ಉಡುಪಿ: ಬ್ಯಾನರ್, ಕಟೌಟ್ ಅಳವಡಿಕೆಗೆ ಅನುಮತಿ ಕಡ್ಡಾಯ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಹಾಗೂ ಕಟೌಟ್‌ಗಳನ್ನು ಅಳವಡಿಸಲು ನಗರಸಭೆಯಿಂದ ಅನುಮತಿ ಪಡೆದುಕೊಳ್ಳಬೇಕು. ಅನುಮತಿ ಪಡೆಯದೇ ಬ್ಯಾನರ್ ಹಾಗೂ ಕಟೌಟ್‌ಗಳನ್ನು ಅಳವಡಿಸಿದ್ದಲ್ಲಿ, ಯಾವುದೇ ಮುನ್ಸೂಚನೆ ನೀಡದೇ ನಗರಸಭೆ ವತಿಯಿಂದ ಅವುಗಳನ್ನು ತೆರವುಗೊಳಿಸಿ, ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಮೇ 17 ರಿಂದ 28 ರವರೆಗೆ ‘ಜನನಿ’ ಸಂಭ್ರಮೋತ್ಸವ ವರುಷದ ಆಚರಣೆ: ಆಕರ್ಷಕ ಬಹುಮಾನ ಗೆಲ್ಲುವ ಅವಕಾಶ

ಬ್ರಹ್ಮಾವರ: ಇಲ್ಲಿನ ಮಧುವನ ಕಾಂಪ್ಲೆಕ್ಸ್ ನಲ್ಲಿರುವ ಜನನಿ ಎಂಟಪ್ರೈಸಸ್ ನಲ್ಲಿ ವರುಷದ ಆಚರಣೆ ಪ್ರಯುಕ್ತ ಮೇ 17 ರಿಂದ 28 ರವರೆಗೆ ನಡೆಸುವ ಖರೀದಿಗಳಿಗೆ ಆಕರ್ಷಕ ಬಹುಮಾನಗಳು, ಲಕ್ಕಿ ಡ್ರಾ, ವಿಶೇಷ ರಿಯಾಯತಿ, ಕ್ಯಾಶ್ ಬ್ಯಾಕ್, ಉಚಿತ ಡೆಲಿವರಿ ಮುಂತಾದ ಸೌಲಭ್ಯಗಳು ದೊರೆಯಲಿವೆ. ಕಿಚನ್ ಅಪ್ಲಾಯನ್ಸೆಸ್, ಮೊಬೈಲ್ ಗಳು, ಎಲೆಕ್ಟ್ರಾನಿಕ್ಸ್ ವಸ್ತುಗಳು, ಫರ್ನಿಚರ್ ಗಳ ಮೇಲೆ ಕೊಡುಗೆಗಳು ಲಭ್ಯ. ಹೆಚ್ಚಿನ ಮಾಹಿತಿಗಾಗಿ: 0820-2987075, 9972013221 ಅನ್ನು ಸಂಪರ್ಕಿಸಿ

ಕುಡಿಯುವ ನೀರಿನ ಸಮರ್ಪಕ ಪೂರೈಕೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ನಗರಸಭಾ ವ್ಯಾಪ್ತಿಯಲ್ಲಿ ಮಳೆಗಾಲ ಪ್ರಾರಂಭವಾಗುವವರೆಗೆ ಸಮರ್ಪಕ ರೀತಿಯಲ್ಲಿ ಕುಡಿಯುವ ನೀರು ಪೂರೈಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು. ಅವರು ಮಂಗಳವಾರದಂದು ನಗರಸಭೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಸ್ತುತ ಕುಡಿಯುವ ನೀರಿಗೆ 3 ದಿನಗಳಿಗೊಮ್ಮೆ ನೀರು ಸರಬರಾಜು ಮಾಡುವ ರೇಷನಿಂಗ್ ವ್ಯವಸ್ಥೆಯನ್ನು ಅಳವಡಿಸಿದ್ದು ಅದನ್ನು ಮುಂದುವರಿಸುವಂತೆ ಹೇಳಿದರು. ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಬೇಡಿಕೆಯನ್ನು ಗಮನಿಸಿ, ನಗರ ಸಭಾ ಸದಸ್ಯರಿಗೆ ಮಾಹಿತಿ ನೀಡಿ […]

ಉದ್ಯಮಿ ನಡ್ಡೋಡಿ ಮಹಾಬಲ ಶೆಟ್ಟಿ ನಿಧನ

ಕಾರ್ಕಳ: ಉದ್ಯಮಿ, ನಲ್ಲೂರು ನಡ್ಡೋಡಿ ಮಹಾಬಲ ಶೆಟ್ಟಿ (89) ಅಸೌಖ್ಯದಿಂದ ಸ್ವಗೃಹದಲ್ಲಿ ಮೇ 16 ರಂದು ನಿಧನರಾದರು. ಇವರು ನಲ್ಲೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ನಲ್ಲೂರು ಶ್ರೀ ಮಹಾಗಣಪತಿ ಭಜನಾ ಮಂಡಳಿ ಸ್ಥಾಪಕ ಸದಸ್ಯರಾಗಿದ್ದರು. ನಲ್ಲೂರಿನಲ್ಲಿ ಸರಕಾರಿ ಪ್ರೌಢ ಶಾಲೆ ಆರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇವರು ಊರಿನ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಅವರು ಪತ್ನಿ, ಶ್ರೀಮಹಾಲಕ್ಷ್ಮೀ ದೇವಸ್ಥಾನ ಶ್ರೀಧಾಮ ಮಾಣಿಲ ಇಲ್ಲಿನ ಟ್ರಸ್ಟಿ ಭಾಸ್ಕರ ಶೆಟ್ಟಿ ಸಹಿತ ಆರು ಜನ ಪುತ್ರರು ಮತ್ತು […]

ಕೇರಳ: ನೈರುತ್ಯ ಮುಂಗಾರು ಜೂನ್ ನಾಲ್ಕರಿಂದ ಪ್ರವೇಶ

ಈ ಬಾರಿ ನೈರುತ್ಯ ಮುಂಗಾರು ಕೇರಳ ರಾಜ್ಯವನ್ನು ಜೂನ್ ನಾಲ್ಕರಂದು ಪ್ರವೇಶಿಸಲಿದೆ ಎಂದು ಕೇಂದ್ರ ಹವಮಾನ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಕಳೆದ ಬಾರಿ ಮೇ 29 ರಂದು ನೈರುತ್ಯ ಮುಂಗಾರು ಕೇರಳ ರಾಜ್ಯವನ್ನು ಪ್ರವೇಶಿಸಿತ್ತು. ಈ ಬಾರಿ ನಾಲ್ಕು ದಿನ ತಡವಾಗಿ ಪ್ರವೇಶಿಸಲಿದೆ ಎಂದು ಹೇಳಲಾಗುತ್ತಿದೆ. ಕೊಡಗಿನಲ್ಲಿ ಮೇ ಮೊದಲ ವಾರದ ಕೊನೆಯಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.