ಉಡುಪಿ ಪುತ್ತಿಗೆ ಪರ್ಯಾಯ ಮಹೋತ್ಸವ: ಹೊರಕಾಣಿಕೆ ಮೆರವಣಿಗೆಗೆ ಅದ್ಧೂರಿ ಚಾಲನೆ
ಉಡುಪಿ: ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಹೊರಕಾಣಿಕೆ ಮೆರವಣಿಗೆಗೆ ಉಡುಪಿ ಸಂಸ್ಕೃತ ಕಾಲೇಜಿನ ಬಳಿ ಇಂದು ಚಾಲನೆ ನೀಡಲಾಯಿತು. ಮಠದ ದಿವಾನ ನಾಗರಾಜ್ ಆಚಾರ್ಯ, ಪರ್ಯಾಯ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಕೆ. ರಘುಪತಿ ಭಟ್ ಹಾಗೂ ಪುತ್ತಿಗೆ ಮಠದ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಅವರು ಸಾಂಪ್ರದಾಯಿಕ ಹೊರಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಸಂಸ್ಕೃತಿ ಕಾಲೇಜಿನ ಬಳಿಯಿಂದ ಆರಂಭಗೊಂಡ ಮೆರವಣಿಗೆ ರಥಬೀದಿಯ ಮೂಲಕ ಪುತ್ತಿಗೆ ಮಠಕ್ಕೆ ಸಾಗಿಬಂತು. ತಟ್ಟಿರಾಯ, ನಾಸಿಕ್ ಬ್ಯಾಂಡ್, […]
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಪುತ್ತಿಗೆ ಶ್ರೀಯವರ ಭವ್ಯ ಪುರಪ್ರವೇಶ, ಅದ್ದೂರಿಯ ಪೌರಸಮ್ಮಾನ ಸಮಾರಂಭ
ಉಡುಪಿ: ಶ್ರೀಕೃಷ್ಣ – ಮುಖ್ಯಪ್ರಾಣದೇವರಿಗೆ ಮುಂದಿನ ಎರಡು ವರುಷಗಳ ಕಾಲ ತಮ್ಮ ಕರಕಮಲಗಳಿಂದ ಪೂಜೆಯನ್ನು ನೆರವೇರಿಸಲಿರುವ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇಂದ್ರ ತೀರ್ಥಶ್ರೀಪಾದರು ತಮ್ಮ ಶಿಷ್ಯರಾದ ಶ್ರೀಸುಶ್ರೀಂದ್ರ ತೀರ್ಥಪಾದರೊಂದಿಗೆ ಎಲ್ಲಾ ತೀರ್ಥಕ್ಷೇತ್ರ ಸಂದರ್ಶನ ಮುಗಿಸಿ ಇಂದು (ಸೋಮವಾರದಂದು) ಸಾಯಂಕಾಲ ಉಡುಪಿ ನಗರಕ್ಕೆ ಆಗಮಿಸುವುದರೊಂದಿಗೆ ಪುರಪ್ರವೇಶವನ್ನು ಗೈದರು. ಉಡುಪಿಗೆ ಆಗಮಿಸಿದ ಯತಿದ್ವಯರನ್ನು ಜಿಲ್ಲಾಧಿಕಾರಿಗಳು, ಪರ್ಯಾಯ ಸ್ವಾಗತ ಸಮಿತಿಯವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸಚಿವರು, ಜನಪ್ರತಿನಿಧಿಗಳು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸೇರಿದ ಗಣ್ಯರು, ಅಭಿಮಾನಿಗಳು ಹೂವಿನಹಾರ-ಫಲಪುಷ್ಪವನ್ನು ನೀಡಿ ಗೌರವಿಸಿದರು. ಜೋಡುಕಟ್ಟೆಯಲ್ಲಿ […]
ಅಯೋಧ್ಯೆ ಶ್ರೀರಾಮಮಂದಿರ ಲೋಕಾರ್ಪಣೆ ದಿನ ಸಿದ್ದವಾಗಲಿದೆ 7000kg “ರಾಮ ಹಲ್ವಾ”
ಅಯೋಧ್ಯೆ: ಜನವರಿ 22ರಂದು ನಡೆಯಲಿರುವ ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆಗೆ ಸಕಲ ಸಿದ್ಧತೆ ನಡೆಯುತ್ತಿದ್ದು, ಇಡೀ ದೇಶವೇ ಈ ಹಬ್ಬವನ್ನು ಸಂಭ್ರಮಪಡುವ ದಿನವಾಗಿದೆ. ಈ ಹಬ್ಬದ ಮೆರುಗನ್ನು ಹೆಚ್ಚಿಸಲು ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಬಾಣಸಿಗರೊಬ್ಬರು ವಿಶೇಷ ‘ರಾಮ ಹಲ್ವಾ’ ತಯಾರಿಸಲಿದ್ದಾರೆ. ಅಂತಾರಾಷ್ಟ್ರೀಯ ಖ್ಯಾತಿಯ ಬಾಣಸಿಗ, ನಾಗ್ಪುರ ಮೂಲದ ವಿಷ್ಣು ಮನೋಹರ್ ಅವರು ರಾಮಮಂದಿರ ಲೋಕಾರ್ಪಣೆ ದಿನ ವಿಶೇಷ ‘ರಾಮ ಹಲ್ವಾ’ತಯಾರಿಸಲಿದ್ದಾರೆ. ಸುಮಾರು 7 ಸಾವಿರ ಕೆ.ಜಿ. ರಾಮ ಹಲ್ವಾಗೆ 12 ಸಾವಿರ ಲೀಟರ್ ನೀರಿನ ಸಾಮರ್ಥ್ಯದ ಬೃಹತ್ ಕಡಾಯಿಯೊಂದನ್ನು ಕೂಡ […]
ಉಡುಪಿ ಪುತ್ತಿಗೆ ಪರ್ಯಾಯೋತ್ಸವ: ಜ.8ರಂದು ಪುತ್ತಿಗೆ ಶ್ರೀಗಳ ಪುರಪ್ರವೇಶ, ಪೌರಸನ್ಮಾನ
ಉಡುಪಿ: ಉಡುಪಿ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ಸುಗುಣೇಂದ್ರತೀರ್ಥ ಶ್ರೀಪಾದರ ಹಾಗೂ ಸುಶ್ರೀಂದ್ರತೀರ್ಥ ಶ್ರೀಪಾದರ ಪುರಪ್ರವೇಶ ಮತ್ತು ಪೌರಸನ್ಮಾನ ಕಾರ್ಯಕ್ರಮ ಜನವರಿ 8ರ ಸೋಮವಾರ ಸಂಜೆ 7 ಗಂಟೆಗೆ ಉಡುಪಿ ರಥಬೀದಿಯ ಆನಂದತೀರ್ಥ ಮಂಟಪದಲ್ಲಿ ನಡೆಯಲಿದೆ ಎಂದು ಪರ್ಯಾಯ ಸಮಿತಿಯ ಅಧ್ಯಕ್ಷ ಡಾ. ಎಚ್ ಎಸ್ ಬಲ್ಲಾಳ್ ಹೇಳಿದರು. ಉಡುಪಿಯ ಪುತ್ತಿಗೆ ಮಠದಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಗಳು ಜನವರಿ 18ರಂದು ತಮ್ಮ ಶಿಷ್ಯ […]
ಪರ್ಯಾಯ ಶ್ರೀಪಾದರಿಂದ “ಕೋಟಿ ತುಳಸಿ ಅರ್ಚನೆ” ಯ ಕರಪತ್ರ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ.

ಉಡುಪಿ: ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯ ಹಾಗೂ ಅನುಜ್ಞೆಯ ಮೇರೆಗೆ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾಸಭಾ ಕಡಿಯಾಳಿ ಶಾಖೆಯ ನೇತೃತ್ವದಲ್ಲಿ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಬ್ರಾಹ್ಮಣ ಸಮುದಾಯದ ಸಹಾಯ ಸಹಕಾರದೊಂದಿಗೆ ಉಡುಪಿಯ ರಾಜಾಂಗಣದಲ್ಲಿ ಡಿ.31 ರವಿವಾರದಂದು ನಡೆಯಲಿರುವ ಋಕ್ಮಿಣೀಕರಾರ್ಚಿತ ಶ್ರೀಕೃಷ್ಣನಿಗೆ ಶ್ರೀ ವಿಷ್ಣು ಸಹಸ್ರ ನಾಮಾವಳೀ ಸಹಿತ “ಕೋಟಿ ತುಳಸಿ ಅರ್ಚನೆ”ಯ ಆಮಂತ್ರಣ ಪತ್ರಿಕೆ ಹಾಗೂ ಈ ಬಗ್ಗೆ ಶ್ರೀಮಠದಿಂದ ಪ್ರಕಟಿತ ಮನವಿಯ ಕರಪತ್ರವನ್ನು ಪರ್ಯಾಯ ಮಠದ ಪರಮ […]