ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಶುಭಹಾರೈಸಿದ ಗಣ್ಯರು

ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಸಂಭ್ರಮ ಕಳೆಗಟ್ಟಿದೆ. ಕೋವಿಡ್ 19 ಹಿನ್ನೆಲೆಯಲ್ಲಿ ಈ ಬಾರಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವ ಸರಳ ರೀತಿಯಲ್ಲಿ ಸಂಪ್ರದಾಯದಂತೆ ನೆರವೇರಲಿದೆ. ಭಕ್ತಿಪೂರ್ವಕವಾಗಿ ಸಂಭ್ರಮದಿಂದ ಆಚರಿಸಲ್ಪಡುವ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವಕ್ಕೆ ವಿವಿಧ ಗಣ್ಯರು ಶುಭಾಶಯ ಕೋರಿದ್ದಾರೆ. ಅಷ್ಟಮಿ ಹಿನ್ನೆಲೆಯಲ್ಲಿ ಕೃಷ್ಣ ಮಠದಲ್ಲಿ ಪರ್ಯಾಯ ಅದಮಾರು ಮಠದ ಕಿರಿಯ ಸ್ವಾಮೀಜಿ ಈಶಪ್ರಿಯ ತೀರ್ಥರು ಕೃಷ್ಣ ದೇವರಿಗೆ ಲಕ್ಷ ತುಳಸಿ ಅರ್ಚನೆ ಮಾಡಿ ಮಹಾಪೂಜೆ ನೆರವೇರಿಸುವರು. ಇಂದು ಮಧ್ಯರಾತ್ರಿ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಲಾಗುವುದು. […]

ಅವನ ಜನ್ಮಭೂಮಿಯಲ್ಲೇ ಅವನಿಗೊಂದು ಮಂದಿರ!: ಅಯೋಧ್ಯೆ-ರಾಮನ ಕುರಿತು ಟಿ ದೇವಿದಾಸ್ ಬರೆದ ಸ್ವಾರಸ್ಯಕರ ಬರಹ

  ಸಮಸ್ತ ಭಾರತೀಯರ ಪೂರ್ವಪುಣ್ಯಕೃತ ವಿಶೇಷ ಸೌಭಾಗ್ಯವೆಂದರೆ ಇದೇ ಇರಬೇಕು! ಸಮಸ್ತ, ಸಮಗ್ರ ಭಾರತದ ಮನೋ ಆರಾಧ್ಯಮೂರ್ತಿ ಪ್ರಭು ಶ್ರೀರಾಮಚಂದ್ರನಿಗೆ ಅವನದೇ ಜನ್ಮಭೂಮಿಯಲ್ಲಿ ವಿಶ್ವವಿಖ್ಯಾತ ಭವ್ಯ ದಿವ್ಯ ಮಂದಿರ ನಿರ್ಮಾಣಕ್ಕೆ ಇಂದು ಶಿಲಾನ್ಯಾಸ ಆಗುತ್ತಿರುವುದು ಮೈಮನಗಳಲ್ಲಿ ಪರಮಾನಂದದ ಅನುಭೂತಿಯನ್ನು ನೀಡುತ್ತಿದೆ. 500 ವರ್ಷಗಳ ಹಿಂದೆ ರಾಮ ಮಂದಿರವನ್ನು ಕೆಡವಿದರು. ಆದರೆ ಯಾರಿಗೂ ರಾಮ ಭಕ್ತಿಯನ್ನು ಕೆಡವಲು ಸಾಧ್ಯವಾಗಲೇ ಇಲ್ಲ. ಅದಕ್ಕೆ ಸಾವಿಲ್ಲ. ಯಾಕೆಂದರೆ ಅದು ಮನುಜಾ ಕೃಪಾಸಿತ ತಾರಕಮಂತ್ರ. ರಾಮಮಂದಿರದ ಕನಸು ಮತ್ತು ಕಲ್ಪನೆ ಗುಪ್ತಗಾಮಿನಿಯಾಗೇ ಭಾರತೀಯರಲ್ಲಿ […]

ಧಾರ್ಮಿಕ ದತ್ತಿ ಇಲಾಖೆಯಿಂದ ಕಾರ್ಕಳ ವಿಧಾನ ಸಭಾಕ್ಷೇತ್ರಕ್ಕೆ 1200 ಆಹಾರ ಸಾಮಗ್ರಿ ಕಿಟ್ ವಿತರಣೆ

ಉಡುಪಿ: ಕೋವಿಡ್ 19 ನಿಂದ ಸಂಕಷ್ಟಕ್ಕೆ ಒಳಗಾದ ಕಾರ್ಕಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಸಂತ್ರಸ್ತರಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ 1200 ಆಹಾರ ಕಿಟ್ ವಿತರಣೆ ಮಾಡಲಾಗಿದೆ. ಇಂದು ಮಂದಾರ್ತಿಯ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಕಳ ಮತ್ತು ಹೆಬ್ರಿ ತಾಲ್ಲೂಕಿನ ತಹಶಿಲ್ದಾರರಿಗೆ ಕಿಟ್ ಗಳನ್ನು ಹಸ್ತಾಂತರಿಸಿದರು. ದೇವಳದ ಮುಕ್ತೇಸರರಾದ ಧನಂಜಯ ಶೆಟ್ಟ ಇದ್ದರು.

ಜೀರ್ಣೋದ್ಧಾರಕ್ಕೆ ಅಣಿಯಾದ 800 ವರ್ಷಗಳಷ್ಟು ಪುರಾತನದ ಎಡ ಕೈಯಲ್ಲಿ ಆಶೀರ್ವಾದ ನೀಡುವ ಬೈಂದೂರಿನ ಯತ್ತಾಬೇರು ದುರ್ಗಾಪರಮೇಶ್ವರಿ ಅಮ್ಮನವರ ದೇಗುಲ.

ಪ್ರಾಚೀನ ದೇಗುಲವನ್ನು ಜೀರ್ಣೋದ್ಧಾರ ಮಾಡುವುದು ಅತ್ಯಂತ ಪುಣ್ಯದ ಮತ್ತು ಅತೀ ಶ್ರೇಷ್ಠ ಕೆಲಸ ಎಂದು ಶಾಸ್ತ್ರಗಳಲ್ಲಿ  ಮತ್ತು ಬಲ್ಲವರು ಹೇಳುತ್ತಾರೆ. ಆ ನಿಟ್ಟಿನಲ್ಲಿ 800 ವರ್ಷಗಳಿಗೂ ಅಧಿಕ ಇತಿಹಾಸವನ್ನು ಹೊಂದಿರುವ ಬೈಂದೂರಿನ ತಗ್ಗರ್ಸೆ ಗ್ರಾಮದ ಯತ್ತಾಬೇರುನಲ್ಲಿರುವ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನ. ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಜೈನರ ಕಾಲದಲ್ಲಿ ಪ್ರತಿಷ್ಟಾಪನೆಗೊಂಡಿತ್ತು. ಇದಕ್ಕೆ ಸಾಕ್ಷಿಯಾಗಿ ಈ ಅಮ್ಮನವರನ್ನು ಬಹಳ ಹಿಂದೆ ಜೈನರ ಆರಾಧ್ಯ ದೇವಿಯಾದ ಪದ್ಮಾವತಿ ಅಮ್ಮನವರು ಎಂದು ಕರೆಯುತ್ತಿದ್ದರಂತೆ ಮತ್ತು ಇಲ್ಲಿ ಪರಿವಾರ ದೈವಗಳಾಗಿ ಜೈನ ಜಟ್ಟಿಗೇಶ್ವರ […]

ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನ: ಬ್ರಹ್ಮಕಲಶೋತ್ಸವಕ್ಕೆ ಚಪ್ಪರ ಮುಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ

ಬ್ರಹ್ಮಾವರ: ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಮಾ.25 ರಿಂದ ಎ.1ರ ವರೆಗೆ ನಡೆಯುವ ನವೀಕೃತ ಗರ್ಭಗುಡಿ ಮತ್ತು ನೂತನ ಶಿಲಾಮಯ ತೀರ್ಥ ಮಂಟಪ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ ಹಾಗೂ ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರ ಆನೆಗುಡ್ಡೆ ಸಿದ್ದಿವಿನಾಯಕ ದೇವಳದ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯರು ಬಿಡುಗಡೆಗೊಳಿಸಿದರು. ನೀಲಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ರಘುರಾಮ್ ಮಧ್ಯಸ್ಥ, ತಾಲೂಕು ಪಂಚಾಯತ್ ಸದಸ್ಯೆ ನಳಿನಿ ಪ್ರದೀಪ್ ರಾವ್, ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಎಸ್. […]