ಸೆ. 7 ರಂದು ತ್ರೈಮಾಸಿಕ ಅಂಚೆ ಅದಾಲತ್

ಉಡುಪಿ: ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಸೆಪ್ಟಂಬರ್ 7 ರಂದು ಬೆಳಗ್ಗೆ 11 ಗಂಟೆಗೆ ತ್ರೈಮಾಸಿಕಅಂಚೆ ಅದಾಲತ್ ಅನ್ನು ಆಯೋಜಿಸಲಾಗಿದೆ. ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಸೆ. 5 ರ ಮೊದಲು ಅಧೀಕ್ಷಕರ ಕಚೇರಿಗೆ ಕಳುಹಿಸಬಹುದು ಅಥವಾ ಅದಾಲತ್ ನಡೆಯುವ ದಿನದಂದು ಹಾಜರಿದ್ದು, ಸಮಕ್ಷಮ ಚರ್ಚಿಸಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ.
ಆ. 27 ರಂದು ನೇರ ಸಂದರ್ಶನ

ಉಡುಪಿ: ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು ಮುಖ್ಯ ರಸ್ತೆ ಕುಂಜಿಬೆಟ್ಟು ರಿಲಯನ್ಸ್ ಮಾರ್ಟ್ ಚಕ್ ಪಾಯಿಂಟ್ ಪೈಂಟ್ ಉಡುಪಿ ಇಲ್ಲಿ ಆಗಸ್ಟ್ 27 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ರಿಲೇಷ್ನ್ಶಿಪ್ ಮ್ಯಾನೇಜರ್, ರಿಲೇಷ್ನ್ಶಿಪ್ ಆಫಿಸರ್ ಹುದ್ದೆಗಳಿಗೆ ಪಿ.ಯು.ಸಿ ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ […]
ಉಡುಪಿ: ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಉಡುಪಿ: ಉಡುಪಿ ತೆಂಕಪೇಟೆಯ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ಕೃಷ್ಣ ನಾಯಕ್ ಅವರ ಪುತ್ರ ಆದಿತ್ಯ ನಾಯಕ್ (15) ಎಂದು ಗುರುತಿಸಲಾಗಿದೆ. ಕುಕ್ಕಿಕಟ್ಟೆ ಶಾಲೆಯ ವಿದ್ಯಾರ್ಥಿಯಾಗಿದ್ದು, ರಜೆಯ ಹಿನ್ನೆಲೆಯಲ್ಲಿ ಸಂಬಂಧಿಯೊಂದಿಗೆ ದೇವಸ್ಥಾನಕ್ಕೆ ಬಂದಿದ್ದ. ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ ನಡೆಯುತ್ತಿದ್ದು, ಕೆಲ ಭಕ್ತರು ಕೆರೆಯಲ್ಲಿ ಈಜುತ್ತಿದ್ದ ಹಿನ್ನೆಲೆಯಲ್ಲಿ ಆದಿತ್ಯ ಕೂಡ ಕೆರೆಗೆ ಇಳಿದು ಈಜುತ್ತಿದ್ದ. ಆದರೆ, ಆತನೊಂದಿಗೆ ಬಂದಿದ್ದ ಸಂಬಂಧಿಗೆ ಈಜು […]
ಸೆ. 4ರಂದು ಕೃಷ್ಣಾಷ್ಟಮಿ; ಸೆ.5ರಂದು ವಿಟ್ಲಪಿಂಡಿ ಉತ್ಸವ

ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ. 5ರಂದು ರಥಬೀದಿಯಲ್ಲಿ ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 4ರಂದು ರಾತ್ರಿ 12.12ಕ್ಕೆ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ನಡೆಯಲಿದೆ. ಸೆ. 5ರಂದು ಬೆಳಿಗ್ಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು, ರಾಜಾಂಗಣದಲ್ಲಿ ಹುಲಿವೇಷ ಕುಣಿತ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು. ಅಂದು ಮಧ್ಯಾಹ್ನ 3.30ಕ್ಕೆ […]
ನೀಟ್ ಪರೀಕ್ಷೆಗೆ ಪಡೆಯಿರಿ ಸಮಗ್ರ ತರಬೇತಿ: ಉಡುಪಿಯ ಆಕಾಶ್ ಇನ್ಸ್ಟಿ ಟ್ಯೂಟ್ ನಲ್ಲಿರುವ ಈ ತರಬೇತಿಯಿಂದ ನೀಟ್ ಪರೀಕ್ಷೆಯಲ್ಲಿ ಯಶಸ್ವಿಯಾಗಿ!

ಉಡುಪಿ: ವೈದ್ಯರಾಗುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಆಕಾಶ್ ಇನ್ಸ್ಟಿಟ್ಯೂಟ್, ಉಡುಪಿ ಶಾಖೆ (ಕುಂಜಿಬೆಟ್ಟು) ಸುವರ್ಣಾವಕಾಶ ನೀಡಿದೆ. NEET 2027 ಲಾಂಗ್ ಟರ್ಮ್ ಬ್ಯಾಚ್ಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಮಗ್ರ ತರಬೇತಿ ನೀಡುವ ಉದ್ದೇಶದಿಂದ ಅನುಭವಿ ಬೋಧಕ ವರ್ಗ, ವೈಯಕ್ತಿಕ ಮಾರ್ಗದರ್ಶನ ಹಾಗೂ ಫಲಿತಾಂಶ ಕೇಂದ್ರೀಕೃತ ಕಲಿಕಾ ವಿಧಾನವನ್ನು ಸಂಸ್ಥೆ ಒದಗಿಸುತ್ತಿದೆ. ವಿದ್ಯಾರ್ಥಿಗಳಿಗೆ ಒನ್-ಟು-ಒನ್ ಫ್ಯಾಕಲ್ಟಿ ಗೈಡನ್ಸ್, ಸಮಗ್ರ ಅಧ್ಯಯನ ಸಾಮಗ್ರಿ, ನಿಯಮಿತ ಪರೀಕ್ಷೆಗಳು ಹಾಗೂ ವಿಶೇಷ ಮಾರ್ಗದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ.ಇದಲ್ಲದೆ, […]