ನೇರಳೆ ಹಣ್ಣಿನ ಸಮೃದ್ಧ ಫಸಲು ಬರಗಾಲದ ಮುನ್ಸೂಚನೆಯೇ? ಪೂರ್ವಜರ ನಂಬಿಕೆಗೆ ಇಲ್ಲಿದೆ ವೈಜ್ಞಾನಿಕ ವಿವರಣೆ

ಬೆಂಗಳೂರು: ಈ ವರ್ಷ ರಾಜ್ಯದಲ್ಲಿ ಹೇರಳವಾಗಿ ಕಂಡುಬರುತ್ತಿರುವ ನೇರಳೆ ಹಣ್ಣಿನ ಫಸಲು ಬರಗಾಲದ ಸೂಚನೆಯೇ ಎಂಬ ಚರ್ಚೆ ಜೋರಾಗಿದೆ. “ನೇರಳೆ ಹಣ್ಣು ಹೆಚ್ಚು ಬಂದರೆ ಆ ವರ್ಷ ಬರಗಾಲ ಬರುತ್ತದೆ” ಎಂಬುದು ಜನಪದದಲ್ಲಿ ಹಿರಿಯರಿಂದ ಬಂದಿರುವ ನಂಬಿಕೆ. ಇದೇ ವೇಳೆ ಮುಂಗಾರು ಮಳೆ ನಿರೀಕ್ಷೆಗಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯೂ ಈ ಚರ್ಚೆಗೆ ಮತ್ತಷ್ಟು ಬಲ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಎಲ್‌ನಿನೋ ಪರಿಣಾಮದಿಂದ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆ ದಾಖಲಾಗುವ […]

ಹುಟ್ಟುಹಬ್ಬದ ಸಂಭ್ರಮಕ್ಕೆ ಹಸಿರು ಸ್ಪರ್ಶ: ನಮ್ಮ ಹುಟ್ಟನ್ನು ಹೀಗೆ ಹಬ್ಬವಾಗಿಸೋಣ

ಹುಟ್ಟುಹಬ್ಬವು ಪ್ರತಿಯೊಬ್ಬರ ಜೀವನದಲ್ಲಿಯೂ ವಿಶೇಷ ದಿನ. ಸಾಮಾನ್ಯವಾಗಿ ನಾವು ಈ ದಿನವನ್ನು ಕೇಕ್ ಕತ್ತರಿಸುವುದು, ಉಡುಗೊರೆಗಳನ್ನು ಸ್ವೀಕರಿಸುವುದು ಮತ್ತು ಸ್ನೇಹಿತರೊಂದಿಗೆ ಸಂಭ್ರಮಿಸುವ ಮೂಲಕ ಆಚರಿಸುತ್ತೇವೆ. ಆದರೆ ನಮ್ಮ ಸಂತೋಷದ ಜೊತೆಗೆ ಪರಿಸರಕ್ಕೂ ಒಂದು ಸಣ್ಣ ಕೊಡುಗೆ ನೀಡಿದರೆ, ಆ ಹುಟ್ಟುಹಬ್ಬ ಇನ್ನಷ್ಟು ಅರ್ಥಪೂರ್ಣವಾಗುತ್ತದೆ. ಇಂದಿನ ಪರಿಸರ ಸಮಸ್ಯೆಗಳಾದ ಹವಾಮಾನ ಬದಲಾವಣೆ, ಅರಣ್ಯ ನಾಶ, ಮಾಲಿನ್ಯ ಮತ್ತು ನೀರಿನ ಕೊರತೆಗಳನ್ನು ಗಮನಿಸಿದರೆ, ಪ್ರತಿಯೊಬ್ಬರೂ ತಮ್ಮ ಮಟ್ಟಿಗೆ ಪರಿಸರ ಸಂರಕ್ಷಣೆಯಲ್ಲಿ ಭಾಗವಹಿಸುವುದು ಅತ್ಯಗತ್ಯವಾಗಿದೆ. ಒಂದು ಗಿಡ ನೆಡುವ ಸಂಕಲ್ಪ ಹುಟ್ಟುಹಬ್ಬದಂದು […]

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮುನಿಯಾಲ್ ಆಯುರ್ವೇದ ಕಾಲೇಜಿನಲ್ಲಿ ಔಷಧೀಯ ಸಸ್ಯ ಹಾಗೂ ಸೀಡ್ ಬಾಲ್ವಿತರಣೆ

ಮಣಿಪಾಲ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮುನಿಯಾಲ್ ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸಸ್‌ನಲ್ಲಿ ಜೂನ್ 5 ರಂದು ಔಷಧೀಯ ಸಸ್ಯ ವಿತರಣೆ ಹಾಗೂ ಸೀಡ್ ಬಾಲ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ವಿದ್ಯಾರ್ಥಿಗಳಲ್ಲಿ ಪ್ರಕೃತಿ ಪ್ರೇಮವನ್ನುಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಡಾ. ಶುಭಾ, ಆಡಳಿತಾಧಿಕಾರಿ ಯೋಗೇಶ್ ಶೆಟ್ಟಿ, ಸ್ನಾತಕೋತ್ತರ ವಿಭಾಗದ ಡೀನ್ ಡಾ. ರವಿಶಂಕರ ಶೆಣೈ, ಡಾ. ದಿನೇಶ್ ನಾಯಕ್ ಹಾಗೂ ದ್ರವ್ಯಗುಣ ವಿಭಾಗದ […]

ಹಸಿರಲೆ ಗೊಬ್ಬರ ಬೀಜಗಳ ಬಳಕೆಯಿಂದ ಮಣ್ಣಿನ ಆರೋಗ್ಯ ವೃದ್ಧಿ.

ಕೃಷಿಯಲ್ಲಿ ಗುಣಮಟ್ಟದ ಆಹಾರ ಉತ್ಪಾದಿಸುವ ದೃಷ್ಟಿಯಿಂದ ಸರ್ಕಾರವು ಸಮಗ್ರ ಪೋಷಕಾಂಶ ನಿರ್ವಹಣೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಮಣ್ಣಿನ ಫಲವತ್ತತೆಯನ್ನು ಉತ್ತಮ ಪಡಿಸುವ ಸಲುವಾಗಿ ಮಣ್ಣಿಗೆ ಹೆಚ್ಚಿನ ಪ್ರಮಾಣದಲ್ಲಿ ವಿವಿಧ ಸಾವಯವ ಗೊಬ್ಬರಗಳನ್ನುಸೇರಿಸುವುದು ಅವಶ್ಯಕವಾಗಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಣ್ಣಿನಲ್ಲಿ ಸಾವಯವ ಅಂಶವು ಕಡಿಮೆಯಾಗುತ್ತಾ ಬಂದಿದ್ದು, ಮಣ್ಣಿನ ಆರೋಗ್ಯ ಕ್ಷೀಣಿಸುತ್ತಿದೆ. ರಾಜ್ಯದಲ್ಲಿ ಸುಮಾರು 58.00 ಲಕ್ಷ ಹೆಕ್ಟೇರ್ ಕೃಷಿ ಭೂಮಿಯ ಮಣ್ಣಿನಲ್ಲಿ ಶೇ.0.5ಕ್ಕೂ ಕಡಿಮೆ ಸಾವಯವ ಇಂಗಾಲ ಇರುವುದು ಮಣ್ಣು ಮಾದರಿಗಳ ವಿಶ್ಲೇಷಣೆಯಿಂದ ಕಂಡುಬಂದಿರುತ್ತದೆ. ಆದ್ದರಿಂದ ಮಣ್ಣಿಗೆ […]

ಕೇರಳಂನಿಂದಲೇ ಮುಂಗಾರು ಮಳೆ ಆರಂಭಕ್ಕೆ ಕಾರಣವೇನು?

ದೇಶದ ಹಲವು ಭಾಗಗಳಲ್ಲಿ ಬಿಸಿಗಾಳಿ ಮತ್ತು ಉಷ್ಣಾಂಶ ಏರಿಕೆಯಿಂದ ಜನರು ತತ್ತರಿಸುತ್ತಿರುವ ನಡುವೆಯೇ ಈ ಬಾರಿಯ ನೈಋತ್ಯ ಮುಂಗಾರು ಸ್ವಲ್ಪ ವಿಳಂಬವಾಗಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಆರಂಭದಲ್ಲಿ ಮೇ 26ರಂದೇ ಕೇರಳಕ್ಕೆ ಮುಂಗಾರು ಆಗಮಿಸಬಹುದು ಎಂದು ಅಂದಾಜಿಸಲಾಗಿದ್ದರೂ, ಬದಲಾಗಿರುವ ಹವಾಮಾನ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಮುಂಗಾರು ಪ್ರವೇಶ ಮುಂದೂಡಿಕೆಯಾಗಿದೆ. ಮುಂಗಾರು ಆರಂಭವನ್ನು ಹೇಗೆ ಘೋಷಿಸಲಾಗುತ್ತದೆ?ಕೇರಳದಲ್ಲಿರುವ 14 ಹವಾಮಾನ ಕೇಂದ್ರಗಳ ಪೈಕಿ ಕನಿಷ್ಠ 60 ಶೇಕಡಾ ಕೇಂದ್ರಗಳಲ್ಲಿ 2.5 ಮಿ.ಮೀ. ಅಥವಾ […]