ಗಣೇಶ ಚುತುರ್ಥಿಯ ವಿಶೇಷ, ಸ್ವಾರಸ್ಯಗಳನ್ನು ತಿಳಿದುಕೊಳ್ಳೋಣ.

ಗಣೇಶ ಚತುರ್ಥಿಯನ್ನು ವಿನಾಯಕ ಚತುರ್ಥಿ ಎಂದರೆ ಲೋಕವೆಲ್ಲಾ ಬೆಳಗುವ ಹಬ್ಬ. ಗಣೇಶನನ್ನು ಕಣ್ತುಂಬಿಕೊಂಡು ಭಕ್ತರು ಸಂತಸ ಪಡುವ ಹಬ್ಬ. ಈ ಹಬ್ಬದ ಆಚರಣೆಗಳ ಹಿನ್ನೆಲೆ ಕುರಿತ ಸ್ವಾರಸ್ಯಕರ ಸಂಗತಿಗಳನ್ನು ತಿಳಿದುಕೊಳ್ಳೋಣ ಬನ್ನಿ. ಇದು ಪ್ರೀತಿಯ ಆನೆಯ ತಲೆಯ ದೇವತೆಯಾದ ಗಣೇಶನ ಜನ್ಮವನ್ನು ಗೌರವಿಸುತ್ತದೆ. ಇದು ಜನನ, ಜೀವನ ಮತ್ತು ಮರಣದ ಚಕ್ರವನ್ನು ಸಂಕೇತಿಸುತ್ತದೆ ಮತ್ತು ಮನೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗಣೇಶನ ಸಂಕೀರ್ಣವಾಗಿ ಅಲಂಕರಿಸಿದ ವಿಗ್ರಹಗಳನ್ನು ಸ್ಥಾಪಿಸುವ ಮೂಲಕ ಗುರುತಿಸಲಾಗುತ್ತದೆ. ಗಣೇಶನು ರಕ್ಷಣೆ, ನಿಷ್ಠೆ, ಬುದ್ಧಿವಂತಿಕೆ, ಅದೃಷ್ಟ […]

ನಾಡಿನ ಸಮಸ್ತ ಜನತೆಗೆ ಶ್ರೀ ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು..

ಉಡುಪಿ: ನಾಡಿನ ಸಮಸ್ತ ಜನತೆಗೆ, ಹಾಗೂ ನಮ್ಮ ಗ್ರಾಹಕರಿಗೆ, ಬಂದು-ಮಿತ್ರರಿಗೆ, ಹಿತೈಷಿಗಳಿಗೆ ಕರಾವಳಿಯ ಜನಪ್ರಿಯ ಸುದ್ದಿ ಜಾಲತಾಣ “ಉಡುಪಿ ಎಕ್ಸ್ಪ್ರೆಸ್” ನಿಂದ ಶ್ರೀ ಗಣೇಶ ಚತುರ್ಥಿ ಹಬ್ಬದ ಹಾರ್ದಿಕ ಶುಭಾಶಯಗಳು. ಹಾಗೂ ನಾಡಿನ ಗಣ್ಯರು ನಮ್ಮ ಸುದ್ದಿಯ ಮೂಲಕ ಸಮಸ್ತ ಜನತೆಗೆ ಶುಭ ಹಾರೈಸಿದ್ದಾರೆ.

ಸೆ.7ರಂದು ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಶ್ರೀ ವಿನಾಯಕ ಚತುರ್ಥಿ.

ಕುಂದಾಪುರ: ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಶ್ರೀ ವಿನಾಯಕ ಚತುರ್ಥಿ ಹಾಗೂ ಅಷ್ಟೋತ್ತರ ಸಹಸ್ರ ನಾಲಿಕೇರ ಗಣಯಾಗವು ಸೆ.7ರಂದು ಸಂಪ್ರದಾಯದಂತೆ ಜರಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸೆ.6ರಂದು ಪೂರ್ವಾಹ್ನ ಗಂಟೆ 10 ಗಂಟೆಗೆ ಉಪ್ಪಿನಂಗಡಿ, ರಾಮಕುಂಜ ಪುತ್ತೂರು ಶ್ರೀ ಗುರುಸಾರ್ವಭೌಮ ಮಹಿಳಾ ಭಜನ ಮಂಡಳಿ ಇವರಿಂದ ಭಜನೆ, ಮಧ್ಯಾಹ್ನ ಗಂಟೆ 3ರಿಂದ 5ರ ತನಕ ಕುಂಭಾಶಿ ಆನೆಗುಡ್ಡೆ ಶ್ರೀ ವಿಶ್ವೇಶ್ವರ ಮಹಿಳಾ ಭಜನ ಮಂಡಳಿಯವರಿಂದ ಭಜನೆ ಹಾಗೂ ಸಂಜೆ ಗಂಟೆ 5ರಿಂದ ಮಂಗಳೂರಿನ ಕೋಡಿಕಲ್‌ ಸರಯೂ […]

ಉಡುಪಿ‌ ಕೃಷ್ಣನೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಕಣ್ಮನ ಸೆಳೆಯಲಿದೆ ಸಾಂಸ್ಕೃತಿಕ-ಧಾರ್ಮಿಕ ಕಾರ್ಯಕ್ರಮಗಳು.

ಉಡುಪಿ: ಕೃಷ್ಣನೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಗರಿಗೆದರಿದೆ. ಶ್ರೀ ಕೃಷ್ಣಮಠದಲ್ಲಿ ಕಣ್ಮನ ಸೆಳೆಯುವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಕೃಷ್ಣಾಷ್ಟಮಿ ಆಚರಣೆ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಸಕಲ ಸಿದ್ಧತಾ ಕಾರ್ಯ ವಿಜೃಂಭಣೆಯಿಂದ ನಡೆಯುತ್ತಿದೆ. ಇಂದು (ಆ.26) ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆಗಳು, ವಿವಿಧ ಧಾರ್ಮಿಕ ಕಾರ್ಯಕ್ರಮ, ವಿಶೇಷ ಪೂಜೆ, ರಾತ್ರಿ ಅರ್ಘ್ಯಪ್ರದಾನ ನೆರವೇರಲಿದೆ. ಹಾಗೂ ರಥಬೀದಿಯಲ್ಲಿ ಆ. 27ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದೆ. ಕೃಷ್ಣ ಪ್ರಸಾದಕ್ಕೆ ಅಗತ್ಯ ಇರುವ ಉಂಡೆ, ಚಕ್ಕುಲಿ ತಯಾರಿಸಲಾಗಿದೆ. […]

ಕಾರ್ಕಳ ಶ್ರೀ ವೆಂಕಟರಮಣ ದೇವಳದ ರಥೋತ್ಸವ: ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಉಡುಪಿ: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮೇ 9 ರಿಂದ 14 ರ ವರೆಗೆ ರಥೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಮೇ 13 ರಂದು ಸಂಜೆ 4 ಗಂಟೆಯಿಂದ ಮೇ 14 ರ ಬೆಳಗ್ಗೆ 6 ಗಂಟೆಯವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ. ಪರ್ಯಾಯ ಮಾರ್ಗದ ವಿವರ: ಘನವಾಹನಗಳು ಬಂಗ್ಲೆಗುಡ್ಡೆ- ಹಿರಿಯಂಗಡಿ- ಪುಲ್ಕೆರಿ ಮಾರ್ಗವಾಗಿ […]