ಕಾರ್ಕಳ ಉತ್ಸವಕ್ಕೆ ರಂಗೇರಿ ನಿಂತಿದೆ ಶಿಲ್ಪಕಾಶಿ ಕಾರ್ಕಳ: ಎಷ್ಟೆಲ್ಲಾ ಕೆಲಸ ಆಗಿದೆ ಗೊತ್ತಾ?

ಕಾರ್ಕಳ: ಕೊನೆಗೂ ಕಾರ್ಕಳ ಉತ್ಸವಕ್ಕೆ ಅಖಾಡ ಸಿದ್ಧಗೊಂಡಿದೆ. ಶಿಲ್ಪಕಾಶಿ ಎಂದೇ ಜನಮಾನಸದಲ್ಲಿ ಛಾಪು ಹೊತ್ತಿರುವ ಕಾರ್ಕಳದಲ್ಲೀಗ ಎಲ್ಲೆಡೆ ಜಗಮಗ, ಸಂಭ್ರಮ, ಸಡಗರದ ಅಬ್ಬರ. ಮಾ.10 ರಿಂದ ಮಾ.20 ರವರೆಗೆ ನಡೆಯಲಿರುವ ಕಾರ್ಕಳ ಉತ್ಸವಕ್ಕೆ ಮಾ.10 ರಂದು ಭರ್ಜರಿ ಚಾಲನೆ ಸಿಗಲಿದೆ. ಬೀದಿ ಬೀದಿಗೂ ಬೆಳಕಿನ ಉತ್ಸವ: ಕಾರ್ಕಳ ನಗರದಲ್ಲೀಗ ಪ್ರತೀ ಬೀದಿ ಬೀದಿಯೂ ಸಿಂಗಾರಗೊಂಡಿದ್ದು ಪ್ರತೀ ಬೀದಿಯನ್ನೂ ಸಂಪೂರ್ಣವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗುತ್ತಿದೆ. ಮೈಸೂರು ಚಾಮುಂಡೇಶ್ವರಿ ವಿದ್ಯುತ್ ನಿಗಮ ಮಂಡಳಿಯ ಇಂಜಿನಿಯರ್ ಗಳು ಈಗಾಗಲೇ ಸಂಪೂರ್ಣ ವಿದ್ಯುತ್ […]
ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಹುಟ್ಟೂರು ಎರಟಾಡಿ ವಿಷ್ಣುಮೂರ್ತಿ ದೇವರಿಗೆ ನೂತನ ರಥ, ಆವರಣ ಗೋಡೆ ಸಮರ್ಪಣೆ

ಕಡಬ: ಪದವಿಭೂಷಣ ಪುರಸ್ಕೃತ ಹಿರಿಯ ಸಂತ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಹುಟ್ಟೂರು ದ.ಕ ಜಿಲ್ಲೆ ಕಡಬ ತಾಲೂಕು ಹಳೇನೇರಂಕಿ ಗ್ರಾಮದ ಎರಟಾಡಿ ಶ್ರೀ ವಿಷ್ಣುಮೂರ್ತಿ ದೇವರಿಗೆ ನೂತನವಾಗಿ ನಿರ್ಮಿಸಲಾಗಿರುವ ಚಂದ್ರಮಂಡಲ ರಥ ಹಾಗೂ ದೇವಾಲಯಕ್ಕೆ ನಿರ್ಮಿಸಲಾದ ಆವರಣಗೋಡೆಯ ಸಮರ್ಪಣೆ ಕಾರ್ಯಕ್ರಮಗಳು ಭಾನುವಾರ ಸೋಮವಾರ ನೆರವೇರಿತು. ರಾಜ್ಯ ಮುಜರಾಯಿ ಇಲಾಖೆಯ ಇಪ್ಪತ್ತು ಲಕ್ಷ ರೂ ಅನುದಾನ ಹಾಗೂ ಭಕ್ತರ ನೆರವಿನಿಂದ ಈ ನಿರ್ಮಾಣಗಳು ನಡೆದಿವೆ. ಭಾನುವಾರ ಸಂಜೆ ರಾಜ್ಯ ಬಂದರು ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಮಂತ್ರಿ […]
ಭಾಷೆ ಬಳಕೆಯ ಪ್ರದರ್ಶಕ ಕಲೆಗಳಲ್ಲಿ ಯಕ್ಷಗಾನದ ಕೊಡುಗೆ ಅಪಾರ: ಗೋಪಾಲಕೃಷ್ಣ ನಾಯರಿ

ಉಡುಪಿ, ಮಾ.7: ಭಾಷೆ ಬಳಕೆಯ ಪ್ರದರ್ಶಕ ಕಲೆಗಳಲ್ಲಿ ಯಕ್ಷಗಾನದ ಕೊಡುಗೆ ಅಪಾರವಾಗಿದ್ದು, ಯಕ್ಷಗಾನ ಹಾಗೂ ನಾಟಕಗಳಿಗೆ ಇರುವಷ್ಟು ಶಕ್ತಿ ಬೇರಾವುದೇ ಕಲೆಗಳಿಗೆ ಇಲ್ಲ ಎಂದು ರಂಗ ಸಂಶೋಧನಾ ಕೇಂದ್ರದ ಮುಖ್ಯಸ್ಥ ಗೋಪಾಲಕೃಷ್ಣ ನಾಯರಿ ಹೇಳಿದರು. ಅವರು ರವಿವಾರ, ಸಾಲಿಗ್ರಾಮದ ಗುಂಡ್ಮಿ ಸದಾನಂದ ರಂಗಮಂಟಪದಲ್ಲಿ, ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ತಂಜಾವೂರು ಮತ್ತು ಸಮಸ್ತರು ರಂಗ ಸಂಶೋಧನಾ ಕೆಂದ್ರ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ 3 ದಿನಗಳ ಯಕ್ಷೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]
ಮಂಗಳೂರಿನ ರಂಗಭೂಮಿಯ ರೋಚಕ ಇತಿಹಾಸದಲ್ಲಿ ಅರೆಹೊಳೆ ನಾಟಕೋತ್ಸವದ ಕೊಡುಗೆಯೂ ಶ್ಲಾಘನಾರ್ಹ: ಮನೋಹರ ಪ್ರಸಾದ್

ಮಂಗಳೂರು: ಮಂಗಳೂರಿನ ರಂಗಭೂಮಿಯ ಚಟುವಟಿಕೆಯಲ್ಲಿ ಹಾಗೂ ಅದರ ಬೆಳವಣಿಗೆಯಲ್ಲಿ ಅರೆಹೊಳೆ ನಾಟಕೋತ್ಸವದ ಕೊಡುಗೆಯೂ ಶ್ಲಾಘನಾರ್ಹ ಎಂದು ಖ್ಯಾತ ಪತ್ರಕರ್ತ ಮನೋಹರ ಪ್ರಸಾದ್ ರವರು ಹೇಳಿದರು. ಅವರು ಅರೆಹೊಳೆ ಪ್ರತಿಷ್ಠಾನವು ಅಸ್ತಿತ್ವ (ರಿ) ಮತ್ತು ಲಯನ್ಸ್ ಮತ್ತು ಲಿಯೋಕ್ಲಬ್ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಅರೆಹೊಳೆ ನಾಟಕೋತ್ಸವ -2022 ನ್ನು ಉದ್ಘಾಟಿಸಿ ಮಾತಾಡುತ್ತಿದ್ದರು. ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ, ಅರೆಹೊಳೆ ಪ್ರತಿಷ್ಠಾನದ ಗೌರವ ಸಲಹೆಗಾರ ಕೆ ಸಿ ಪ್ರಭು, ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ […]
ಸಗ್ರಿ ಶ್ರೀವಾಸುಕಿ ಸುಬ್ರಹ್ಮಣ್ಯ ದೇಗುಲದ ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ಸಗ್ರಿ ಶ್ರೀವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಪ್ರಿಲ್ 8 ರಿಂದ 11ರ ವರೆಗೆ ನಡೆಯಲಿರುವ ನವೀಕೃತ ನಾಗದೇವರ ಗುಡಿ ಸಮರ್ಪಣೆ, ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆಯನ್ನು ಉತ್ಸವ ಸಮಿತಿ ಗೌರವಾಧ್ಯಕ್ಷರೂ ಆಗಿರುವ ಶ್ರೀ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಭಾನುವಾರ ಬಿಡುಗಡೆಗೊಳಿಸಿದರು. ಬಳಿಕ ಶ್ರೀಗಳು ಅನುಗ್ರಹ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ನಾಗಪಾತ್ರಿಗಳಾದ ಶ್ರೀ ಗೋಪಾಲಕೃಷ್ಣ ಸಾಮಗ, ಅನಂತ ಸಾಮಗ, ಪಾಡಿಗಾರು ಶ್ರೀನಿವಾಸ ತಂತ್ರಿ, ಕಲ್ಲಂಜೆ ವಿಠಲ ಭಟ್, […]