ಯುವ ಜನತೆಯಲ್ಲಿ ಸಸ್ಯಗಳ ಅರಿವಿನ ಕೊರತೆ: ಪೇಜಾವರ ಶ್ರೀ ವಿಷಾದ

ಉಡುಪಿ: ಜೀವವಾಯು ನೀಡುವ ಮೂಲಕ ಮನುಷ್ಯನ ಅಸ್ತಿತ್ವಕ್ಕೆ ಕಾರಣವಾದ ಸಸ್ಯಗಳ ಬಗ್ಗೆ ಇಂದಿನ ಯುವ ಜನತೆ ಅನಾಸಕ್ತಿ ವಹಿಸಿರುವುದು ಖೇದಕರ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ವಿಷಾದಿಸಿದರು. ರಂಜನಿ ಮೆಮೋರಿಯಲ್ ಟ್ರಸ್ಟ್ ಆಶ್ರಯದಲ್ಲಿ ಭಾನುವಾರ ಎಂಜಿಎಂ ಗೀತಾಂಜಲಿ ಸಭಾಂಗಣದಲ್ಲಿ ನಡೆದ ಹಿರಿಯ ಸಸ್ಯಶಾಸ್ತ್ರಜ್ಞ ಡಾ.ಕೆ. ಗೋಪಾಲಕೃಷ್ಣ ಭಟ್ ಅವರ ಬದುಕು- ಸಾಧನೆ ಕುರಿತ ಪುಸ್ತಕ ‘ಟ್ಯಾಕ್ಸೊನೊಮಿ ಭಟ್ಟರ ಯಾನ’ ಅನಾವರಣ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದರು. ಭೂಮಿಯ ಮೇಲೆ ಸಸ್ಯಗಳು, ಪರ್ವತಗಳು, ನದಿ ತೊರೆಗಳು ಇರುವಷ್ಟು […]
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಐವತ್ತೆರಡು ಅಡಿ ಎತ್ತರದ ಶಿವಲಿಂಗ ಪ್ರದರ್ಶನ ಹಾಗೂ ಉದ್ಘಾಟನೆ

ಬಸ್ರೂರು ಫೆ.13: ಕುಂದಾಪುರ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಪ್ರಜಾಪಿತ ಬ್ರಹ್ಮಕುಮಾರೀ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಐವತ್ತೆರಡು ಅಡಿ ಎತ್ತರದ ಶಿವಲಿಂಗ ಪ್ರದರ್ಶನ ಹಾಗೂ ಈಶ್ವರೀಯ ಸಂದೇಶ ಕಾರ್ಯಕ್ರಮವನ್ನು ಧರ್ಮದರ್ಶಿ ಶ್ರೀ ಅಪ್ಪಣ್ಣ ಹೆಗ್ಡೆಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಿ.ಕೆ. ವಾದಿರಾಜ ಭಟ್ ಸ್ವಾಗತಿಸಿದರೆ, ಸಂಚಾಲಕಿ ಬಿ.ಕೆ. ಗೀತಕ್ಕನವರು ಈಶ್ವರೀಯ ಕಾಣಿಕೆ ನೀಡಿ ವಂದಿಸಿದರು. ಬಿ.ಕೆ .ಜಯಶ್ರೀ ಅಕ್ಕನವರು ಈಶ್ವರೀಯ ಸಂದೇಶ ನೀಡಿದರು. ಇವತ್ತು & ನಾಳೆ ಸೋಮವಾರ ಈ ಅದ್ಭುತ ಶಿವಲಿಂಗದ ಪ್ರದರ್ಶನವನ್ನು ಸಾರ್ವಜನಿಕರು […]
ಉಡುಪಿ ಶ್ರೀಕೃಷ್ಣ ಮಠಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಶುಕ್ರವಾರ ಭೇಟಿ ನೀಡಿದರು. ವೀರೇಂದ್ರ ಹೆಗ್ಗಡೆ ಅವರನ್ನು ವಾದ್ಯಘೋಷದೊಂದಿಗೆ ಸ್ವಾಗತಿಸಿ, ಶ್ರೀಮಠದ ದಿವಾನರಾದ ವರದರಾಜ ಭಟ್ ಹಾಗೂ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು ಬರಮಾಡಿಕೊಂಡು ದೇವರ ದರ್ಶನ ಮಾಡಿಸಿದರು. ಬಳಿಕ ಅವರು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್ ಎಚ್ ಮಂಜುನಾಥ್, ಜಿಲ್ಲಾ ನಿರ್ದೇಶಕ ಗಣೇಶ್, ಪ್ರಾದೇಶಿಕ ನಿರ್ದೇಶಕ ವಸಂತ್ […]
ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಉತ್ಸವ: ಫೆ.13ಕ್ಕೆ ಮನ್ಮಹಾರಥೋತ್ಸವ, ಫೆ.14ಕ್ಕೆ ದೀಪೋತ್ಸವ

ಬ್ರಹ್ಮಾವರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಉತ್ಸವ ನಾಳೆಯಿಂದ ಫೆ.15ರ ವರೆಗೆ ದೇವಳದ ಸನ್ನಿಧಿಯಲ್ಲಿ ನಡೆಯಲಿದೆ. ಫೆ.12ರಂದು ಕುಂಭ ಸಂಕ್ರಮಣ, ಕೆಂಡಸೇವೆ. ಫೆ.13ರಂದು ಮನ್ಮಹಾರಥೋತ್ಸವ, ಫೆ. 14ರಂದು ದೀಪೋತ್ಸವ, ಐದು ಮೇಳದವರಿಂದ ಯಕ್ಷಗಾನ ಸೇವೆ ಆಟ ಜರುಗಲಿದೆ. ಸೂಚನೆ: ಫೆ. 12ರ ಶನಿವಾರ ರಾತ್ರಿ ಗಂಟೆ 8 ರ ವರೆಗೆ ಮಾತ್ರ ದೇವರ ದರ್ಶನ ಹಾಗೂ ಸೇವೆಗಳಿಗೆ ಅವಕಾಶ ಇರುತ್ತದೆ. ಕೆಂಡಸೇವಾ ನಂತರ ಸೇವೆಗಳಿಗೆ ಅವಕಾಶವಿರುತ್ತದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ. ಕಾರ್ಯನಿರ್ವಹಣಾಧಿಕಾರಿ ಎಸ್.ಪಿ.ಬಿ. ಮಹೇಶ, […]
ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ನಾಣ್ಯ ತುಲಾಭಾರ

ಅಯೋಧ್ಯೆ ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರು ಆಗಿರುವ ಉಡುಪಿ ಪೇಜಾವರ ಮಠ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಮಂಡ್ಯ ಮದ್ದೂರು ತಾಲೂಕಿನ ಇತಿಹಾಸ ಪ್ರಸಿದ್ಧ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಭಕ್ತರು ಅಭಿಮಾನಿಗಳು ನಾಣ್ಯ ತುಲಾಭಾರ ನೆರವೇರಿಸಿ ಅಭಿವಂದಿಸಿದರು. ಇದಕ್ಕೂ ಮೊದಲು ಶ್ರೀಗಳು ಮಠದ ಪಟ್ಟದ ದೇವರ ಪೂಜೆ ಹಾಗೂ ಹೊಳೆ ಆಂಜನೇಯನಿಗೆ ಪಂಚಾಮೃತ ಅಭಿಷೇಕ ಸಹಿತ ಪೂಜೆ ಮಾಡಿದರು.