ಉಡುಪಿ: ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಷಡಾಧಾರ ಪ್ರತಿಷ್ಠೆ ಭಕ್ತಿಭಾವದಿಂದ ಸಂಪನ್ನ

ಉಡುಪಿ: ಹಿರೇಬೆಟ್ಟುವಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ, ದೇವಾಲಯದ ಸಮಗ್ರ ಜೀರ್ಣೋದ್ಧಾರ ಪ್ರಕ್ರಿಯೆಯ ಪ್ರಮುಖ ಘಟ್ಟವಾದ ಶ್ರೀ ದೇವರ ಷಡಾಧಾರ ಪ್ರತಿಷ್ಠೆ ಹಾಗೂ ಆಧಾರ ಶಿಲೆಯ ಮೇಲೆ ರಜತ, ರತ್ನ ಮತ್ತು ಚಿನ್ನವನ್ನು ಒಳಗೊಂಡ ಶಿಲಕುಂಭ ಸ್ಥಾಪನೆ ಕಾರ್ಯಕ್ರಮವು ಭಕ್ತಿಭಾವ ಹಾಗೂ ವೈದಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು. ಶ್ರೀ ಕ್ಷೇತ್ರದ ತಂತ್ರಿಗಳಾದ ವಿದ್ವಾನ್ ಡಾ. ಶ್ರೀ ಸತ್ಯಕೃಷ್ಣ ಭಟ್, ಮಂಗಳೂರು ಅವರ ನೇತೃತ್ವದಲ್ಲಿ ಕನ್ಯಾ ಲಗ್ನದ ಶುಭ ಮುಹೂರ್ತದಲ್ಲಿ ಷಡಾಧಾರ ಪ್ರತಿಷ್ಠೆ ನೆರವೇರಿಸಲಾಯಿತು. ಇದಕ್ಕೂ ಮುನ್ನ ದೇವತಾ ಪ್ರಾರ್ಥನೆ, […]
ಕಾಪು: ‘ನಿಸರ್ಗ ಫ್ರೆಶ್’ ಕೋಲ್ಡ್ ಪ್ರೆಸ್ಟ್ ಆಯಿಲ್ & ಮಿಲ್ ಫ್ಯಾಕ್ಟರಿ ಔಟ್ಲೆಟ್ 4ನೇ ಮಳಿಗೆ ಅದ್ದೂರಿ ಉದ್ಘಾಟನೆ

ಉಡುಪಿ: ನೈಜ ದರದಲ್ಲಿ ಪರಿಶುದ್ಧಮರದಗಾಣದ ಅಡುಗೆ ಎಣ್ಣೆಗಳ ಉತ್ಪಾದನೆ ಮತ್ತು ಮಾರಾಟ ಮಾಡುವ ಮೂಲಕ ಜನಮೆಚ್ಚುಗೆ ಗಳಿಸಿರುವ “ನಿಸರ್ಗ ಫ್ರೆಶ್’ ಕೋಲ್ಡ್ ಪ್ರೆಸ್ಟ್ ಆಯಿಲ್ ಆ್ಯಂಡ್ ಮಿಲ್ ಫ್ಯಾಕ್ಟರಿ ಔಟ್ಲೆಟ್ ನೂತನ 4ನೇ ಮಳಿಗೆಯು ಕಾಪು ದಂಡತೀರ್ಥ ಶಾಲೆಯ ಬಳಿಯ ಪ್ರೆಸ್ಟೀಜ್ ಬಿಲ್ಡಿಂಗ್ನಲ್ಲಿ ಜು.12ರಂದು ಆರಂಭಗೊಂಡಿತು. ಕಾಪು ಶ್ರೀ ಹಳೇ ಮಾರಿಗುಡಿ ದೇಗುಲದ ಮಾಜಿ ಆಡಳಿತ ಟ್ರಸ್ಟಿ ಕೆ.ಶ್ರೀಧರ ಶೆಣೈ ಅವರು ಉದ್ಘಾಟಿಸಿ, ಉತ್ತಮ ಗುಣಮಟ್ಟ ಮತ್ತು ಆರೋಗ್ಯದಾಯಕ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಗ್ರಾಹಕರ ಮನಗೆದ್ದ […]
ವಿದ್ಯಾರ್ಥಿನಿಲಯದಲ್ಲಿ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳ ಪ್ರವೇಶಾತಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾoಶದ ಮೂಲಕ ಸಾಮಾನ್ಯ ಪದವಿ ಮಟ್ಟದ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮಾತ್ರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಮಂಜೂರಾತಿ ಸೀಟುಗಳಲ್ಲಿ ಶೇ.75 ಅಲ್ಪಸಂಖ್ಯಾತರು ಮತ್ತು ಶೇ.25 […]
ಉಡುಪಿ: ಜು. 15ರಂದು ‘ವಂದೇ ಮಾತರಂ’ 150ನೇ ವರ್ಷದ ಸಂಭ್ರಮ, ರಾಷ್ಟ್ರೀಯ ನಾಟಕೋತ್ಸವ

ಉಡುಪಿ: ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಅಧೀನದಲ್ಲಿರುವ ನವದೆಹಲಿಯ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಆಶ್ರಯದಲ್ಲಿ ‘ವಂದೇ ಮಾತರಂ’ 150ನೇ ವರ್ಷದ ಸಂಭ್ರಮ ಹಾಗೂ ಕವಿ ಚಕ್ರವರ್ತಿ ಕಾಳಿದಾಸ ಜಯಂತಿ ಅಂಗವಾಗಿ ರಾಷ್ಟ್ರವ್ಯಾಪಿ ರಾಷ್ಟ್ರೀಯ ನಾಟಕೋತ್ಸವ ಜುಲೈ 15ರಂದು ನಡೆಯಲಿದ್ದು, ಉಡುಪಿಯಲ್ಲಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಉಡುಪಿ ರಂಗಭೂಮಿ ಹಾಗೂ ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಸಹಭಾಗಿತ್ವದಲ್ಲಿ ‘ವಂದೇ ಮಾತರಂ’ ಉತ್ಸವ, ಯುವ ರಂಗೋತ್ಸವ ಹಾಗೂ ‘ಸ್ವಾತಂತ್ರ್ಯ ಶರಧಿ’ ಕನ್ನಡ ನಾಟಕ […]
ಉಡುಪಿ: ಪೊಲೀಸರು ಕಾನೂನು ಪಾಲನೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು – ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕ ಅಮಿತ್ ಸಿಂಗ್

ಉಡುಪಿ: ಪೊಲೀಸರು ಸದಾಕಾಲ ತಮ್ಮ ವೃತ್ತಿಯಲ್ಲಿ ಸಂವಿಧಾನವನ್ನು ಎತ್ತಿ ಹಿಡಿಯುವುದರೊಂದಿಗೆ ಕಾನೂನು ಪಾಲನೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು ಎಂದು ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಅಮಿತ್ ಸಿಂಗ್ ಹೇಳಿದರು. ಅವರು ನಗರದ ಡಿಎ ಆರ್ ಮೈದಾನದಲ್ಲಿ ಉಡುಪಿ ಜಿಲ್ಲಾ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ ವತಿಯಿಂದ ಸಶಸ್ತ್ರ ಮೀಸಲು ಪೊಲೀಸ್ ಕಾನ್ ಸ್ಟೇಬಲ್ ಗಳ 14ನೇ ತಂಡದ ನಿರ್ಗಮನ ಪಥ ಸಂಚಲನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು. ಪೊಲೀಸ್ ವೃತ್ತಿಯಲ್ಲಿ […]