ಶ್ರೀರಾಘವೇಂದ್ರ ಮಠದಲ್ಲಿ ಶಿರೂರು ಮಠದ ಶ್ರೀಲಕ್ಷ್ಮೀವರತೀರ್ಥರ 4 ನೇ ವರ್ಷದ ಆರಾಧನೆ

ಉಡುಪಿ ಶ್ರೀಶಿರೂರು ಮಠದ ಯತಿಗಳಾದ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 4 ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ರಥಬೀದಿಯಲ್ಲಿರುವ ನಂಜನಗೂಡು ಶ್ರೀರಾಘವೇಂದ್ರ ಮಠದಲ್ಲಿ ಶಾಸ್ತ್ರೋಕ್ತವಾಗಿ ವೈಭವದಿಂದ ಜರಗಿತು. ಮುಂಜಾನೆ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಉದ್ದಿಶ್ಯ ಶ್ರೀಪಾದರ ಪೂರ್ವಾಶ್ರಮದ ಕುಟುಂಬಿಕರು ಹಾಗೂ ಭಕ್ತವೃಂದದ ವತಿಯಿಂದ ಶ್ರೀರಾಘವೇಂದ್ರಗುರುಸಾರ್ವಭೌಮರಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಲಾಯಿತು. ವೇದಮೂರ್ತಿ ಶ್ರೀಸುಬ್ರಹ್ಮಣ್ಯ ಆಚಾರ ಮತ್ತು ಬಳಗದವರಿಂದ ಪವಮಾನ ಕಲಶಾಭಿಷೇಕ ಹೋಮ ಹಾಗೂ ವಿರಜಾ ಹೋಮ ಜರಗಿತು. ಶ್ರೀಲಕ್ಷ್ಮೀವರತೀರ್ಥಶ್ರೀಪಾದರ ಮೃತ್ತಿಕಾವೃಂದಾವನಕ್ಕೆ ಶ್ರೀಕೃಷ್ಣಮುಖ್ಯ ಪ್ರಾಣದೇವರ ಹಾಗೂ ಶ್ರೀ ರಾಘವೇಂದ್ರಗುರುಗಳ ತೀರ್ಥ, ಪಂಚಾಮೃತ […]

ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿ ಇಲಾಖೆ: ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನ

ಉಡುಪಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಸಂಸ್ಥೆಗಳ 7 ಅಧಿಸೂಚಿತ ಸಂಸ್ಥೆಗಳಿಗೆ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಸಾರ್ವಜನಿಕರು ಹಾಗೂ ಭಕ್ತಾಧಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಧಿಸೂಚಿತ ಸಂಸ್ಥೆಗಳು: ಉಡುಪಿ ತಾಲೂಕು ಕುಂಜೂರು ಶ್ರೀ ದುರ್ಗಾದೇವಿ ದೇವಸ್ಥಾನ ಹಾಗೂ ಮರ್ಣೆ ಶ್ರೀ ಅಬ್ಬಗದಾರಗ ಬೂತ ದೇವಸ್ಥಾನ, ಕುಂದಾಪುರದ ಹಾರ್ದಳ್ಳಿ- ಮಂಡಳ್ಳಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ವಕ್ವಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಕಂಬದಕೋಣೆ ಶ್ರೀ ಕೊಕ್ಕೇಶ್ವರ […]

ಮರವಂತೆ: ಜುಲೈ 28ರಂದು ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ “ಕರ್ಕಾಟಕ ಅಮಾವಾಸ್ಯೆ ಜಾತ್ರೆ”

ಕುಂದಾಪುರ: ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನ ಮರವಂತೆ ಬೈಂದೂರು ತಾಲೂಕುನಲ್ಲಿ ವರ್ಷಂಪ್ರತಿ ಶ್ರೀ ವರಾಹ ದೇವರ ಸನ್ನಿಧಿಯಲ್ಲಿ ನಡೆಯಲಿರುವ “ಕರ್ಕಾಟಕ ಅಮಾವಾಸ್ಯೆ ಜಾತ್ರೆ” ಯು ಇದೇ ತಾ.28-07-2022ನೇ ಗುರುವಾರ ಜರುಗಲಿರುವ ಪ್ರಯುಕ್ತ ಭಕ್ತಾದಿಗಳಾದ ತಾವೆಲ್ಲರೂ ಆಗಮಿಸಿ, ನಮ್ಮೊಂದಿಗೆ ಕಾರ್ಯಕ್ರಮದಲ್ಲಿ ಸಹಕರಿಸಿ, ಶ್ರೀದೇವರ ಸಿರಿಮುಡಿ ಗಂಧ- ಪ್ರಸಾದ ಸ್ವೀಕರಿಸಿ, ಕೃತಾರ್ಥರಾಗಬೇಕಾಗಿ ಅಪೇಕ್ಷಿಸುವ ದೇವಸ್ಥಾನದ ಅರ್ಚಕರು ಉಪಾದಿವಂತರು, ನೌಕರ ವರ್ಗ ಮತ್ತು ಆಸುಪಾಸಿನ ಊರಿನ ಗ್ರಾಮಸ್ಥರು ಸತೀಶ ಎಂ. ನಾಯಕ ವ್ಯವಸ್ಥಾಪನಾ ಸಮಿತಿಯ […]

ಗ್ರಾಮಾಭಿವೃದ್ದಿಯ ಹರಿಕಾರ ಧರ್ಮದರ್ಶಿ “ಶ್ರೀ ವೀರೇಂದ್ರ ಹೆಗ್ಗಡೆ”ಯವರಿಗೆ ರಾಜ್ಯಸಭೆ ನಾಮಾಂಕನದ ಗೌರವ

ನವೆಂಬರ್ 25, 1948 ರಂದು ಪ್ರಕೃತಿಯ ಒಡಲಲ್ಲಿ ಧರ್ಮದೇವತೆ ಶ್ರೀ ಮಂಜುನಾಥ ನೆಲೆಯಾದ ಪವಿತ್ರ ಭೂಮಿಯಲ್ಲಿ ಜನನ. ಕಡು ಕುಗ್ರಾಮವಾದ ಹಳ್ಳಿಯಲ್ಲಿ ಸೌಕರ್ಯಗಳೇ ಇಲ್ಲದಿದ್ದ ಕಾಲವದು. ಕುಡುಮ ಎಂಬ ಪುಟ್ಟ ಹಳ್ಳಿಯನ್ನು ಧರ್ಮಸ್ಥಳವಾಗಿಸಿ ದೇಶ ವಿದೇಶದ ಭಕ್ತ ಸಾಗರ ಶ್ರೀ ಕ್ಷೇತ್ರಕ್ಕೆ ಹರಿದು ಬರುವಂತೆ ಮಾಡಿದ ಕೀರ್ತಿ ಶ್ರೀಯುತ ವೀರೇಂದ್ರ ಹೆಗ್ಗಡಿಯವರಿಗಲ್ಲದೆ ಬೇರಾರಿಗೂ ಸಲ್ಲುವುದಿಲ್ಲ. ತಂದೆ ರತ್ನವರ್ಮ ಹೆಗ್ಗಡೆಯವರು ನಿಧನರಾದಾಗ ವೀರೇಂದ್ರ ಹೆಗ್ಗಡೆಯವರು ಇನ್ನೂ ಹದಿಹರೆಯದ ಹುಡುಗ. ಎಳವೆಯಲ್ಲೇ ಕ್ಷೇತ್ರದ ಜವಾಬ್ದಾರಿಯನ್ನು ಹೆಗಲ ಮೇಲೆ ಹೊತ್ತ ಇವರು […]

ಶ್ರೀ ದುರ್ಗಾ ಆದಿ ಶಕ್ತಿ ಕ್ಷೇತ್ರ, ದೊಡ್ಡಣ್ಣಗುಡ್ಡೆ ಇದರ 16 ನೇ ಪ್ರತಿಷ್ಠಾ ವರ್ಧಂತಿ ಮಹೋತ್ಸವ

ಉಡುಪಿ: ಶ್ರಿ ಚಕ್ರಪೀಠ ಸುರಪೂಜಿತ, ಶ್ರೀ ದುರ್ಗಾ ಆದಿ ಶಕ್ತಿ ಕ್ಷೇತ್ರ, ದೊಡ್ಡಣ್ಣಗುಡ್ಡೆ ಇದರ 16 ನೇ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ದಿನಾಂಕ 15 ಮೇ ರವಿವಾರದಿಂದ 17 ಮೇ ಮಂಗಳವಾರದವರೆಗೆ ನಡೆಯಲಿದೆ. ಮೇ 15 ರವಿವಾರದಂದು ಸಂಜೆ 6 ರಿಂದ ದೇವತಾ ಪ್ರಾರ್ಥನೆ, ಉಗ್ರಾಣ ಮುಹೂರ್ತ, ವಾಸ್ತು ರಾಕ್ಷೋಘ್ನಾದಿ ಪ್ರಕ್ರಿಯೆ, ಆದಿವಾಸ ಪ್ರಕ್ರಿಯೆ ಜರುಗಲಿದೆ. ಮೇ16 ಸೋಮವಾರದಂದು ಬೆಳಿಗ್ಗೆ 7ರಿಂದ ಸಪರಿವಾರ ದೇವರುಗಳ ಪ್ರಧಾನ ಹೋಮ, ಕಲಶಾಭಿಷೇಕ. ಬೆಳಿಗ್ಗೆ 9.32ರ ಮಿಥುನ ಲಗ್ನ ಸುಮುಹೂರ್ತದಲ್ಲಿ ಶ್ರೀ […]