ಶ್ರೀ ಕೃಷ್ಣ ಮಠದಲ್ಲಿ ಸಂಗೀತ ಕಾರ್ಯಕ್ರಮ

ಉಡುಪಿ: ಶ್ರೀ ಕೃಷ್ಣ ಮಠದ ಮಧ್ವ ಮಂಟಪದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸುಮಾ ನಾರಾಯಣ್ ಮತ್ತು ಬಳಗ, ದುಬೈ ಇವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.
ಶ್ರೀ ಕೃಷ್ಣ ಮಠ ದೇವರಿಗೆ ಶ್ರೀ ಗಳಿಂದ ತುಳಸಿ ಅರ್ಚನೆ, ಮಹಾಪೂಜೆ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು ರಾತ್ರಿ ಕೃಷ್ಣ ದೇವರಿಗೆ ತುಳಸಿ ಅರ್ಚನೆ, ಮಹಾಪೂಜೆಯನ್ನು ನೆರವೇರಿಸಿ ನಂತರ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು, ಗರ್ಭಗುಡಿಯೊಳಗೆ ಕೃಷ್ಣ ದೇವರಿಗೆ ಅರ್ಘ್ಯ ನೀಡಿ ಚಂದ್ರೋದಯ ಸಮಯದಲ್ಲಿ ತುಳಸೀಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ನೀಡಿದರು. ನಂತರ ಭಕ್ತಾದಿಗಳಿಂದ ಅರ್ಘ್ಯಪ್ರಧಾನ ನಡೆಯಿತು.
ಉಡುಪಿ: ಶ್ರೀ ಕೃಷ್ಣ ವೇಷ ಸ್ಪರ್ಧೆಯಲ್ಲಿ ಕೊಳಲನೂದುತ ಬಂದ ಮುದ್ದು ಕೃಷ್ಣರು

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀಜಗದ್ಗುರು ಮೂಲಮಹಾಸಂಸ್ಥಾನಂ ಶ್ರೀಹೃಷಿಕೇಶತೀರ್ಥಪೀಠಮ್ ಪರ್ಯಾಯ ಶ್ರೀಪಲಿಮಾರು ಮಠದ ಆಶ್ರಯದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಅಂಗವಾಗಿ ರಾಜಾಂಗಣ, ಅನ್ನಬ್ರಹ್ಮ,ಭೋಜನಶಾಲೆಯಲ್ಲಿ ನಡೆದ ಶ್ರೀಕೃಷ್ಣ ವೇಷ ಸ್ಪರ್ಧೆಯನ್ನು ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ವೀಕ್ಷಿಸಿ ಮುದ್ದುಕೃಷ್ಣ.ಬಾಲಕೃಷ್ಣ ,ಕಿಶೋರಕೃಷ್ಣರನ್ನು ಅನುಗ್ರಹಿಸಿದರು. ಸುಮಾರು 500ಕ್ಕೂ ಹೆಚ್ಚು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಶ್ರೀ ಕೃಷ್ಣ ಮಠದಲ್ಲಿ:ದೇವರಿಗೆ ಯಶೋಧೆ ಕೃಷ್ಣ ಅಲಂಕಾರ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ, ಅದಮಾರು ಮಠದ ಕಿರಿಯ ಸ್ವಾಮೀಜಿ ಶ್ರೀ ಶ್ರೀ ಈಶಪ್ರಿಯ ತೀರ್ಥರು ಶ್ರೀ ಕೃಷ್ಣ ದೇವರಿಗೆ ಶ್ರೀಕೃಷ್ಣ ಜನ್ಮಾಷ್ಠಮಿಯ ಅಂಗವಾಗಿ ” ಯಶೋಧೆ ಕೃಷ್ಣ ” ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಅನುಗ್ರಹ ಸಂದೇಶ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀಜಗದ್ಗುರು ಮೂಲಮಹಾಸಂಸ್ಥಾನಂ ಶ್ರೀಹೃಷಿಕೇಶತೀರ್ಥಪೀಠಮ್ ಪರ್ಯಾಯ ಶ್ರೀಪಲಿಮಾರು ಮಠದ ಆಶ್ರಯದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಕಾರ್ಯಕ್ರಮಗಳ ನಾಲ್ಕನೆಯ ದಿನದಂದು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಅದಮಾರು ಕಿರಿಯ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಪಲಿಮಾರು ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಕುಂಭಾಸಿ ಆನೆಗುಡ್ಡೆಯ ಶ್ರೀರಮಣ ಉಪಾದ್ಯಾಯ,ಡಾ.ಜಿ.ಎಸ್.ಚಂದ್ರಶೇಖರ,ಸಾಯಿರಾಧ ಗ್ರೂಪ್ ನ ಮನೋಹರ್ ಶೆಟ್ಟಿ,ಗಣೇಶ್ ರಾವ್,ನಿರ್ಮಿತಿ ಕೇಂದ್ರದ ಅರುಣ್ ಕುಮಾರ್,ಡಾ.ಜಯರಾಮ್ ಶೆಟ್ಟಿಗಾರ್,ವಿಕಲಚೇತನರ ಒಕ್ಕೂಟದ ಅಧ್ಯಕ್ಷ ಜಗದೀಶ್ ಭಟ್, ವಾಯಲಿನ್ ವಾದಕರಾದ […]