ಚಾರಣಿಗರಿಗೆ ಸಿಹಿಸುದ್ದಿ: ಜೂನ್ 1ರಿಂದ ಈ ಎಲ್ಲಾ ಟ್ರೆಕ್ಕಿಂಗ್ ಗಳಿಗೆ ಗ್ರೀನ್ ಸಿಗ್ನಲ್

ಬೆಳ್ತಂಗಡಿ: ತಾಲೂಕಿನ ಪ್ರಕೃತಿ ಪ್ರಿಯರು ಮತ್ತು ಚಾರಣಿಗರಿಗೆ ಸಂತಸದ ಸುದ್ದಿ ಸಿಕ್ಕಿದೆ. ಮಳೆಗಾಲ ಆರಂಭದ ಹೊತ್ತಿಗೆ ಪಶ್ಚಿಮ ಘಟ್ಟದ ಹಸಿರು ಮರುಕಳಿಸಿದ್ದು, ಪ್ರಮುಖ ಚಾರಣ ಸ್ಥಳಗಳು ಹಾಗೂ ಜಲಪಾತಗಳು ಮತ್ತೆ ಪ್ರವಾಸಿಗರನ್ನು ಆಕರ್ಷಿಸಲು ಸಜ್ಜಾಗಿವೆ. ಜೂನ್ 1ರಿಂದ ನೇತ್ರಾವತಿ ಪೀಕ್, ಬಂಡಾಜೆ ಫಾಲ್ಸ್, ಗಡಾಯಿಕಲ್ಲು ಸೇರಿದಂತೆ ಹಲವು ಪ್ರವಾಸಿ ತಾಣಗಳು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುತ್ತಿದೆ. ಕಳೆದ ಜನವರಿಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗವು ಕಾಡಿಚ್ಚಿನ ಭೀತಿ ಮತ್ತು ಅರಣ್ಯ ಸಂರಕ್ಷಣೆ ದೃಷ್ಟಿಯಿಂದ ಈ ಪ್ರದೇಶಗಳಿಗೆ ಪ್ರವೇಶ ನಿಷೇಧ […]

ಗ್ರೀನ್ ಸ್ಪೇಸ್, ಪೀಸ್‌ಫುಲ್ ಮೈಂಡ್: ಮನೆ ಮತ್ತು ಆಫೀಸ್‌ನಲ್ಲಿರಲಿ ಒಳಾಂಗಣ ಗಿಡಗಳು

ಇಂದಿನ ವೇಗದ ಜೀವನಶೈಲಿಯಲ್ಲಿ ಮಾನಸಿಕ ಒತ್ತಡ, ಆತಂಕ ಮತ್ತು ದಣಿವು ಸಾಮಾನ್ಯ ಸಮಸ್ಯೆಗಳಾಗಿವೆ. ಇಂತಹ ಸಂದರ್ಭದಲ್ಲಿ ಮನೆಯೊಳಗೆ ಅಥವಾ ಆಫೀಸ್ ಕೆಲಸದ ಸ್ಥಳದಲ್ಲಿ ಸಣ್ಣ ಸಣ್ಣ ಹಸಿರು ಗಿಡಗಳನ್ನು ಬೆಳೆಸುವುದು ಕೇವಲ ಅಲಂಕಾರವಲ್ಲ, ಅದು ಮನಸ್ಸಿಗೆ ನೆಮ್ಮದಿ ನೀಡುವ ಸಹಜ ಚಿಕಿತ್ಸೆ ಎನ್ನಬಹುದು. ಮನಸ್ಸಿಗೆ ಒಳ್ಳೆಯದು ಹಸಿರು ಗಿಡಗಳು ಮನೋವಿಜ್ಞಾನ ತಜ್ಞರ ಪ್ರಕಾರ, ಪ್ರಕೃತಿಯೊಂದಿಗೆ ಸಂಪರ್ಕ ಹೊಂದಿರುವವರು ಹೆಚ್ಚು ಶಾಂತ ಮನಸ್ಥಿತಿಯನ್ನು ಅನುಭವಿಸುತ್ತಾರೆ. ಮನೆಯ ಕೋಣೆ, ಬಾಲ್ಕನಿ ಅಥವಾ ಕಚೇರಿ ಮೇಜಿನ ಮೇಲೆ ಇರುವ ಹಸಿರು ಗಿಡಗಳು […]

ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ: 3,250 ರೂ.ಗೆ 65 ಸಾವಿರ ರೂ. ವಿಮಾ ರಕ್ಷಣೆ! ಜೂನ್‌ನಿಂದ ಯೋಜನೆ ಜಾರಿ?

ತೋಟಗಾರಿಕಾ ಇಲಾಖೆ ವತಿಯಿಂದ ರಾಜ್ಯದ ತೆಂಗು ಬೆಳೆಗಾರರಿಗೆ ಮಹತ್ವದ ಭರವಸೆ ದೊರೆಯುವ ಸಾಧ್ಯತೆ ಇದೆ. ಹಲವು ವರ್ಷಗಳಿಂದ ರೈತರು ಕೇಳುತ್ತಿದ್ದ ತೆಂಗು ಬೆಳೆ ವಿಮೆ ಯೋಜನೆ ಇದೀಗ ಅಂತಿಮ ಹಂತ ತಲುಪಿದ್ದು, ಜೂನ್ ತಿಂಗಳಿನಿಂದ ‘ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ’ ಜಾರಿಗೆ ಬರಲಿದೆ ಎನ್ನಲಾಗಿದೆ. ಈ ಯೋಜನೆಯಡಿ ಪ್ರತಿ ಹೆಕ್ಟೇರ್ ತೆಂಗು ಬೆಳೆಗೆ 65,000 ರೂ.ವರೆಗೆ ವಿಮಾ ರಕ್ಷಣೆ ಸಿಗಲಿದ್ದು, ರೈತರು ಕೇವಲ 5% ಪ್ರೀಮಿಯಂ ಅಂದರೆ ಸುಮಾರು 3,250 ರೂ. ಪಾವತಿಸಿದರೆ ಸಾಕಾಗುತ್ತದೆ. ಪ್ರಕೃತಿ […]

ಮುತ್ತಜ್ಜ ನೆಟ್ಟ ಮರ ಮರಿಮೊಮ್ಮಗನಿಗೆ ನೆರಳು ಮಾತ್ರ ಕೊಡ್ತಿಲ್ಲ, ಪ್ರತೀ ದಿನ ಕೊಡ್ತಿದೆ ಸಂಪತ್ತು, ಮರದಿಂದ ಬದಲಾಯ್ತು ಬದುಕು!

ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯ ಗ್ರಾಮೀಣ ಭಾಗಗಳಲ್ಲಿ ಹಲಸಿನ ಮರಗಳು ಸಾಮಾನ್ಯವಾಗಿ ಕಂಡುಬರುತ್ತವೆ. ಆದರೆ ಮನಾಟು ಗ್ರಾಮದಲ್ಲಿರುವ ಒಂದು ವಿಶಿಷ್ಟ ಹಲಸಿನ ಮರ ಇದೀಗ ಕುಟುಂಬದ ಆರ್ಥಿಕ ಬಲವಾಗಿದ್ದು, ಗ್ರಾಮಸ್ಥರ ಗಮನ ಸೆಳೆಯುತ್ತಿದೆ. ಸುಮಾರು 50 ವರ್ಷಗಳ ಹಿಂದೆ ಸುರೇಶ್ ಅವರ ಮುತ್ತಜ್ಜ ನೆಟ್ಟ ಈ ಮರ ಇಂದು ಕುಟುಂಬಕ್ಕೆ ಆಶೀರ್ವಾದವಾಗಿ ಪರಿಣಮಿಸಿದೆ. ಜೊತೆಗೆ ಗಿಡಿಗಳನ್ನು ಯಾಕೆ ನೆಡಬೇಕು, ಅದನ್ನು ಮರವಾಗುವ ತನಕ ಯಾಕೆ ಬೆಳೆಸಬೇಕು, ಉಳಿಸಬೇಕು ಎನ್ನುವುದನ್ನು ಈ ಒಂದು ಪ್ರಸಂಗ ಅರ್ಥ ಮಾಡಿಸಿದೆ. ಬೃಹತ್ […]

ಬರಿದಾಗುತ್ತಿದೆ ಅಂತರ್ಜಲ: ಕರಾವಳಿಗರಿಗೆ “ಹಾಟ್” ನ್ಯೂಸ್! ಮುಂದಿದೆ ಸಂಕಷ್ಟ?

ದಕ್ಷಿಣ ಕನ್ನಡದಲ್ಲಿ ಬಿಸಿಲಿನ ತೀವ್ರತೆ: ಅಂತರ್ಜಲ ಮಟ್ಟ ಕುಸಿತ, ಕುಡಿಯುವ ನೀರಿಗೆ ಆತಂಕ ರಾಜ್ಯದಲ್ಲಿ ಅತೀ ಹೆಚ್ಚು ಮಳೆಯಾಗುವ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಈ ಬಾರಿ ಪರಿಸ್ಥಿತಿ ತೀವ್ರವಾಗಿ ಬದಲಾಗಿದೆ. 35–36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದು, ಬಿಸಿಲಿನ ತೀವ್ರತೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕುಸಿಯುತ್ತಿದೆ ಅಂತರ್ಜಲ, ಬರಿದಾಗುತ್ತಿವೆ ಬಾವಿಗಳು ಜಿಲ್ಲೆಯ ಹಲವು ಭಾಗಗಳಲ್ಲಿ, ವಿಶೇಷವಾಗಿ ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ಪ್ರದೇಶಗಳಲ್ಲಿ, ಅಂತರ್ಜಲ ಮಟ್ಟ ಗಣನೀಯವಾಗಿ ಕುಸಿದಿದೆ. ಎಂದಿಗೂ ನೀರಿನಿಂದ […]