ಇತಿಹಾಸ ಪ್ರಸಿದ್ಧ ಉದ್ಯಾವರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನವೀಕೃತ ತಾಮ್ರದ ಸುತ್ತುಪೌಳಿ ಸಮರ್ಪಣೆ, ಬ್ರಹ್ಮಕುಂಭಾಭಿಷೇಕ

ಉಡುಪಿ: ಇತಿಹಾಸ ಪ್ರಸಿದ್ಧ ಉದ್ಯಾವರ ಶ್ರೀ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನವೀಕೃತ ತಾಮ್ರ ಸುತ್ತುಪೌಳಿ ಸಮರ್ಪಣೆ, ಬ್ರಹ್ಮಕುಂಭಾಭಿಷೇಕ ಹಾಗೂ ರಾಶಿ ಪೂಜಾ ಮಹೋತ್ಸವ ಮೇ 24ರ ತನಕ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಕಿದಿಯೂರು ಉದಯ ಕುಮಾರ್ ಶೆಟ್ಟಿ ಮಂಗಳವಾರ ಹೇಳಿದರು. ದೇವಸ್ಥಾನದ ಸುತ್ತುಪೌಳಿ ಮತ್ತು ಅಗ್ರ ಸಭಾ ಮಂಟಪವನ್ನು ನವೀಕರಿಸಿ ತಾಮ್ರದ ಮುಚ್ಚಿಗೆ ಹಾಕುವ ಕಾರ್ಯಕ್ಕೆ ಭಕ್ತರು ಸಂಪೂರ್ಣ ಸಹಕಾರ ನೀಡಿದ್ದು, ಗರ್ಭಗುಡಿಯ ಸುತ್ತು ಹಾಸು ಕಲ್ಲಿನ ನವೀಕರಣ ವ್ಯವಸ್ಥೆ, ಒಳ ಮತ್ತು […]

ಮುಂದಿನ 5 ವರ್ಷ ವಿಶ್ವದೆಲ್ಲೆಡೆ ತಾಪಮಾನ ಏರಿಕೆಯಾಗಲಿದೆ: ವಿಶ್ವಸಂಸ್ಥೆ ಎಚ್ಚರಿಕೆ.!!

ಮುಂದೆ ಬರುವ 2023-2027 ರ ವರೆಗಿನ 5 ವರ್ಷಗಳು ಇತ್ತೀಚಿನ ವರ್ಷಗಳಲ್ಲೇ ಅತೀ ಹೆಚ್ಚು ತಾಪಮಾನದಿಂದ ಕೂಡಿರುವ ವರ್ಷಗಳಾಗಿರಲಿವೆ ಎಂದು ವಿಶ್ವಸಂಸ್ಥೆ ಬುಧವಾರ ಎಚ್ಚರಿಕೆ ನೀಡಿದೆ. ಹಸಿರುಮನೆ ಅನಿಲಗಳು ಮತ್ತು ಎಲ್‌ ನಿನೋ (ಸಾಗರದ ಮೇಲ್ಮೈ ಉಷ್ಣಾಂಶ)ದ ಏರಿಕೆಯಿಂದಾಗಿ ವಿಶ್ವದೆಲ್ಲೆಡೆ ತಾಪಮಾನ ಏರಿಕೆಯಾಗಲಿದೆ ಎಂದು ವಿಶ್ವ ಸಂಸ್ಥೆ ಹೇಳಿಕೆ ನೀಡಿದೆ. ಮುಂದಿನ 5 ವರ್ಷಗಳ ಅವಧಿಯಲ್ಲಿ ಪ್ಯಾರಿಸ್‌ ಹವಾಮಾನ ಒಪ್ಪಂದದ ಗುರಿಯನ್ನೂ ಮೀರಿ ಜಾಗತಿಕವಾಗಿ ತಾಪಮಾನ ಏರಿಕೆಯಾಗುವ ಎಲ್ಲಾ ಸಂಭವವಿದೆ ಎಂದು ವಿಶ್ವಸಂಸ್ಥೆಯ ಅಧೀನದಲ್ಲಿರುವ ವಿಶ್ವ ಹವಾಮಾನ […]

ಕರ್ನಾಟಕದ ಜನತೆಗೆ ಭರವಸೆ ನೀಡಿದ 5 ಗ್ಯಾರಂಟಿ ಯೋಜನೆ ಜಾರಿ: ಖರ್ಗೆ

ನವದೆಹಲಿ: ಕರ್ನಾಟಕದ ಜನತೆಗೆ ಭರವಸೆ ನೀಡಿದ ಐದು ಗ್ಯಾರಂಟಿ ಜಾರಿಗೊಳಿಸುತ್ತೇವೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್‌ ಮಾಡಿದ್ದಾರೆ. ಖರ್ಗೆ ಅವರು ಟ್ವೀಟ್ ಮೂಲಕ ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ. 6.5ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ ಐದು ಗ್ಯಾರಂಟಿಗಳನ್ನು ನಾವು ಜಾರಿಗೊಳಿಸುತ್ತೇವೆʼ ಎಂದಿದ್ದಾರೆ. ಆ ಮೂಲಕ ಸಿದ್ದು, ಡಿಕೆಶಿ ಮತ್ತು ಖರ್ಗೆ ಏಕಕಾಲಕ್ಕೆ ಟ್ವೀಟ್‌ ಮಾಡುವ ಮೂಲಕ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಇದೆ ಎನ್ನುವ ಸಂದೇಶ ರವಾನಿಸಿದ್ದಾರೆ. […]

ಬನ್ನಂಜೆ ಶ್ರೀ ಶನಿಕ್ಷೇತ್ರ ಶ್ರೀ ಶನಿದೇವರ 23 ಅಡಿ ಎತ್ತರದ ಏಕಶಿಲಾ ವಿಗ್ರಹ ಸನ್ನಿಧಾನ

ಉಡುಪಿ: ಉಡುಪಿ ಬನ್ನಂಜೆ ಗರಡಿ ರಸ್ತೆ ಹತ್ತಿರ ಬನ್ನಂಜೆ ಶ್ರೀ ಶನಿಕ್ಷೇತ್ರ ಶ್ರೀ ಶನಿದೇವರ 23 ಅಡಿ ಎತ್ತರದ ಏಕಶಿಲಾ ವಿಗ್ರಹ ಸನ್ನಿಧಾನದಲ್ಲಿ ಮೇ19 ಶುಕ್ರವಾರದಂದು ಶ್ರೀ ಶ್ರೀ ಬನ್ನಂಜೆ ರಾಘವೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಮಾರ್ಗದರ್ಶನದಲ್ಲಿ ಕೊರಂಗ್ರಪಾಡಿ ಶ್ರೀ ಕುಮಾರಗುರು ತಂತ್ರಿಗಳ ನೇತೃತ್ವದಲ್ಲಿ ಶನೈಶ್ಚರ ಜಯಂತಿ ಹಾಗೂ ವಾರ್ಷಿಕ ಶನೈಶ್ಚರ ಉತ್ಸವ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳು: ಬೆಳಿಗ್ಗೆ 5.30ಕ್ಕೆ ಉಷಾಕಾಲ ಪೂಜೆ, 7:30 ರಿಂದ ಸಗ್ರಹಮುಖ ಶನಿಶಾಂತಿ ಪುರಸ್ಸರ ಜಯ ಸೂಕ್ತ ಯಾಗ 11.30ಕ್ಕೆ ಪೂರ್ಣಾಹುತಿ, […]

ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಇಂದು ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ

ಹಿರಿಯಡಕ: ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 20 ರಿಂದ 25ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಇಂದು ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಮೆರವಣಿಗೆಯು ಇಂದು ಸಂಜೆ ಗುಡ್ಡೆಯಂಗಡಿ, ಪುಪಾಡಿಕಲ್ಲು, ಜೋಡುಕಟ್ಟೆ ಮಾರ್ಗವಾಗಿ ಹಸಿರು ಹೊರೆಕಾಣಿಕೆಯನ್ನು ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಮರ್ಪಿಸಲಾಯಿತು. ಹಲವು ಭಜನಾ ತಂಡಗಳು, ಚಂಡೆ ಬಳಗ ಹಾಗೂ ಬ್ಯಾಂಡ್ ಸೆಟ್ ಗಳ ಮೂಲಕ ವೈಭವದ ಮೆರೆವಣಿಗೆ ನಡೆಯಿತು. ಊರ- ಪರಪೂರ ಸಾವಿರಾರು ಭಕ್ತಾದಿಮಾನಿಗಳು ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. […]