ಎಲ್ಲೂರು ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನ: ಎ.19 ರಂದು ಶ್ರೀ ಮನ್ಮಹಾರಥೋತ್ಸವ

ಪಡುಬಿದ್ರಿ: ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಎಲ್ಲೂರು ಇದರ ಜಾತ್ರಾ ಮಹೋತ್ಸವವು ಎಪ್ರಿಲ್ 21ರ ವರೆಗೆ ಜರಗಲಿದೆ. ಶ್ರೀ ಮನ್ಮಹಾರಥೋತ್ಸವ: ತಾ.19 ರಂದು ಮಂಗಳವಾರ ಮಧ್ಯಾಹ್ನ 11.00ಕ್ಕೆ ರಥಾರೋಹಣ, ಶ್ರೀ ಮನ್ಮಹಾರಥೋತ್ಸವ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಸಂಜೆ ಸ್ಯಾಕ್ಸೋಫೋನ್ ಕಚೇರಿ, ರಾತ್ರಿ 8:30ಕ್ಕೆ ರಥೋತ್ಸವ, ಉತ್ಸವ ಬಲಿ, ಮಹಾರಂಗಪೂಜೆ, ಶ್ರೀ ಭೂತಬಲಿ, ಶಯನೋತ್ಸವ. ತಾ.20 ರಂದು ಬುಧವಾರ ಸೂರ್ಯೋದಯಕ್ಕೆ ಕವಾಟೋದ್ಘಾಟನೆ, ತುಲಾಭಾರ ಸೇವೆ, ಉತ್ಸವ ಬಲಿ, ಸಂಜೆ 6:30ಕ್ಕೆ ಅವಭೃತ ಹೊರಡುವುದು, ಅವಭೃತ, ಗಂಧ […]
ಹಿರಿಯಡಕ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ: ಎ.16 ರಂದು ಸಿರಿಜಾತ್ರೆ; ಎ.19 ರಂದು ಮನ್ಮಹಾರಥೋತ್ಸವ

ಹಿರಿಯಡಕ: ಉಡುಪಿ ತಾಲೂಕು ಶ್ರೀ ಕ್ಷೇತ್ರ ಹಿರಿಯಡಕ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಎ.16 ರಿಂದ 21ರ ವರೆಗೆ ವೈಭವದ ಜಾತ್ರಾ ಮಹೋತ್ಸವ ಶ್ರೀ ವೀರಭದ್ರ ಸ್ವಾಮಿ ಸನ್ನಿಧಿಯಲ್ಲಿ ಸಾಂಪ್ರದಾಯದಂತೆ ಜರಗಲಿರುವುದು. ಧಾರ್ಮಿಕ ಕಾರ್ಯಕ್ರಮಗಳು: ತಾ.16 ರಂದು ಶನಿವಾರ ಗಂಟೆ 8.00ಕ್ಕೆ ಧ್ವಜಾರೋಹಣ, ಗಣಯಾಗ, ನವಕ ಪ್ರಧಾನ ಹೋಮ, ರಾತ್ರಿ ಗಂಟೆ 6.30 ರಿಂದ ಆರಾಧನಾ ಪೂಜೆ, ಪೂರ್ಣಿಮಾ ಉತ್ಸವ. ರಾತ್ರಿ 9 ಗಂಟೆಯಿಂದ ಹಾಲು ಹಬ್ಬ, ಸವಾರಿ ಬಲಿ, ಬ್ರಹ್ಮ ಮಂಡಲ, ಭೂತ ಬಲಿ. ತಾ.17 […]
ಉಡುಪಿ ಶ್ರೀಕೃಷ್ಣಮಠದಲ್ಲಿ ಸೌರಯುಗಾದಿ ಆಚರಣೆ

ಉಡುಪಿ: ಶ್ರೀಕೃಷ್ಣಮಠದಲ್ಲಿ ಸೌರಯುಗಾದಿಯ ಪ್ರಯುಕ್ತ ಶ್ರೀಕೃಷ್ಣ ಮುಖ್ಯಪ್ರಾಣದೇವರ ಉತ್ಸವ ನಡೆಯಿತು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು, ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಪರ್ಯಾಯ ಮಠದ ವತಿಯಿಂದ ಚಂದ್ರಶಾಲೆಯಲ್ಲಿ ಶ್ರೀಪಾದರಿಗೆ ಗಂಧಾದಿ ಉಪಚಾರಗಳೊಂದಿಗೆ ಗೌರವ ಕಾಣಿಕೆ ಸಲ್ಲಿಸಲಾಯಿತು. ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯ ಇವರು ಶುಭಕೃತ್ ನಾಮ […]
ಎ.15 ರಿಂದ 22: ನೀಲಾವರ ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

ಬ್ರಹ್ಮಾವರ: ನೀಲಾವರ ಮಹತೋಭಾರ ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ಎ.20 ರಂದು ಶ್ರೀಮನ್ಮಹಾರಥೋತ್ಸವ ನಡೆಯಲಿದೆ. ಎ.15 ರಂದು ಅಂಕುರಾರೋಪಣಾ, ಎಂ.16 ರಂದು ಧ್ವಜಾರೋಹಣ, ಸಿಂಹವಾಹನೋತ್ಸವ, ಭೇರಿತಾಡನ ಇತ್ಯಾದಿ, 17ರಂದು ಮಯೂರ ವಾಹನೋತ್ಸವ, 15ರಂದು ಹಂಸ ವಾಹನೋತ್ಸವ ಜರಗಲಿದೆ.ಎ.19ರಂದು ಗಜವಾಹನೋತ್ಸವ, 20ರಂದು ಬೆಳಿಗ್ಗೆ ರಥಾರೋಹಣ, ಮಧ್ಯಾಹ್ನ ಅನ್ನಸಂತರ್ಪಣೆ ಹಾಗೂ ಸಂಜೆ ರಥೋತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ನಾಡನ್ನು ಸುಭಿಕ್ಷಗೊಳಿಸಲು ಶಕ್ತಿ ಮೀರಿ ಪ್ರಯತ್ನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

ಉಡುಪಿ: ನಾಡನ್ನು ಮುನ್ನಡೆಸುವ ಅವಕಾಶ ದೊರೆತಿದೆ. ಭಗವಂತನಿಂದ ನಿಷ್ಠೆ ಪ್ರಾಮಾಣಿಕತೆ ಹಾಗೂ ವಿಶ್ವಾಸಕ್ಕೆ ಕುಂದುಬಾರದ ರೀತಿಯಲ್ಲಿ ಆಡಳಿತ ನಡೆಸುವುದಾಗಿ ಹಾಗೂ ನಾಡನ್ನು ಸುಭಿಕ್ಷ ಗೊಳಿಸಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ಇತ್ತರು. ಅವರು ಕುಂಜಿಬೆಟ್ಟಿನ ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾಗದೇವತೆಗೆ ವಿಶಿಷ್ಟ ಸ್ಥಾನವಿದೆ. ಅತ್ಯಂತ ಸೌಮ್ಯ ಹಾಗೂ ಭಯಂಕರ. ಪೂಜೆ ಮಾಡಿದ್ರೆ ವರ ತೊಂದರೆ ಕೊಟ್ಟರೆ ಪ್ರಾಣ ತೆಗೆಯುವ ಶಕ್ತಿ ಇದೆ. ಇದರ […]