ಉಡುಪಿ ಕೃಷ್ಣಾಪುರ ಪರ್ಯಾಯಕ್ಕೆ ಕುಂಜಾರುಗಿರಿಯ ಗಿರಿಬಳಗ ಮತ್ತು ಗಿರಿಭಗಿನಿಯರ ಬಳಗದಿಂದ ಹೊರಕಾಣಿಕೆ ಸಮರ್ಪಣೆ

ಉಡುಪಿ: ಶ್ರೀಕೃಷ್ಣಾಪುರ ಪರ್ಯಾಯಕ್ಕೆ ಕುಂಜಾರುಗಿರಿಯ ಗಿರಿಬಳಗ ಮತ್ತು ಗಿರಿಭಗಿನಿಯರ ವತಿಯಿಂದ ಭಾನುವಾರ ಹೊರಕಾಣಿಕೆ ಸಮರ್ಪಿಸಲಾಯಿತು.800 ಕಿಲೋ ಅಕ್ಕಿ, 650 ತೆಂಗಿನ ಕಾಯಿ,35 ಕಿಲೋ ಬೆಲ್ಲ, 25 ಕಿಲೋ ಸಕ್ಕರೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಗಿರಿಬಳಗದ ಅಧ್ಯಕ್ಷರಾದ ಪುಂಡರೀಕಾಕ್ಷ ಭಟ್, ಕಾರ್ಯದರ್ಶಿ ಶ್ರೀಶ ಕಾರಂತ, ಹಿರಿಯರಾದ ರಾಜಮೂರ್ತಿ ಭಟ್,ಪುಂಡರೀಕಾಕ್ಷ ಆಚಾರ್ಯ,ಬಳಗದ ಸದಸ್ಯರು,ಪರ್ಯಾಯೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ವಿಷ್ಣು ಪ್ರಸಾದ್ ಪಾಡಿಗಾರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸರಳ ಪರ್ಯಾಯೋತ್ಸವ, ದರ್ಬಾರ್ ಸಭೆ: ಸಮಿತಿ ಗೋಷಣೆ

ಬಹುನಿರೀಕ್ಷೆಯ ಧಾರ್ಮಿಕ ಉತ್ಸವ ನಾಡಹಬ್ಬ ಉಡುಪಿ ಪರ್ಯಾಯೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಅತೀ ಸರಳವಾಗಿ ನಡೆಸಲು ತೀರ್ಮಾನಿಸಿರುವುದಾಗಿ ಸಮಿತಿ ಕಾರ್ಯಾಧ್ಯಕ್ಷ ಕೆ ರಘುಪತಿ ಭಟ್ ಘೋಷಿಸಿದ್ದಾರೆ . ಸಮಿತಿ ಗೌರವಾಧ್ಯಕ್ಷ ಕೆ ಸೂರ್ಯನಾರಾಯಣ ಉಪಾಧ್ಯಾಯರು ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಶನಿವಾರ ರಾತ್ರಿ ನಡೆದ ಶ್ರೀ ಕೃಷ್ಣಾಪುರ ಪರ್ಯಾಯೋತ್ಸವ ಸಮಿತಿ ಪ್ರಮುಖರ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ . ಕೋವಿಡ್ ಪರಿಸ್ಥಿತಿ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೆ ಪೂರ್ಣವಾಗಿ ಸಹಕರಿಸಬೇಕೆನ್ನುವ ಭಾವೀ ಪರ್ಯಾಯ […]
ಯಕ್ಷಾಭಿನಯ ಬಳಗದಿಂದ ಯಕ್ಷಗಾನ ಪ್ರದರ್ಶನ

ಮಂಗಳೂರು: ಮಂಗಳೂರಿನಲ್ಲಿರುವ ಬಡಗು ತಿಟ್ಟು ಯಕ್ಷಗಾನ ಆಸಕ್ತರು ಹುಟ್ಟುಹಾಕಿದ ‘ಯಕ್ಷಾಭಿನಯ ಬಳಗ’ದ ಎರಡನೆಯ ವಾರ್ಷಿಕೋತ್ಸವ ಮತ್ತು ಯಕ್ಷಗಾನ ಪ್ರದರ್ಶನ ವಾರಾಂತ್ಯದ ಲಾಕ್ಡೌನ್ ಕಾರಣದಿಂದ ಮುಂದೂಡಿದ್ದು, ಇದೇ ಬರುವ ಜನವರಿ 13ಕ್ಕೆ ಮಂಗಳೂರಿನ ಪುರಭವನದಲ್ಲಿ ಮರುನಿಗದಿಗೊಂಡಿದೆ. ಅಂದು ಅಪರಾಹ್ನ 2.30 ಕ್ಕೆ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ಗುರು ಐರೋಡಿ ಮಂಜುನಾಥ ಕುಲಾಲ್ ನಿರ್ದೇಶನದಲ್ಲಿ ಸಂಸ್ಥೆಯ ಶಿಕ್ಷಣಾರ್ಥಿ ಸದಸ್ಯರಿಂದ ಅಭಿಮನ್ಯು ಕಾಳಗ ಮತ್ತು ಜಾಂಬವತಿ ಕಲ್ಯಾಣ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಹಿಮ್ಮೇಳದಲ್ಲಿ ರಾಘವೇಂದ್ರ ಆಚಾರ್ಯ ಜನ್ಸಾಲೆ, ಪ್ರಸಾದ್ […]
ಸೀಮಿತ ಕಲಾತಂಡಗಳೊದಿಗೆ ಸರಳವಾಗಿ ಪರ್ಯಾಯೋತ್ಸವ ಮೆರವಣಿಗೆ ನಡೆಸಲು ತೀರ್ಮಾನ: ನಗರದಲ್ಲಿ ಸಚಿವ ಸುನಿಲ್ ಕುಮಾರ್

ಕೋವಿಡ್ ಹಿನ್ನೆಲೆಯಲ್ಲಿ ಜನರ ಆರೋಗ್ಯದ ದೃಷ್ಟಿಯಿಂದ ಹಾಗೂ ಭಾವೀ ಪರ್ಯಾಯ ಶ್ರೀಗಳ ಅಪೇಕ್ಷೆಯಂತೆ ಸೀಮಿತ ಕಲಾತಂಡಗಳೊದಿಗೆ ಪರ್ಯಾಯೋತ್ಸವ ಮೆರವಣಿಗೆ, ಧಾರ್ಮಿಕ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಸೋಮವಾರ ನಗರ ಜಿಪಂ ಸಭಾಂಗಣದಲ್ಲಿ ನಡೆದ ಪರ್ಯಾಯೋತ್ಸವ ಸಮಿತಿ ಹಾಗೂ ಅಧಿಕಾರಿಗಳ ಸಭೆಯ ಬಳಿಕ, ಸಚಿವರು ಸುದ್ದಿಗಾರರಿಗೆ ಮಾಹಿತಿ ನೀಡಿದರು. ಸಾರ್ವಜನಿಕರ ಪ್ರವೇಶಕ್ಕೆ ನಿಬಂಧನೆ ಹಾಕಲಾಗಿದ್ದು, ಹೆಚ್ಚು ಜನ ಸೇರಿದಂತೆ ಈಗಾಗಲೇ ಮನವಿ ಮಾಡಲಾಗಿದೆ. […]
ಉಡುಪಿ: ಹಿಂದೂ ದೇವರ ಅವಹೇಳನ ಖಂಡಿಸಿ ನಾಳೆ (ಜ.11) ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ಸಾಮೂಹಿಕ ಪ್ರಾರ್ಥನೆ

ಉಡುಪಿ: ಕರಾವಳಿಯಾದ್ಯಂತ ನಡೆಯುತ್ತಿರುವ ಹಿಂದೂ ದೇವರ ಅವಹೇಳನ, ಅಪಹಾಸ್ಯ ಹಾಗೂ ದೇವಸ್ಥಾನಗಳನ್ನು ಅಪವಿತ್ರಗೊಳಿಸಿ ವಿಕೃತಿ ಮೆರೆದಿರುವಂತಹ ಕೃತ್ಯಗಳನ್ನು ಖಂಡಿಸಿ ಜ.11 ರಂದು ಉಡುಪಿ ಜಿಲ್ಲೆಯಾದ್ಯಂತ ದೇವಸ್ಥಾನ ಹಾಗೂ ದೈವಸ್ಥಾನಗಳಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೆ ಸಾಮೂಹಿಕ ಪ್ರಾರ್ಥನೆ ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ವಿಶ್ವ ಹಿಂದು ಪರಿಷತ್ ಭಜರಂಗದಳದ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ತಿಳಿಸಿದ್ದಾರೆ. ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕರಾವಳಿ ಭಾಗದಲ್ಲಿ ಹಲವಾರು ಸಮಯಗಳಿಂದ ದೇವರ, ದೈವಗಳಿಗೆ ಅಪಹಾಸ್ಯ, ನಿಂದನೆ […]