂದರು. ಕೆ. ಕೃಷ್ಣಮೋಹನ್ ಪೈ ಯುಎಸ್ಎ ಅವರ ಸಂಕಲ್ಪದಂತೆ ಕಟಪಾಡಿ ವಿಜಯಾ ಪೈ, ಪುರುಷೋತ್ತಮ ಪೈ ಹಾಗೂ ಕುಟುಂಬಸ್ಥರ ವತಿಯಿಂದ ಕಟಪಾಡಿ […]
ನೀವೂ ತಿರುಪತಿಗೆ ಹೋಗುವ ಪ್ಲಾನ್ ಮಾಡ್ತಿದೀರಾ? ಹಾಗಾದ್ರೆ ಈ ವಿಷಯ ತಿಳಿದಿರಲೇಬೇಕು- ದರ್ಶನದ ಅವಧಿ ಇಲ್ಲಿದೆ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗೋದು ಭಗವದ್ಭಕ್ತರಿಗೆ ಪುಣ್ಯದ ಕೆಲಸ. ಜೀವಮಾನದಲ್ಲಿ ಒಮ್ಮೆಯಾದರೂ ತಿರುಪತಿ ತಿಮ್ಮಪ್ಪನ ದರ್ಶನ ಮಾಡುವ ಆಸೆ ಇರುತ್ತದೆ. ಅದರೊಂದಿಗೆ ಪ್ರತಿವರ್ಷವೂ ಇಲ್ಲಿಗೆ ಭೇಟಿ ನೀಡುವ ಭಕ್ತರೂ ಹಲವರಿರುತ್ತಾರೆ. ಇದೀಗ ಬೇಸಗೆ ರಜೆ ಪ್ರಾರಂಭವಾಗಿದೆ. ಹಾಗಾಗಿ ತಿರುಪತಿಗೆ ಹೋಗುವವರ ಸಂಖ್ಯೆಯೂ ದೊಡ್ಡದಿದೆ. ನೀವೂ ತಿರುಪತಿಗೆ ಹೋಗಲು ಪ್ಲಾನ್ ಮಾಡ್ತಿದೀರಾದ್ರೆ ಈ ವಿಷಯ ನಿಮ್ಮ ಗಮನದಲ್ಲಿರಲಿ ಏ.5 ಭಾನುವಾರ ಒಂದೇ ದಿನದಲ್ಲಿ 83,271 ಭಕ್ತರು ತಿಮ್ಮಪ್ಪನ ದರ್ಶನ ಮಾಡಿರುತ್ತಾರೆ. 25,018 ಜನರು ಕೆಲ ಸೇವೆಗಳಲ್ಲೂ ಭಾಗವಹಿಸಿದ್ರು. ಹೋದ […]
ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇಗುಲ- ಶ್ರೀ ಮುಖ್ಯಪ್ರಾಣ ದೇವರಿಗೆ ಬ್ರಹ್ಮಕುಂಭಾಭಿಷೇಕ

ಉಡುಪಿ: ಇಂದ್ರಾಳಿಯ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಗುಡಿಯಲ್ಲಿ ಭಾನುವಾರ ಅತ್ಯಂತ ವೈಭವದಿಂದ ಬ್ರಹ್ಮಕಲಶೋತ್ಸವ ನೇರವೇರಿತು. ಅಷ್ಟಬಂಧ ಸಹಿತವಾಗಿ ಪುನಃ ಪ್ರತಿಷ್ಠಾಪಿತ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರಿಗೆ ವೇದಮೂರ್ತಿ ಪುತ್ತೂರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ಗೋಪಾಲಕೃಷ್ಣ ಉಪಾಧ್ಯಾಯರ ಉಪಸ್ಥಿತಿಯಲ್ಲಿ ಬೆಳಿಗ್ಗೆ ಬ್ರಹ್ಮಕುಂಭಾಭಿಷೇಕ ನೆರವೇರಿಸಲಾಯಿತು. ಬೆಳಿಗ್ಗೆ ಗಣಹೋಮ, ಪ್ರಧಾನ ಕಲಾ ಸಾನಿಧ್ಯ ಹೋಮ, 1001 ಕಲಶಾರಾಧನೆ, ಪ್ರಸನ್ನ ಪೂಜೆ, ಮಹಾಪೂಜೆ, ಪಲ್ಲ ಪೂಜೆ ಜರುಗಿತು. ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು. […]
ಕಮಲಶಿಲೆಯ ಬ್ರಾಹ್ಮೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರದಲ್ಲಿ ಎ.5 ರಿಂದ ಶ್ರೀ ಮನ್ಮಹಾರಥೋತ್ಸವದ ಸಂಭ್ರಮ: ಸಾವಿರಾರು ಭಕ್ತರ ವೈಭವದ ಸಂಗಮ

ಕುಂದಾಪುರ: ಕಮಲಶಿಲೆಯಲ್ಲಿ ನೆಲೆಗೊಂಡಿರುವ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಶ್ರೀ ಮನ್ಮಹಾರಥೋತ್ಸವವು ಏಪ್ರಿಲ್ 5ರಿಂದ 10 ರವರೆಗೆ ಭಕ್ತಿಭಾವದಿಂದ ನಡೆಯಲಿದೆ. ದೇವಾಲಯದ ಪ್ರಮುಖ ಉತ್ಸವವಾಗಿರುವ ಮಹಾರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳು, ಪೂಜೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.ಇದರಲ್ಲಿಯೇ ಮುಖ್ಯ ಆಕರ್ಷಣೆಯಾಗಿರುವ ರಥೋತ್ಸವವು ಏಪ್ರಿಲ್ 8ರಂದು ಜರುಗಲಿದ್ದು, ಈ ದಿನ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸುವ ಸಾಧ್ಯತೆ ಇದೆ. ದೇವಾಲಯ ಆಡಳಿತ ಮಂಡಳಿ ಎಲ್ಲಾ ಭಕ್ತರನ್ನು ಉತ್ಸವದಲ್ಲಿ ಭಾಗವಹಿಸಿ […]
ಯಕ್ಷಗಾನ ರಂಗದ ಶ್ರೇಷ್ಠ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ

ಕುಂದಾಪುರ: ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ (89) ಬುಧವಾರ ನಿಧನರಾದರು ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ನಾಟಕ ಕಲಾವಿದರಾಗಿ ರಘುರಾಮ ಶೆಟ್ಟಿ ಅವರು ಯಕ್ಷಗಾನ ವಲಯದಲ್ಲಿ ಕಂದಾವರದವರು ಎಂಬ ಹೆಸರಿನಿಂದ ಪ್ರಸಿದ್ಧರಾಗಿದ್ದರು. ಕಂಡ್ಲೂರು ನೇತಾಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ-ಶಿಕ್ಷಕರಾಗಿ, ಮುಖ್ಯೋಪಾಧ್ಯರಾಗಿ 35 ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದರು. ‘ಚೆಲುವೆ ಚಿತ್ರಾವತಿ’, ‘ರತಿ ರೇಖಾ’, ‘ಶ್ರೀ ದೇವಿ ಬನಶಂಕರಿ’ ಮತ್ತು‘ಶೂದ್ರ ತಪಸ್ವಿನಿ’ ಅವರು ಬರೆದ ಪ್ರಮುಖ ಯಕ್ಷಗಾನ ಪ್ರಸಂಗಗಳಾಗಿವೆ. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು […]