ಪೆರ್ಡೂರಿನಲ್ಲಿ ಅನಂತಪದ್ಮನಾಭ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಸಂಪನ್ನ

ಪೆರ್ಡೂರು: ಮಹತೋಭಾರ ಶ್ರೀ ಅನಂತಪದ್ಮನಾಭ ಪೆರ್ಡೂರು ದೇವಸ್ಥಾನದ ವರ್ಷಾವಧಿ ಶ್ರೀಮನ್ಮಹಾರಥೋತ್ಸವ ಬುಧವಾರ ರಾತ್ರಿ ಸಂಭ್ರಮದಿಂದ ನಡೆಯಿತು. ಕ್ಷೇತ್ರದ ತಂತ್ರಿಗಳಾದ ಕೊರಂಗ್ರಪಾಡಿ ಕೆ.ಜಿ. ರಾಘವೇಂದ್ರ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಪ್ರಧಾನ ಹೋಮ, ಕಲಶಾಭಿಷೇಕ, ರಥಹೋಮ, ಕೊಡಿಪೂಜೆ, ಮಹಾಪೂಜೆ, ರಥಾರೋಹಣ ಹಾಗೂ ರಾತ್ರಿ ಶ್ರೀಮನ್ಮಮಹಾರಥೋತ್ಸವು ವಿಜೃಂಭಣೆಯಿಂದ ನಡೆಯಿತು. ರಾತ್ರಿ ದೀವಟಿಗೆ ಸಲಾಮ್, ಹಚ್ಚಡ ಸೇವೆ, ರಥಾವರೋಹಣ, ಪಲ್ಲಕ್ಕಿ ಸುತ್ತು, ತಪ್ಪೋತ್ಸವ, ನರ್ತನ ಸೇವೆ ಮೊದಲಾದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಸಗ್ರಿಯ ವಾಸುಕಿ ದೇಗುಲದ ನಾಗಮಂಡಲೋತ್ಸವದ ಪೂರ್ವಬಾವಿ ಚಪ್ಪರ ಮುಹೂರ್ತ

ಉಡುಪಿಯ ಸಗ್ರಿ ಶ್ರೀವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಪ್ರಿಲ್ 8ರಿಂದ ನಡೆಯಲಿರುವ ನವನಿರ್ಮಿತ ಶಿಲಾಮಯ ನಾಗದೇವರ ಗುಡಿ ಸಮರ್ಪಣೆ, ಬ್ರಹ್ಮಕಲಶೋತ್ಸವ ಹಾಗೂ ನಾಗಮಂಡಲೋತ್ಸವಕ್ಕೆ ಭೂಮಿ ಪೂಜಾ ಪೂರ್ವಕ ಚಪ್ಪರ ಮುಹೂರ್ತವು ಬುಧವಾರ ನೆರವೇರಿತು. ಪ್ರೇಮಚಂದ್ರ ಐತಾಳ್ ನೇತೃತ್ವದಲ್ಲಿ ಪೂಜೆ ನೆರವೇರಿಸಲಾಯಿತು. ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಎನ್. ಪ್ರಸನ್ನಕುಮಾರ್ ರಾವ್, ಉಡುಪಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ನಿಟ್ಟೂರು ಬಾಲಕೃಷ್ಣ ಶೆಟ್ಟಿ, ನಗರಸಭಾ ಸದಸ್ಯರಾದ ಗಿರಿಧರ ಆಚಾರ್ಯ, ಗೀತಾ ಶೇಟ್, ಮುಖ್ಯ ಅತಿಥಿಗಳಾಗಿ […]

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

ಪೆರ್ಡೂರು: ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನ ಶ್ರೀ ಕ್ಷೇತ್ರ ಪೆರ್ಡೂರು ಇದರ ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಮಾ.19 ರ ವರೆಗೆ ನಡೆಯಲಿದೆ. ಮಾರ್ಚ್15 ಮಂಗಳವಾರ ಬೆಳಗ್ಗೆ ಪ್ರಧಾನಹೋಮ, ಕಲಶಾಭಿಷೇಕ. ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ. ರಾತ್ರಿ ದೀವಟಿಗೆ‌ ಸೇವೆ, ಉತ್ಸವ ಬಲಿ, ವಸಂತೋತ್ಸವ, ಬೆಳ್ಳಿಪಾಲಕಿ, ಚಂದ್ರಮಂಡಲ ರಥ, ಇಡಿಗಾಯಿ, ಓಲಗಮಂಟಪದಲ್ಲಿ ಪೂಜೆ, ಅಷ್ಟಾವಧಾನ ಸೇವೆಗಳು ಮಹಾಪೂಜೆ ನಿತ್ಯಬಲಿ, ಸವಾರಿ ಬಲಿ, ಕಟ್ಟೆಪೂಜೆ ಭುಜಂಗ ಬಲಿ. ಶ್ರೀ ಮನ್ಮಹಾರಥೋತ್ಸವ: ಮಾರ್ಚ್ 16 ಬುಧವಾರ ಬೆಳಿಗ್ಗೆ ಪ್ರಧಾನ ಹೋಮ, ಕಲಶಾಭಿಷೇಕ, […]

ಬಿಹಾರದ ಅಂತಾರಾಷ್ಟ್ರೀಯ ಧರ್ಮ ಸಮ್ಮೇಳನದಲ್ಲಿ ಪೇಜಾವರ ಶ್ರೀ

ವಿಶಿಷ್ಟಾದ್ವೈತ ಸಿದ್ಧಾಂತ ಪ್ರತಿಷ್ಠಾಪನಾಚಾರ್ಯ ಜಗದ್ಗುರು ಶ್ರೀರಾಮಾನುಜಾಚಾರ್ಯರ ಜನ್ಮಸಹಸ್ರಾಬ್ಧ ಪ್ರಯುಕ್ತ ಬಿಹಾರದ ಬಕ್ಸರ್ ನಲ್ಲಿ ಶ್ರೀ ದೇವಭೂಮಿ ವಾಮನಾಶ್ರಮದಲ್ಲಿ ನಡೆದ ಅಂತಾರಾಷ್ಟ್ರೀಯ ಧರ್ಮ ಸಮ್ಮೇಳನದಲ್ಲಿ ಶ್ರೀಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗುರುವಾರ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿ ಧರ್ಮಸಂದೇಶ ನೀಡಿದರು. ಶ್ರೀ ಜೀಯರ್ ಸ್ವಾಮೀಜಿ, ಶ್ರೀ ಅಯೋಧ್ಯಾನಾಥ ಸ್ವಾಮೀಜಿ, ಶ್ರೀಧರಾಚಾರ್ಯ ಸ್ವಾಮೀಜಿ ಮೊದಲಾದವರ ನೇತೃತ್ವದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ದೇಶಾದ್ಯಂತದಿಂದ ಹಾಗೂ ವಿದೇಶಗಳಿಂದಲೂ ನೂರಾರು ಸಾಧು ಸಂತರು ಮಠಾಧಿಪತಿಗಳು, ಧಾರ್ಮಿಕ ಮುಖಂಡರು ಭಾಗವಹಿಸಿ ಧರ್ಮ ಚಿಂತನ- ಮಂಥನ […]

ಉಡುಪಿ: ಏ.2ರಿಂದ 10ರ ವರೆಗೆ ಕನ್ನರ್ಪಾಡಿ ಜಯದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಉಡುಪಿ: ಇಲ್ಲಿನ ಇತಿಹಾಸ ಪ್ರಸಿದ್ಧ ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವವು ಏಪ್ರಿಲ್ 2 ರಿಂದ 10ರ ವರೆಗೆ ದೇವಸ್ಥಾನದ ಸನ್ನಿಧಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಉಡುಪಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರೂ ಆಗಿರುವ ಜೀರ್ಣೋದ್ಧಾರ ಸಮಿತಿ‌ಯ ಕೋಶಾಧಿಕಾರಿ ಕೆ. ಕೃಷ್ಣಮೂರ್ತಿ‌ ಆಚಾರ್ಯ ಮಾಹಿತಿ ನೀಡಿದರು. ಪುತ್ತೂರು ಶ್ರೀಶ ತಂತ್ರಿಗಳ ನೇತೃತ್ವದಲ್ಲಿ ಶ್ರೀದೇವಿಗೆ ಬ್ರಹ್ಮಕಲಶಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಏ.2 ರಂದು ಬೆಳಿಗ್ಗೆ ತೋರಣ ಮುಹೂರ್ತ, ಉಗ್ರಾಣ […]