ಕಲಿಕಾದೀಪ ಯೋಜನೆ: ಮತ್ತೊಂದಷ್ಟು ಶಾಲೆಗಳಿಗೆ ವಿಸ್ತರಿಸಿದ ಶಿಕ್ಷಣ ಇಲಾಖೆ!

ಬೆಂಗಳೂರು: ಮೊದಲ ಹಂತದಲ್ಲಿ 1,145 ಶಾಲೆಗಳ ಮಕ್ಕಳಲ್ಲಿ ಮೂಲ ಗಣಿತ ತತ್ವಗಳು ಹಾಗೂ ಕನ್ನಡ–ಇಂಗ್ಲಿಷ್ ಭಾಷಾ ಸಾಮರ್ಥ್ಯ ಬೆಳೆಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಬೋಧನೆ ಒಳಗೊಂಡ ಈ ಯೋಜನೆ ಅನುಷ್ಠಾನಕ್ಕಾಗಿ ಇಲಾಖೆಯ ಅಧಿಕಾರಿಗಳು ಎಕ್ಸ್ಟೆಪ್ ಫೌಂಡೇಶನ್ ಜತೆ ಒಪ್ಪಂದ ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರ ಬಜೆಟ್ನಲ್ಲಿ ಘೋಷಿಸಿದ್ದ ‘ಕಲಿಕಾ ದೀಪ’ ಕಾರ್ಯಕ್ರಮದ ಭಾಗವಾದ ಯೋಜನೆಯನ್ನು ಕೊಪ್ಪಳ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2024-25ನೇ ಸಾಲಿನಲ್ಲೇ ಪ್ರಾಯೋಗಿಕವಾಗಿ ಜಾರಿ ಮಾಡಲಾಗಿತ್ತು. ಎರಡೂ ಜಿಲ್ಲೆಗಳಲ್ಲಿ ಉತ್ತಮ ಫಲಿತಾಂಶ […]
ಬೈಂದೂರು ಪ.ಪಂ. ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡಲು ಆಗ್ರಹ: ನಾಳೆ (ಸೆ.19) ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ

ಉಡುಪಿ: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಗ್ರಾಮೀಣ ಭಾಗಗಳನ್ನು ಅವೈಜ್ಞಾನಿಕವಾಗಿ ಸೇರಿಸಿರುವುದರಿಂದ ಕೃಷಿಕರು ಪ್ರತಿದಿನ ಪರದಾಡುವಂತಾಗಿದೆ. ಆದ್ದರಿಂದ ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ರೈತ ಸಂಘದ ನೇತೃತ್ವದಲ್ಲಿ ನಾಳೆ (ಸೆ.19) ಬೆಳಿಗ್ಗೆ 10ಗಂಟೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬ್ರಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬೈಂದೂರು ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಂದೂರು ವ್ಯಾಪ್ತಿಯ […]
ಕಾರ್ಕಳ ಕ್ರೈಸ್ಟ್ ಕಿಂಗ್: ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಅಧ್ಯಯನ ಕಾರ್ಯಕ್ರಮ

ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಅಧ್ಯಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ನಿಟ್ಟಿನಲ್ಲಿಹೊಸ್ಮಾರಿನಲ್ಲಿರುವ ಲೀಲಾ ಫಾರ್ಮ್ಸ್ ಹಣ್ಣುಗಳ ತೋಟಗಾರಿಕಾ ಕ್ಷೇತ್ರಕ್ಕೆ ಭೇಟಿ ನೀಡಲಾಯಿತು. ಅಲ್ಲಿ ವಿವಿಧ ತಳಿಯ ದೇಶಿ ಮತ್ತು ವಿದೇಶಿ ಹಣ್ಣುಗಳು, ಅವುಗಳನ್ನು ಬೆಳೆಯುವ ವಿಧಾನ, ಕೊಯ್ಲು, ಸಂಸ್ಕರಣೆ ಹಾಗೂ ಮಾರುಕಟ್ಟೆಯ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಪಡೆದುಕೊಂಡರು. ಲೀಲಾ ಫಾರ್ಮ್ಸ್ನ ಮಾಲಕರಾದ ಶಿವಾನಂದ ಶೆಣೈ ಹಾಗೂ ಅವರ ಪುತ್ರ ಶ್ರವಣ್ ಶೆಣೈ ತೋಟಗಾರಿಕಾ ವಿಧಾನಗಳ ಸಮಗ್ರ ಮಾಹಿತಿ ನೀಡಿದರು. […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಗೆ ಫೈನಲ್ ಪಿಚ್ ಡೇ ಸ್ಪರ್ಧೆಯಲ್ಲಿ ಬಹುಮಾನ

ಉಡುಪಿ,ಬಂಟಕಲ್: ಶ್ರೀ ಮಧ್ವ ವಾದಿರಾಜತಾಂತ್ರಿಕ ಮಹಾವಿದ್ಯಾಲಯ ಬಂಟಕಲ್ ಮತ್ತು ಕೆನರಾಇಂಜಿನಿಯರಿಂಗ್ ಕಾಲೇಜು, ಮಂಗಳೂರು ಜಂಟಿಯಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ದಿನಾಂಕ 13 ಸೆಪ್ಟೆಂಬರ್ 2025 ರಂದು ಫೈನಲ್ ಫೀಚ್ ಡೇ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಾವು ಕಲ್ಪಿಸಿರುವಸ್ಟಾರ್ಟ್ಅಪ್ ಕಲ್ಪನೆಗಳನ್ನು ರೂಪಿಸಿಕೊಳ್ಳಲು,ವಿಸ್ತರಿಸಿಕೊಳ್ಳಲು ಹಾಗೂ ಅನುಭವೀ ಮಾರ್ಗದರ್ಶಕರಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸಲು ಒಂದು ಉತ್ತಮವೇದಿಕೆಯಾಗಿತ್ತು. ಸ್ಪರ್ಧೆಯಲ್ಲಿ ಸಂಸ್ಥೆಯ 32 ವಿದ್ಯಾರ್ಥಿಗಳು ಮತ್ತು ಕೆನರಾ ಇಂಜಿನಿಯರಿಂಗ್ ಕಾಲೇಜಿನ ಒಟ್ಟು140 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಂತಿಮಸುತ್ತಿನಲ್ಲಿ ಸಂಸ್ಥೆಯ(ಎಸ್ ಎಮ್ವಿಐಟಿಎಮ್) ಒಂದು ಸ್ಟಾರ್ಟ್ಅಪ್ […]
ಸೆ.21ರಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ “ಗುರು ಸಂದೇಶ ಸಾಮರಸ್ಯ ಜಾಥಾ”

ಉಡುಪಿ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಬಿಲ್ಲವ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜನ್ಮದಿನಾಚರಣೆ ಪ್ರಯುಕ್ತ “ಗುರು ಸಂದೇಶ ಸಾಮರಸ್ಯ ಜಾಥಾ” ವನ್ನು ಇದೇ ಸೆ.21ರಂದು ಉಡುಪಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 2ಗಂಟೆಗೆ ಬನ್ನಂಜೆ ಜಯಲಕ್ಷ್ಮೀಯ ಪಾರ್ಕಿಂಗ್ ಪ್ರದೇಶದಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ರೀನಾ ಸುವರ್ಣ […]