ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಪರೀಕ್ಷೆ: ಕ್ರಿಯೇಟಿವ್ ಪ.ಪೂ ಕಾಲೇಜಿನ 11 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ: Institute of Company Secretary of India ಮೇ 6 ರಂದು ನಡೆಸಿದ ಅತ್ಯಂತ ಕಠಿಣ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಆರ್ಯ ಅಶೋಕ್, ಅನಘ, ಅನಿರುದ್ಧ್, ದ್ರುವ ಕೆ.ಜಿ, ಅವನೀಶ್ ದೇವಾಡಿಗ, ಓಂಕಾರ್ ಪ್ರಕಾಶ್‌ ಹೆಗಡೆಯಾಲ್, ಧೃತಿ ಡಿ. ಶೆಟ್ಟಿ, ಕಾನಂಗಿ ಸಮೀಕ್ಷಾ ಹೆಗ್ಡೆ, ಪಾಟೀಲ್‌ ಶ್ರಾವಣಿ ಅರವಿಂದ್, ವಿಸ್ಮಯ ಹೆಚ್‌.ಎಸ್‌ ಮತ್ತು ಧೃತಿ ಆರ್‌.ಎನ್‌ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಒಟ್ಟು 14 […]

ಮಂಗಳೂರು: ಗೃಹರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು: ಜಿಲ್ಲಾ ಗೃಹರಕ್ಷಕ ದಳದಿಂದ ಗೃಹರಕ್ಷಕರ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಾಹನ ಚಾಲನಾ ಪರವಾನಗಿ ಪಡೆದಿರುವ ಪುರುಷ ಅಭ್ಯರ್ಥಿಗಳಿಗೆ ಆದ್ಯತೆ ಇದೆ. ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರುವ ಹಾಗೂ 19 ವರ್ಷದಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಸಮಾದೇಷ್ಟರು, ಜಿಲ್ಲಾ ಗೃಹರಕ್ಷಕದಳ, ಮೇರಿಹಿಲ್, ಮಂಗಳೂರು ಇಲ್ಲಿ ಅರ್ಜಿ ಪಡೆದು, 2023ರ ಜೂನ್ 15ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: 0824-2220562ಗೆ ಕರೆ ಮಾಡುವಂತೆ ಸಮಾದೇಷ್ಟ ಡಾ. ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ: ನಾಳೆ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಪಟ್ಟ ಯಾರಿಗೆ ಎಂಬ ಪ್ರಶ್ನೆಗೆ ಬಹುತೇಕ ಉತ್ತರ ಸಿಕ್ಕಿದ್ದು, ಸಿದ್ದರಾಮಯ್ಯ ಪಟ್ಟಕ್ಕೇರಲು ದೆಹಲಿಯಲ್ಲಿ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಸಿದ್ದರಾಮಯ್ಯ ಮನೆಮುಂದೆ ಭಾರೀ ಜನಸ್ತೋಮ ಸೇರಿದ್ದು, ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಆಗಮಿಸಿ ಸಿದ್ದರಾಮಯ್ಯ ಮನೆಮುಂದೆ ಘೋಷಣೆಗಳನ್ನು ಕೂಗುತ್ತಾ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ […]

ಮೇ 22 ರಂದು ವಿಹಿಂಪ ವತಿಯಿಂದ ಐನಾಕ್ಸ್ ಚಿತ್ರಮಂದಿರದಲ್ಲಿ ಯುವತಿಯರಿಗಾಗಿ ‘ದಿ ಕೇರಳ ಸ್ಟೋರಿ’ ಉಚಿತ ಪ್ರದರ್ಶನ

ಮಣಿಪಾಲ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪೆರ್ಡೂರು ಇವರ ವತಿಯಿಂದ ದಿ ಕೇರಳ ಸ್ಟೋರಿ ಸಿನೆಮಾದ ಉಚಿತ ಪ್ರದರ್ಶನವನ್ನು 18 ವರ್ಷ ಮೇಲ್ಪಟ್ಟ ಹಿಂದೂ ಸಹೋದರಿಯರಿಗೆ, ಮೇ 22 ಸೋಮವಾರ ಬೆಳಿಗ್ಗೆ 10.15 ಕ್ಕೆ ಮಣಿಪಾಲ ಪಿ.ವಿ.ಆರ್.ಐನಾಕ್ಸ್ (PVR INOX) ಥಿಯೇಟರ್ ನಲ್ಲಿ ನಿಗದಿಪಡಿಸಲಾಗಿದೆ. ಆಸಕ್ತರು ಮೇ 21 ಭಾನುವಾರದ ಒಳಗೆ ತಮ್ಮ ಹೆಸರನ್ನು ನೋಂದಾಯಿಸಬೇಕಾಗಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ವಿಶ್ವ ಹಿಂದೂ ಪರಿಷದ್ ಬಜರಂಗದಳ ಪೆರ್ಡೂರು 9916810202/ 9535057073/ 9972968651

ಬಿಜೆಪಿ ಆಡಳಿತಾವಧಿಯಲ್ಲಿ ಸಹಕಾರಿಸಿದ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತಾವಧಿಯಲ್ಲಿ ದಿಟ್ಟ ತೀರ್ಮಾನ ಕೈಗೊಳ್ಳಲು ಸಹಕರಿಸಿದವರೆಲ್ಲರಿಗೂ ಧನ್ಯವಾದ ಹೇಳಿದರು. ಮಂಗಳವಾರ ಅವರು ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಚಹಾ ಕೂಟ ಏರ್ಪಡಿಸಿ ಮಾತುಕತೆ ನಡೆಸಿದರು. ನಾನು ಅಧಿಕಾರಕ್ಕೆ ಬಂದಾಗ ಕೋವಿಡ್, ಪ್ರವಾಹ ಸಂದರ್ಭ ಎದುರಾಗಿತ್ತು. ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸಿದೆ. ಯಾವುದೇ ಅಹಿತಕರ ಘಟನೆ ನಮ್ಮ ಆಡಳಿತ ಅವಧಿಯಲ್ಲಿ ನಡೆಯಲಿಲ್ಲ. ನಮ್ಮ ಎಲ್ಲಾ ಆಡಳಿತಾತ್ಮಕ ವ್ಯವಸ್ಥೆಗೆ ಗೃಹ ಇಲಾಖೆ ಸಹಕರಿಸಿದೆ. ಎಲ್ಲ ಯೋಜನೆಗಳ […]