ಉಡುಪಿ:ತಾಯಿ ಮರಣ ಪ್ರಮಾಣವನ್ನು ಶೂನ್ಯಗೊಳಿಸಲು ಒತ್ತು ನೀಡಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಗರ್ಭಿಣಿ ಮಹಿಳೆಯರು ಹಾಗೂ ನವಜಾತ ಶಿಶುಗಳ ನಿರಂತರ ಕಾಳಜಿಯನ್ನು ವೈದ್ಯರುಗಳುಹಾಗೂ ಸಿಬ್ಬಂದಿಗಳು ಮಾಡಿದ್ದಲ್ಲಿ ಮಾತ್ರ ತಾಯಿ ಮರಣ ಪ್ರಮಾಣವನ್ನು ತಡೆಗಟ್ಟಿ, ಶೂನ್ಯ ಗೊಳಿಸಲು ಸಾಧ್ಯ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಸರಕಾರ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಅನೇಕ ಯೋಜನೆಗಳು ಹಾಗೂ […]
ಮಧ್ಯರಾತ್ರಿ ಉಡುಪಿಗೆ ಆಗಮಿಸಿದ ಲಾರಿ ಚಾಲಕ ಅರ್ಜುನ್ ಮೃತದೇಹ

ಉಡುಪಿ: ಶಿರೂರು ಗುಡ್ಡ ಕುಸಿತದಿಂದ ಮೃತಪಟ್ಟ ಲಾರಿ ಚಾಲಕ ಅರ್ಜುನ್ ಮೃತದೇಹ ಮಧ್ಯರಾತ್ರಿ ಉಡುಪಿಗೆ ಆಗಮಿಸಿತ್ತು. ಉತ್ತರಕನ್ನಡ ಜಿಲ್ಲಾಡಳಿತ ಮೃತದೇಹವನ್ನು ಶವಪೆಟ್ಟಿಗೆಯಲ್ಲಿ ರವಾನಿಸುವ ಬದಲು ಬಟ್ಟೆಯಲ್ಲಿ ಬಿಡಿಬಿಡಿಯಾಗಿ ಕಟ್ಟಿ ಕಳುಹಿಸಿಕೊಟ್ಟಿತ್ತು. ಸೂಕ್ತ ವ್ಯವಸ್ಥೆ ಕಲ್ಪಿಸದೆ ಮೃತದೇಹ ರವಾನಿಸುವ ಮೂಲಕ ಉತ್ತರ ಕನ್ನಡ ಜಿಲ್ಲಾಡಳಿತದ ನಿರ್ಲಕ್ಷ್ಯ ವಹಿಸಿದೆಯೇ ಎಂಬ ಆರೋಪ ಕೇಳಿಬಂದಿದೆ. ಉಡುಪಿಯ ಕೇರಳ ಸಮಾಜ ಬಾಂಧವರು ಮತ್ತು ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಹಾಗೂ ಈಶ್ವರ್ ಮಲ್ಪೆ ಅವರು ಮೃತದೇಹ ಕಳುಹಿಸಿಕೊಡಲು ಫ್ರೀಜರ್ ಪೆಟ್ಟಿಗೆಯ ವ್ಯವಸ್ಥೆಯನ್ನು ಮಾಡಿಕೊಟ್ಟರು. […]
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ (ರಿ.).ಜೀರ್ಣೋದ್ಧಾರ ಕಾರ್ಯಕ್ರಮ

ಉಡುಪಿ:ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಅತ್ಯದ್ಭುತವಾಗಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಈಗಾಗಲೇ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿಯಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಳೀಯ ಶಾಸಕರ ಮಾರ್ಗದರ್ಶನದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕಾಗಿದ್ದು, ನಗರಸಭಾ ವ್ಯಾಪ್ತಿಯ 35 ವಾರ್ಡ್ ಗಳಲ್ಲೂ ಪ್ರತೀ ಮನೆಯ ಪ್ರತಿಯೊಬ್ಬ ಸದಸ್ಯರಿಗೂ ವಿಷಯ ತಲುಪುವಂತೆ ಮಾಡಲು ಕಾಪು ಶ್ರೀ […]
ಮಣಿಪಾಲ: ಸೆ.30 ರಂದು MSDC ಓರೇನ್ ಇಂಟರ್ನ್ಯಾಷನಲ್ “ಕಣ್ಣಿನ ಮೇಕಪ್” ಕಾರ್ಯಾಗಾರ

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ.ಟಿಎಂಎ ಫೌಂಡೇಶನ್ನ ಒಂದು ಘಟಕ) ಓರೇನ್ ಇಂಟರ್ನ್ಯಾಷನಲ್’ನಲ್ಲಿ ಯುವಕ-ಯುವತಿಯರಿಗೆ ಸೆ.30 ರಂದು ಬೆಳ್ಳಗೆ 10:30 ರಿಂದ 12:30 ರ ವರೆಗೆ “ಕಣ್ಣಿನ ಮೇಕಪ್” ಕುರಿತು ಕಾರ್ಯಾಗಾರ ನಡೆಯಲಿದೆ. ಕಣ್ಣಿನ ಮೇಕಪ್ ಕಾರ್ಯಾಗಾರ ನೋಡಿ ಕಲಿಯಬಹುದು. ವೆರೈಟಿಸ್: ▪️6 ಐಲೈನರ್ ವಿಧಗಳು. ▪️2 ಐಷಾಡೋ ವಿಧಗಳು. ಯಾರು ಹಾಜರಾಗಬಹುದು: ಎಲ್ಲರಿಗೂ ಮುಕ್ತವಾಗಿದೆ. ಕಲಿಕೆಯ ಫಲಿತಾಂಶ: ▪️ವಿವಿಧ ಶೈಲಿಗಳಲ್ಲಿ ಐಲೈನರ್ ಅಪ್ಲಿಕೇಶನ್. ▪️ ಕಟ್ ಕ್ರೀಸ್ ಐಶ್ಯಾಡೋ ಮೇಕಪ್. ▪️ ಕಣ್ಣಿನ ಗಾತ್ರ, […]
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿ: ಸ್ನೇಹಾಲಯ ಬ್ರಹ್ಮಾವರಕ್ಕೆ ದಿನಸಿ ಸಾಮಗ್ರಿಗಳ ವಿತರಣೆ.

ಉಡುಪಿ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಉಡುಪಿ ಎರಡನೇ ವರ್ಷಕ್ಕೆ ಪಾದರ್ಪಣೆಗೊಂಡ ಹಿನ್ನೆಲೆಯಲ್ಲಿ ಸ್ನೇಹಾಲಯ ಬ್ರಹ್ಮಾವರ ಇಲ್ಲಿ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ ಇವರುಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮೂಲ ಉದ್ದೇಶ ಮತ್ತು ಪ್ರೇರಣೆ ದಿ. ಫಾ ವಲೇರಿಯನ್ ಮೆಂಡೋನ್ಸ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಾಮಾಜಿಕ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ ಹೇಳಿ ನಮ್ಮನ್ನು ಪ್ರೇರೇಪಿಸಿದ್ದರು. ಇವರ ಅಗಲುವಿಕೆ […]