ಉಡುಪಿ : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಅಣ್ಣಾಮಲೈ ಭೇಟಿ ; ವಿಶೇಷ ಪೂಜೆ ಸಲ್ಲಿಕೆ.

ಉಡುಪಿ : ಉಡುಪಿ ಜಿಲ್ಲೆಯ ಪ್ರಸಿದ್ಧ ಶಕ್ತಿ ಪೀಠವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡಿನ ರಾಜಕೀಯ ನಾಯಕ ಕೆ. ಅಣ್ಣಾಮಲೈ ಅವರು ಮಂಗಳವಾರ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಳಕ್ಕೆ ಆಗಮಿಸಿದ ಅಣ್ಣಾಮಲೈ ಅವರನ್ನು ದೇವಳದ ಆಡಳಿತ ಮಂಡಳಿ ಹಾಗೂ ಅರ್ಚಕ ವೃಂದ ಆತ್ಮೀಯವಾಗಿ ಸ್ವಾಗತಿಸಿತು. ಬಳಿಕ ಅವರು ದೇವಿಯ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ರಾಜ್ಯ ಹಾಗೂ ದೇಶದ ಸುಖ-ಶಾಂತಿ, ಸಮೃದ್ಧಿಗಾಗಿ […]

ಮಲ್ಪೆ ಕಡಲತೀರದಲ್ಲಿ ಬಲೆಗೆ ಸಿಲುಕಿದ್ದ ಆಮೆ ರಕ್ಷಣೆ

ಉಡುಪಿ: ಮಲ್ಪೆ ಕಡಲತೀರದಲ್ಲಿ ಮೀನುಗಾರಿಕಾ ಬಲೆಗೆ ಸಿಲುಕಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅಪರೂಪದ ಸಮುದ್ರ ಆಮೆಯನ್ನು ಸ್ಥಳೀಯ ಮೀನುಗಾರರೊಬ್ಬರು ರಕ್ಷಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ. ಮಲ್ಪೆಯ ಹನುಮಾನ್ ವಿಠೋಭ ಭಜನಾ ಮಂದಿರದ ಮುಂಭಾಗದ ಕಡಲತೀರದಲ್ಲಿ ಸಮುದ್ರದ ಅಲೆಗಳಿಗೆ ಸಿಲುಕಿ ಬಲೆಗೆ ಸಿಕ್ಕಿಕೊಂಡಿದ್ದ ಆಮೆಯನ್ನು ಕನ್ನಿ ಮೀನುಗಾರ ಸಂಘದ ಸಕ್ರಿಯ ಸದಸ್ಯ ಹಾಗೂ ಸ್ಥಳೀಯ ನಿವಾಸಿ ಜ್ಞಾನೇಶ್ವರ್ ಕೋಟ್ಯಾನ್ ಗಮನಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಅವರು ಆಮೆಯನ್ನು ಸುರಕ್ಷಿತವಾಗಿ ದಡಕ್ಕೆ ತಂದು, ಅದರ ದೇಹಕ್ಕೆ ಸುತ್ತಿಕೊಂಡಿದ್ದ ಮೀನುಗಾರಿಕಾ ಬಲೆಗಳನ್ನು […]

ಕಾರ್ಕಳ: ಯಶೋಯಾನ -2026 ಶೈಕ್ಷಣಿಕ ವಲಯದ ಎಸೆಸೆಲ್ಸಿ ಸಾಧನೆಯ ಸಂಭ್ರಮ ಕಾರ್ಯಕ್ರಮ

ಕಾರ್ಕಳ: 2025-26ರ ಶೈಕ್ಷಣಿಕ ವರ್ಷದಲ್ಲಿ 99.85% ಫಲಿತಾಂಶ ಪಡೆದು ಉಡುಪಿ ಜಿಲ್ಲೆಯಲ್ಲಿ ಪ್ರಥಮ ಮತ್ತು ರಾಜ್ಯದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಕಾರ್ಕಳ ಶೈಕ್ಷಣಿಕ ವಲಯದ ( ಕಾರ್ಕಳ ಮತ್ತು ಹೆಬ್ರಿ ತಾ.) ಶಾಲೆಗಳನ್ನು ಗೌರವಿಸಿ ಅಭಿನಂದಿಸುವ ಯಶೋಯಾನ -2026 ಕಾರ್ಯಕ್ರಮವು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ತಾಲೂಕಿನ ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘ, ಪ್ರೌಢಶಾಲಾ ಸಹಶಿಕ್ಷಕರ ಸಂಘ ಮತ್ತು ಕ್ರಿಯೇಟಿವ್ ವಿದ್ಯಾಸಂಸ್ಥೆಗಳು ಈ ಕಾರ್ಯಕ್ರಮದ ಆಯೋಜನೆ ಮಾಡಿದ್ದವು. ಕಾರ್ಕಳದ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ ಅವರು […]

ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಲಾಂಗ್ ಟರ್ಮ್ ನೀಟ್ ತರಬೇತಿ; ವಸತಿ, ಊಟ, ಕೋಚಿಂಗ್ ಸಂಪೂರ್ಣ ಉಚಿತ

ಕಾರ್ಕಳ: ಪ್ರಸ್ತುತ ಕಾಲದಲ್ಲಿ ಪದವಿಪೂರ್ವ ಶಿಕ್ಷಣ ಹಾಗೂ ನೀಟ್ ತರಬೇತಿಗಳು ಅತ್ಯಂತ ದುಬಾರಿಯಾಗಿದ್ದು ಪ್ರತಿಭಾವಂತ ಬಡ ಮಕ್ಕಳ ಪಾಲಿಗೆ ನೀಟ್ ತರಬೇತಿ ಎನ್ನುವುದು ಗಗನಕುಸುಮಾವಗಿದೆ. ಇದನ್ನರಿತ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಬಡಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಿರಂತರ ಒಂದಲ್ಲಾ ಒಂದು ಬಹುಪಯೋಗಿ ಶೈಕ್ಷಣಿಕ ಯೋಜನೆಗಳನ್ನು ಜಾರಿಗೊಳಿಸುತ್ತಾ ಬರುತ್ತಿದೆ.ಅತೀ ಕಡಿಮೆ ಶುಲ್ಕದೊಂದಿಗೆ ಅತ್ಯುತ್ತಮ ಶಿಕ್ಷಣ ನೀಡುವ ಈ ಸಂಸ್ಥೆ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿನ ಆಶಾಕಿರಣವಾಗಿ ಬೆಳೆದು ನಿಂತಿದೆ. ಈಗ ಮತ್ತೊಂದು […]

ಹೆಬ್ರಿಯ ಚಾಣಕ್ಯ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಚೆಸ್ ತರಗತಿ ಉದ್ಘಾಟನೆ

ಹೆಬ್ರಿ: ಚೆಸ್ ಆಟವು ವಿದ್ಯಾರ್ಥಿಗಳ ಏಕಾಗ್ರತೆ, ತಾರ್ಕಿಕ ಚಿಂತನೆ, ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಕಳೆದ 7 ವರ್ಷಗಳಿಂದ ಉಚಿತ ಚೆಸ್ ತರಬೇತಿಗಳನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೀಡುತ್ತಿರುವುದು ಶ್ಲಾಘನೀಯ ಎಂದು ಬ್ರಹ್ಮಾವರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಾಧಿಕಾರಿ ನಿತ್ಯಾನಂದ ಶೆಟ್ಟಿ ಹೇಳಿದರು. ಅವರು ಹೆಬ್ರಿ ಎಸ್. ಆರ್. ಸ್ಕೂಲ್ ಬಳಿಯ ಗುರುಕೃಪಾ ಬಿಲ್ಡಿಂಗ್‌ನಲ್ಲಿರುವಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಉಚಿತ ಚೆಸ್ […]