ದೈಹಿಕ ಮತ್ತು ದೇಹದಾಡ್ಯತೆ ಪರೀಕ್ಷೆ ಮುಂದೂಡಿಕೆ

ಉಡುಪಿ: ಜಿಲ್ಲಾ ಪೊಲೀಸ್ ಘಟಕದ 2022-23 ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿ.ಎ.ಆರ್/ ಡಿ.ಎ.ಆರ್) ಪುರುಷ ಮತ್ತು ತೃತೀಯ ಲಿಂಗ ಪುರುಷ -3064 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಗೆ ಜುಲೈ 10 ರಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಿಗಧಿಪಡಿಸಲಾಗಿದ್ದ ದೈಹಿಕ ಮತ್ತು ದೇಹದಾಢ್ಯತೆ ಪರೀಕ್ಷೆಯನ್ನು ಮಳೆ ಹಿನ್ನೆಲೆ, ಮುಂದೂಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಯೋಗ ತರಬೇತಿ

ಕುಂದಾಪುರ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬೆಳಿಗ್ಗಿನ ವಿಭಾಗದಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕ ಹಾಗೂ ವೈ ಆರ್ ಸಿ ಘಟಕದ ವತಿಯಿಂದ ಯೋಗ ತರಬೇತಿ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಯೋಗ ಶಿಕ್ಷಕರಾದ ಶ್ರೀ ಮಂಜುನಾಥ ಬಿಜೂರು ಆಗಮಿಸಿದ್ದರು. ಯೋಗ ಎಂದರೆ ಕೇವಲ ಆಸನಗಳಲ್ಲ, ಅದಕ್ಕೂ ಹೊರತಾಗಿ ನಾವು ಪಾಲಿಸಬೇಕಾದ ನಿಯಮಗಳನ್ನು ವಿವರವಾಗಿ ತಿಳಿಸಿಕೊಟ್ಟಿದ್ದಲ್ಲದೆ ದಿನನಿತ್ಯ ಮಾಡಬಹುದಾದ ಕೆಲವು ಸರಳ ಆಸನಗಳನ್ನು ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ಕಲಿಸಿಕೊಟ್ಟರು. ಮಧ್ಯಾಹ್ನದ […]

ಬರೋಡಾ ಬ್ಯಾಂಕ್ ಮಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ.

ಮಂಗಳೂರು: ಬರೋಡಾ ಬ್ಯಾಂಕ್ ಮಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜನರಲ್ ಮ್ಯಾನೇಜರ್ ಮತ್ತು ವಲಯ ಮುಖ್ಯಸ್ಥರಾದ ಶ್ರೀ ರಾಜೇಶ್ ಖನ್ನಾ ಉದ್ಘಾಟಿಸಿ ಮಾತನಾಡಿ, ವ್ಯಕ್ತಿಯ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಯೋಗದ ಮಹತ್ವದ ಕುರಿತು ಮಾತನಾಡಿದರು. ಶ್ರೀಮತಿ ದೇವಿಕಾ ಪುರುಷೋತ್ತಮ್, ರಾಷ್ಟ್ರೀಯ ಮಟ್ಟದ ಯೋಗ ಶಿಕ್ಷಕಿ ಮತ್ತು ರೆಫ್ರಿ ಇವರು ಯೋಗ ಅಧಿವೇಶನವನ್ನು ಮುನ್ನಡೆಸಿದರು. ಶ್ರೀ ಅಶ್ವಿನಿ ಕುಮಾರ್, ಡಿಜಿಎಂ-ವ್ಯವಹಾರ ಅಭಿವೃದ್ಧಿ, ಶ್ರೀ ಸನಿಲ್ ಕುಮಾರ್, ಆರ್‌ಎಂ-ಮಂಗಳೂರು ನಗರ, ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ […]

ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ: ವಿಶ್ವ ಯೋಗ ದಿನಾಚರಣೆ

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ವತಿಯಿಂದ ಶುಕ್ರವಾರ ವಿಶ್ವ ಯೋಗ ದಿನಾಚರಣೆಯನ್ನು ಜಗನ್ನಾಥ ಸಭಾಭವನದಲ್ಲಿ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬ್ಲಿಸ್ ಯೋಗ ತರಬೇತಿ ಕೇಂದ್ರದ ತರಬೇತುದಾರರಾದ ಶ್ರೀಮತಿ ಸುಮನ ಶ್ರೀನಿವಾಸ್ ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಯೋಗದಿಂದ ಅರೋಗ್ಯ ರಕ್ಷಣೆ ಕುರಿತು ಮಾಹಿತಿ ನೀಡಿದರು. ಇವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಪ್ರತಿಮ ವಿ. ಎಸ್ ಇವರು ವಿವಿಧ ಬಗೆಯ ಯೋಗ ಪ್ರತ್ಯಕ್ಷತೆಯನ್ನು ನೀಡಿ […]

ಪ್ರಕೃತಿ ಚಿಕಿತ್ಸೆ-ಯೋಗ ವಿಜ್ಞಾನ ವಿದ್ಯಾರ್ಥಿಗಳಿಂದ ಯೋಗ

ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ವತಿಯಿಂದ ಮಿಜಾರು ಶೋಭಾವನದ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ಬಾರಿಯ ಯೋಗ ದಿನಾಚರಣೆ ಧ್ಯೇಯ – ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಅಡಿಯಲ್ಲಿ ಕಾಲೇಜಿನ 400ಕ್ಕೂ ಅಧಿಕ ವಿದ್ಯಾರ್ಥಿಗಳು ಯೋಗಾಸನ ಮಾಡಿದರು. ಯೋಗ ಪ್ರೊಟೋಕಾಲ್ ನಿಯಮಾವಳಿ ಅನುಸಾರವಾಗಿ ತಾಡಾಸನ, ವೃಕ್ಷಸಾನ, ತ್ರಿಕೋನಾಸನ, ಅರ್ಧಚಕ್ರಾಸನ, ಇನ್ನಿತರ ಆಸನ ಮಾಡುವ ಮೂಲಕ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನೆರವೇರಿತು. ವಿದ್ಯಾರ್ಥಿ ಸ್ಫೂರ್ತಿ ಮೊಯ್ಲಿ ಕಾರ್ಯಕ್ರಮ ನಡೆಸಿಕೊಟ್ಟರು. ಪ್ರಕೃತಿ […]