ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಷಟ್ ಶಿರ ಸುಬ್ರಮಣ್ಯ ಸ್ವಾಮಿ ವರ್ಧಂತಿ ಮಹೋತ್ಸವ

ಉಡುಪಿ: ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ನಾಗಾಲಯದಲ್ಲಿರುವ ವಲ್ಲಿ ದೇವಯಾನಿ ಸಹಿತ ಷಟ್ ಶಿರ ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಾನದಲ್ಲಿ ಇದೇ ತಿಂಗಳ ತಾರೀಕು 24ರ ಬುಧವಾರದಂದು ಪ್ರತಿಷ್ಠಾ ವಾರ್ಷಿಕ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ನೆರವೇರಲಿರುವುದು. ತತ್ ಸಂಬಂಧವಾಗಿ ಸನ್ನಿಧಾನದಲ್ಲಿ ಸಾಮೂಹಿಕ ಪ್ರಾರ್ಥನೆ, ಪಂಚ ವಿಂಷತಿ ಕಲಶಾರಾಧನೆ, ಕಲಶಾಭಿಷೇಕ, ಬ್ರಾಹ್ಮಣಾರಾಧನೆ, ಪ್ರಸನ್ನ ಪೂಜೆ, ಮಹಾಪೂಜೆ ಹಾಗೂ ಮಹಾ ಅನ್ನ ಸಂತರ್ಪಣೆ […]

ಪುತ್ತೂರಿನಲ್ಲಿ ಅಸ್ತಿತ್ವಕ್ಕೆ ಬಂತು ‘ಪುತ್ತಿಲ ಪರಿವಾರ’: ಗುರು ಗೋವಳ್ಕರ್ ಆಶಯ ಪೂರೈಸಲು ಹೊಸ ಸಂಘಟನೆಯ ಉದಯ

ಪುತ್ತೂರು: ಬಿಜೆಪಿಯಿಂದ ಬಂಡಾಯ ಎದ್ದು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಬೆವರಿಳಿಸಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಹೊಸ ಸಂಘಟನೆಯೊಂದು ಅಸ್ತಿತ್ವಕ್ಕೆ ಬಂದಿದೆ. ‘ಪುತ್ತಿಲ ಪರಿವಾರ’ ಹೆಸರಿನ ಈ ಸಂಘಟನೆಯನ್ನು ಇಂದು ಲೋಕಾರ್ಪಣೆಗೊಳಿಸಿಲಾಗಿದೆ. ಪುತ್ತೂರಿನಲ್ಲಿ ನಡೆದ ಪುತ್ತಿಲ ಬೆಂಬಲಿಗರ “ನಮ್ಮ ನಡಿಗೆ ಮಹಾಲಿಂಗೇಶ್ವರನ ಕಡೆಗೆ” ಪಾದಯಾತ್ರೆ ಬಳಿಕ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಬೃಹತ್ ಕಾರ್ಯಕರ್ತರ ಸಭೆಯಲ್ಲಿ ಸಂಘಟನೆಯನ್ನು ಲೋಕಾರ್ಪಣೆಗೊಳಿಸಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದಂತೆ […]

ಖ್ಯಾತ ಹಿರಿಯ ನಟ ಶರತ್ ಬಾಬು ನಿಧನ

ಖ್ಯಾತ ಹಿರಿಯ ನಟ ಶರತ್ ಬಾಬು ಬಹು ಅಂಗಾಂಗ ವೈಫಲ್ಯದಿಂದ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಮೇ.22ರಂದು ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ. ಶರತ್ ಬಾಬು ಅವರನ್ನು ಏಪ್ರಿಲ್​ನ ಮೊದಲ ವಾರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ತುಸು ಚೇತರಿಸಿಕೊಂಡ ಬಳಿಕ ಅವರನ್ನು ಹೈದರಾಬಾದ್​ಗೆ ಕರೆದೊಯ್ಯಲಾಗಿತ್ತು. ಅದಾದ ಬಳಿಕ ಅಲ್ಲಿ ಮತ್ತೆ ಅವರ […]

ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘದ ನೂತನ ಸಭಾಭವನ ಹಾಗೂ ಗೋದಾಮು ಉದ್ಘಾಟನೆ

ಉಡುಪಿ: ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘದ ಸಂಪೂರ್ಣ ಹವಾನಿಯಂತ್ರಿತ ನೂತನ ಸಭಾಭವನ, ಆಡಳಿತ ಕಚೇರಿ ಮತ್ತು ಗೋದಾಮು ಕಟ್ಟಡವನ್ನು ದ‌.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಭಾನುವಾರದಂದು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಅವರು ನೂತನ ನವೋದಯ ಸ್ವಸಹಾಯ ಗುಂಪುಗಳನ್ನು ಉದ್ಘಾಟಿಸಿ, ಫಲಾನುಭವಿಗಳಿಗೆ ಚೈತನ್ಯ ವಿಮಾ ಪರಿಹಾರವನ್ನು ವಿತರಿಸಿ ಮಾತನಾಡಿ, ರಾಜ್ಯಗಳಿಗೆ ಸೀಮಿತವಾಗಿದ್ದ ಸಹಕಾರ ಕ್ಷೇತ್ರವನ್ನು ಕೇಂದ್ರೀಕೃತಗೊಳಿಸಲು ಉದ್ದೇಶಿಸಿರುವ ಕೇಂದ್ರ ಸರಕಾರದ ಚಿಂತನೆಯಂತೆ ಸಹಕಾರಿ ಕ್ಷೇತ್ರವನ್ನು ಕೇವಲ ಕೃಷಿ ಪತ್ತಿನ ಸಂಘಕ್ಕೆ […]

ಗ್ರಾಹಕರನ್ನು ಸೆಳೆಯುತ್ತಿವೆ ಜನನಿ ಸಂಭ್ರಮೋತ್ಸವ ವರುಷದ ಆಚರಣೆ ಭಾರೀ ಕೊಡುಗೆಗಳು!!

ಬ್ರಹ್ಮಾವರ: ಗ್ರಾಹಕರೊಂದಿಗೆ ತಮ್ಮ ಬಾಂಧವ್ಯದ ನೆನಪಿಗಾಗಿ ಜನನಿ ಸಂಭ್ರಮೋತ್ಸವ ವರುಷದ ಆಚರಣೆಯನ್ನು ಹಮ್ಮಿಕೊಂಡಿದ್ದು ಇದಕ್ಕೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ವರ್ಷದ ಹರ್ಷಕ್ಕಾಗಿ ಪ್ರತಿ ಖರೀದಿಯೊಂದಿಗೆ ಉಚಿತ ಸಾಗಾಟ, ಖಚಿತ ಉಡುಗೊರೆ, ವಿಶೇಷ ವಿನಿಮಯ ಕೊಡುಗೆ, ಆಕರ್ಷಕ ರಿಯಾಯಿತಿ, ಸುಲಭ ಕಂತುಗಳ ಯೋಜನೆ, ಕ್ಯಾಶ್ ಬ್ಯಾಕ್, ಖಚಿತ ಲಕ್ಕಿ ಡ್ರಾ ಸೌಲಭ್ಯಗಳು ದೊರೆಯುತ್ತಿವೆ. ಪ್ರಸಿದ್ಧ ಕಂಪನಿಗಳ ಇಲೆಕ್ಟ್ರಾನಿಕ್ ವಸ್ತುಗಳು, ವಿವಿಧ ವಿನ್ಯಾಸದ ಫರ್ನಿಚರ್ ಉಪಕರಣಗಳು, ವಿಶಾಲ ಶ್ರೇಣಿಯ ಹೋಂ ಅಪ್ಲೈಯನ್ಸಸ್, ಕಿಚನ್ ಅಪ್ಲೈಯನ್ಸಸ್ ವಸ್ತುಗಳು, ಉತ್ಕೃಷ್ಠ ಗುಣಮಟ್ಟದ […]