ಬ್ರಹ್ಮಾವರ: ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಯುವತಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ.

ಬ್ರಹ್ಮಾವರ: ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಯುವತಿಯೊಬ್ಬಳಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪ್ಪಿನಕೋಟೆಯ ನಡುಹಿತ್ಲು ನಿವಾಸಿ ಶ್ರೇಯಾ(21) ಎಂಬವರಿಗೆ ನ.24ರಂದು ಟೆಲಿಗ್ರಾಂ ಖಾತೆಗೆ ಅಪರಿಚಿತ ವ್ಯಕ್ತಿಯೊಬ್ಬ ಲಿಂಕ್ ಕಳುಹಿಸಿ, ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ್ದರು. ಅದರಂತೆ ಶ್ರೇಯಾ ತನ್ನ ಖಾತೆಯಿಂದ ಆರೋಪಿ ತಿಳಿಸಿದ ಖಾತೆಗೆ ಒಟ್ಟು 1,05,000ರೂ. ಹಣವನ್ನು ವರ್ಗಾವಣೆ ಮಾಡಿದ್ದರು. ಆದರೆ ಆರೋಪಿ ಶ್ರೇಯಾ ಅವರಿಗೆ […]

ಉಡುಪಿ “ಬಲ್ಲಾಳ್ ಮೊಬೈಲ್ಸ್”ನಲ್ಲಿ ನಿಮಗಾಗಿ ಕಾದಿವೆ ಭರ್ಜರಿ ಆಫರ್ ಗಳು: ನಿಮ್ಮ ಶಾಪಿಂಗ್ ನ್ನು ಆಕರ್ಷಕ ಕೊಡುಗೆಗಳ ಮೂಲಕ‌ ಸ್ಮರಣೀಯವಾಗಿಸಿ.

ಉಡುಪಿ: ಕಲ್ಪನಾ ಚಿತ್ರಮಂದಿರ ಬಳಿಯ ಒರಾಯನ್ ಕಟ್ಟಡದಲ್ಲಿರುವ ಹೆಸರಾಂತ “ಬಲ್ಲಾಳ್ ಮೊಬೈಲ್ಸ್” ಶೋರೂಮ್‌ನಲ್ಲಿ ಗ್ರಾಹಕರಿಗಾಗಿ ಭರ್ಜರಿ ಆಫರ್‌ಗಳನ್ನು ಲಾಂಚ್ ಮಾಡಲಾಗಿದೆ. ಇಲ್ಲಿಗೆ ಭೇಟಿ ನೀಡುವ ಮೂಲಕ ನಿಮ್ಮ ಹಬ್ಬದ ಸಂತೋಷವನ್ನು ಶಾಪಿಂಗ್‌ ಮೂಲಕ ಮತ್ತಷ್ಟು ಹೆಚ್ಚಿಸಿಕೊಳ್ಳಬಹುದು. ಎಕ್ಸ್ಚೇಂಜ್ ಆಫರ್: ತಮ್ಮ ಹಳೆಯ ಸ್ಮಾರ್ಟ್‌ಫೋನ್‌ನ್ನು ಉತ್ತಮ ಮಾದರಿಯ ಹೊಸ ಫೋನ್‌ಗೆ ಅಪ್ಗ್ರೇಡ್ ಮಾಡಲು ಬಲ್ಲಾಳ್ ಮೊಬೈಲ್ಸ್ ವಿಶೇಷ ಎಕ್ಸ್ಚೇಂಜ್ ಆಫರ್ ನೀಡುತ್ತಿದೆ. ನಿಮಗೆ ಇಷ್ಟವಾದ ಬ್ರ್ಯಾಂಡ್‌ಗಳ ಹೊಸ ಫೋನ್‌ಗಳನ್ನು ಆಕರ್ಷಕ ದರದಲ್ಲಿ ಪಡೆಯಬಹುದು. “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” […]

ಉಡುಪಿ:ಡಿಡಿಆರ್‌ಸಿ ವತಿಯಿಂದ ವಿಕಲಚೇತನರ ಸಪ್ತಾಹ

ಉಡುಪಿ: ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಜಿಲ್ಲಾ ರೆಡ್ ಕ್ರಾಸ್ ಘಟಕಪ್ರಾಯೋಜಿತ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವತಿಯಿಂದ ನವೆಂಬರ್ 25 ರಿಂದ ಡಿಸೆಂಬರ್ 1 ರವರೆಗೆ ವಿವಿಧ ತಾಲೂಕುಗಳಲ್ಲಿ ವಿಕಲಚೇತನರ ಸಪ್ತಾಹವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮವು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆಯೊಂದಿಗೆ ಚಾಲನೆಗೊಂಡು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಮಾರೋಪ ಸಮಾರಂಭದೊಂದಿಗೆ ಕೊನೆಗೊಂಡಿತು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ 21 ಬಗೆಯ ವಿಕಲತೆ, ವಿಕಲಚೇತನರಿಗೆ ದೊರೆಯುವ ಸರಕಾರಿ ಸೌಲಭ್ಯಗಳು, ವಿಕಲಚೇತನರ ಆರೈಕೆ ಮತ್ತು […]

ಉಡುಪಿ:ಶಿಕ್ಷಕರ ಅರ್ಹತಾ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಉಡುಪಿ: ಪ್ರಸಕ್ತ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆ.ಎ.ಆರ್.ಟಿ.ಇ.ಟಿ) ಯು ಡಿಸೆಂಬರ್ 7 ರಂದು ಜಿಲ್ಲೆಯ 16ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4.30 ರವರೆಗೆ ನಡೆಯಲಿದೆ. ಸದರಿ ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ […]

ಡಿ. 3ರಂದು ತ್ರಿವರ್ಣ ವಿಶ್ವವೇದಿಕೆ (ರಿ.), ಕೀಳಂಜೆ ಇದರ 12ನೇ ವಾರ್ಷಿಕೋತ್ಸವ.

ಹೆಬ್ರಿ: ಹಾವಂಜೆ ಗ್ರಾಮದ ತ್ರಿವರ್ಣ ವಿಶ್ವವೇದಿಕೆ (ರಿ.), ಕೀಳಂಜೆ ಇದರ 12ನೇ ವಾರ್ಷಿಕೋತ್ಸವ ಸಮಾರಂಭ ಡಿ. 3ರಂದು ಸಂಜೆ 4ಗಂಟೆಯಿಂದ ಕೀಳಂಜೆ ಶ್ರೀ ನಂದಿಕೇಶ್ವರ ದೈವಸ್ಥಾನದ ವಠಾರದಲ್ಲಿ ನಡೆಯಲಿದೆ. ಇದೆ ಸಂದರ್ಭದಲ್ಲಿ ನಂದಿಕೇಶ್ವರ ದೈವಸ್ಥಾನದ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಹಾಗೂ ದಾನಿಗಳಿಗೆ ಸಮ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಚಾಣಾಕ್ಯ ಮೇಲೋಡಿಸ್ ಹೆಬ್ರಿ ಇವರಿಂದ ಸಂಗೀತಾ ರಸಮಂಜರಿ, ಸುಪ್ರಸಿದ್ಧ ನಾಟಕ ತಂಡವಾದ ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದಲ್ಲಿ ಶಶಿರಾಜ್ ರಾವ್ ಕಾವೂರು ಅವರ ಛತ್ರಪತಿ ಶಿವಾಜಿ […]