ಉಡುಪಿ: ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನದ ಕಾರ್ಯಾಲಯ ಉದ್ಘಾಟನೆ

ಉಡುಪಿ: ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರ ಸಂಕಲ್ಪದಂತೆ, ಉಡುಪಿ ಶ್ರೀಕೃಷ್ಣ ಮಠದ ಆವರಣದ ಶ್ರೀರಾಮಧಾಮದಲ್ಲಿ 2019 ದಶಂಬರ 13 ,14 ,15 ರಂದು ನಡೆಯಲಿರುವ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನದ ಕಾರ್ಯಾಲಯವನ್ನು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥಶ್ರೀಪಾದರು ಉದ್ಘಾಟನೆ ಮಾಡಿದರು. ತುಳು ಶಿವಳ್ಳಿ ಸಂಸ್ಕೃತಿಯನ್ನು ಜಗದಗಲಕೆ ಪರಿಚಯಿಸುವ ಈ ಸಮ್ಮೇಳನದಲ್ಲಿ ದೇಶ ವಿದೇಶಗಳಲ್ಲಿರುವ ಶಿವಳ್ಳಿ ಬ್ರಾಹ್ಮಣರು ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕೆಂದು ಶ್ರೀಗಳು ತಿಳಿಸಿದರು. ಸಮ್ಮೇಳನದ ರೂಪುರೇಷೆಯನ್ನು ಕೆ ಬಾಲಕೃಷ್ಣ ಮಡಮಂತ್ತಾಯ ತಿಳಿಸಿದರು. […]
ಗಂಗೊಳ್ಳಿಯ ನಿನಾದ ಸಂಸ್ಥೆ: ಭಜನಾ ಕಾರ್ಯಕ್ರಮ

ಗಂಗೊಳ್ಳಿ : ಗಂಗೊಳ್ಳಿಯ ನಿನಾದ ಸಂಸ್ಥೆಯ ಜ್ಞಾನಗಂಗಾ ಕಾರ್ಯಕ್ರಮದ ವಿದ್ಯಾರ್ಥಿಗಳು ನಿನಾದ ಸಂಸ್ಥೆಯ ನೇತೃತ್ವದಲ್ಲಿ ಸಿದ್ಧಾಪುರದ ಶ್ರೀ ದುರ್ಗಾ ಹೊನ್ನಮ್ಮ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಭಜನಾ ಸೇವೆ ಸಮರ್ಪಿಸಿದರು. ದೇವಸ್ಥಾನದ ಆಡಳಿತ ಧರ್ಮದರ್ಶಿ ಜಿ.ಸುಧೀರ ಜೆ.ನಾಯಕ್ ಮುಂಬೈ ಮತ್ತು ದೇವಳದ ಅರ್ಚಕ ಎಂ.ಸುರೇಂದ್ರ ಭಟ್ ಇದ್ದರು.
ಕನ್ನರ್ಪಾಡಿ: ದ್ವಿತೀಯ ವರ್ಷದ ಶಾರದಾ ಮಹೋತ್ಸವ ಆಚರಣೆ
ಉಡುಪಿ: ಉಡುಪಿ ಕಿನ್ನಿಮೂಲ್ಕಿ ಕನ್ನರ್ಪಾಡಿಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ದ್ವಿತೀಯ ವರ್ಷದ ಶಾರದಾ ಮಹೋತ್ಸವ ಆಚರಣೆಯು ಅ. 5ರಿಂದ 8ರ ವರೆಗೆ ನಾಲ್ಕು ದಿನಗಳ ಕಾಲ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿಯ ಮೈದಾನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾದ ಜಯಪ್ರಕಾಶ್ ಕೆದ್ಲಾಯ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅ.5ರಂದು ಬೆಳಿಗ್ಗೆ 7.30ಕ್ಕೆ ಶಾರದಾ ದೇವಿಯ ವಿಗ್ರಹ ಪ್ರತಿಷ್ಠಾಪನೆ, ಗಣ ಹೋಮ ನಡೆಯಲಿದ್ದು 8 ಗಂಟೆಗೆ ಚಂಡಿಕಾ ಯಾಗ, ತದನಂತರ ವಿವಿಧ […]
ಶ್ರೀ ಕೃಷ್ಣ ಮಠದಲ್ಲಿ ” ಶ್ರೀ ಕೃಷ್ಣನಿಗೆ ಓಲೆ ಬರೆಯುತ್ತಿರುವ ರುಕ್ಮಿಣೀ ” ಅಲಂಕಾರ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ, ಸೋದೆ ಮಠದ ಶ್ರೀ ಶ್ರೀ ವಿಶ್ವವಲ್ಲಭತೀರ್ಥರು ನವರಾತ್ರಿಯ ಪ್ರಯುಕ್ತ ಶ್ರೀ ಕೃಷ್ಣ ದೇವರಿಗೆ ” ಶ್ರೀ ಕೃಷ್ಣನಿಗೆ ಓಲೆ ಬರೆಯುತ್ತಿರುವ ರುಕ್ಮಿಣೀ ” ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.
ಶ್ರೀ ಕೃಷ್ಣ ಮಠದಲ್ಲಿ ಯೋಗ-ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಶ್ರೀ ಬಾಬಾ ರಾಮ್ ದೇವರವರ ನವೆಂಬರ್ 16 -20 ರ ತನಕ ನಡೆಯುವ ಉಚಿತ ಬ್ರಹತ್ ಯೋಗ ಶಿಬಿರದ ಪ್ರಯುಕ್ತ 101 ಯೋಗ ಶಿಬಿರಕ್ಕೆ ಹಾಗೂ ಸ್ವಚ್ಛಭಾರತ್ ಅಭಿಯಾನಕ್ಕೆ ಚಾಲನೆ ನೀಡಿದರು. ಪತಂಜಲಿ ರಾಜ್ಯ ಪ್ರಭಾರಿ ಯೋಗಾಚಾರ್ಯ ಭವರ್ಲಾಲ್ ಆರ್ಯಜೀ,ಬಾಲಾಜಿ ರಾಘವೇಂದ್ರ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.