‘ಡೆಂಗ್ಯೂ’ ಜ್ವರ ಭೀತಿ: ಬೆಂಗಳೂರಿನಲ್ಲಿ 300 ಕ್ಕೂ ಹೆಚ್ಚು ಪ್ರಕರಣ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಹೀಗಾಗಿ ಡೆಂಗ್ಯೂ ಬಗ್ಗೆ ಎಚ್ಚರಿಕೆ ವಹಿಸುವಂತೆ ವೈದ್ಯರು ಹೇಳಿದ್ದಾರೆ. ಡೆಂಗ್ಯೂ ಹೆಚ್ಚಾಗಿ ಹರಡುವುದು ಮಳೆಗಾಲದ ಆರಂಭದಲ್ಲಿ, ಕೆಲವು ದಿನಗಳಿಂದ ಸುರಿದ ಮಳೆಯಿಂದಾಗಿ ಅಲ್ಲಲ್ಲಿ ನೀರು ನಿಂತಿದ್ದು, ಸೊಳ್ಳೆಗಳು ಮೊಟ್ಟೆ ಇಡಲು ಅನುವು ಮಾಡಿಕೊಟ್ಟಿದೆ. ಇದರಿಂದ ಡೆಂಗ್ಯೂ ಜ್ವರದ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ 300 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಹೀಗೆ ನಿರಂತರ ಮಳೆಯಾದರೆ ಈ ಸಂಖ್ಯೆ ಇನ್ನಷ್ಟು ಅಧಿಕವಾಗುವ ಸಾಧ್ಯತೆ ಇದೆ. ಡೆಂಗ್ಯೂ ಜ್ವರ ಮಾರಣಾಂತಿಕ ಕಾಯಿಲೆ ಅಲ್ಲದಿದ್ದರೂ […]

ನಳಿನ್ ಕುಮಾರ್ ಹಾಗೂ ಡಿ.ವಿ. ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಪ್ರತೀಕಾರ ತೆಗೆದುಕೊಂಡ ಕೆಲಸ ನಡೆದಿದೆ. ಪುತ್ತೂರು ಬಸ್ ನಿಲ್ದಾಣದ ಬಳಿ ನಳಿನ್ ಕುಮಾರ್ ಹಾಗೂ ಡಿ.ವಿ ಗೆ ಶ್ರದ್ಧಾಂಜಲಿ ಕೋರಲಾಗಿದೆ. ಜತೆಗೆ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಲಾದ ಬಗ್ಗೆ ವರದಿಯಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರ ಸಂಘ ಪರಿವಾರದ ಗಟ್ಟಿ ನೆಲ. ಇಲ್ಲಿ ಬಿಜೆಪಿ ಸಶಕ್ತವಾಗಿದೆ. ಪುತ್ತೂರಿನಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಾಣಲು ನೀವೇ ಕಾರಣ ಎಂಬ ಒಕ್ಕಣೆಯಿರುವ ಬ್ಯಾನರ್ ಅನ್ನು ಇದೀಗ ಅಳವಡಿಸಲಾಗಿದೆ. ಈ ಮೂಲಕ ಯಾರು […]

ಕಾರ್ಕಳ ಬಿಜೆಪಿ ವತಿಯಿಂದ ಸುನಿಲ್ ಕುಮಾರ್ ವಿಜಯೋತ್ಸವ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮ

ಕಾರ್ಕಳ: ಭಾನುವಾರದಂದು ಬಿಜೆಪಿ ಕಾರ್ಕಳ ವತಿಯಿಂದ ಸುನೀಲ್ ಕುಮಾರ್ ವಿಜಯೋತ್ಸವ, ಮತದಾರರಿಗೆ ವಂದನೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಅವರು ಹಣಕ್ಕಾಗಿ ಏನು ಮಾಡಲೂ ಸಿದ್ದ. ಅವರು ಪ್ರಹ್ಲಾದ್ ಜೋಷಿ, ಅನಂತ್ ಕುಮಾರ್ ವಿರುದ್ಧ ಸ್ಪರ್ಧಿಸಿ ಸೋತರು, ಎಲ್ಲಾ ಕಡೆಗಳಲ್ಲಿ ಸೋತು ಡೀಲ್ ಕುದುರಿಸುವವರು. ಟೈಗರ್ ಗ್ಯಾಂಗ್ ಹೆಸರಿನಲ್ಲಿ ಉತ್ತರ ಕರ್ನಾಟಕದಲ್ಲಿ ಹಿಂದುಗಳ ಹತ್ಯೆಯನ್ನು ಮಾಡಿಸಿದ್ದಾರೆ‌, ಆ ಹತ್ಯೆ ಮಾಡಿದ ಕೊಲೆಗಡುಗರು ಈಗಲೂ […]

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಜವಾಬ್ದಾರಿ ಖರ್ಗೆ ಹೆಗಲಿಗೆ: ಯಾರಿಗೆ ಒಲಿಯುವುದು ಮುಖ್ಯಮಂತ್ರಿ ಪಟ್ಟ?

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ತರುವಾಯ, ಹೊಸದಾಗಿ ಆಯ್ಕೆಯಾದ 135 ಕಾಂಗ್ರೆಸ್ ಶಾಸಕರು ಭಾನುವಾರ ಸಂಜೆ ಬೆಂಗಳೂರಿನಲ್ಲಿ ಸಭೆ ಸೇರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕನನ್ನು ಆಯ್ಕೆ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡುವ ನಿರ್ಣಯವನ್ನು ಅಂಗೀಕರಿಸಿದರು. ಸಿಎಲ್‌ಪಿ ನಾಯಕ ಮತ್ತು ಆ ಮೂಲಕ ಕರ್ನಾಟಕದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಶಾಸಕರು ಸಭೆ ನಡೆಸುತ್ತಿದ್ದ ಹೋಟೆಲ್‌ನ ಹೊರಗೆ ಜಮಾಯಿಸಿದ ರಾಜ್ಯ ಪಕ್ಷದ ಅಧ್ಯಕ್ಷ ಡಿ ಕೆ […]

ಜಿಲ್ಲೆಯಲ್ಲಿ ಶಾಂತಿಯುತ ಚುನಾವಣೆ: ಜಿಲ್ಲಾಧಿಕಾರಿ ಕೃತಜ್ಞತೆ

ಉಡುಪಿ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ – 2023 ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ನಡೆದ ಮತದಾನ ಹಾಗೂ ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಲು ಸಹಕರಿಸಿದ ಎಲ್ಲಾ ಮತದಾರರು, ಸಾರ್ವಜನಿಕರು, ರಾಜಕೀಯ ಪಕ್ಷಗಳು ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳು, ಚುನಾವಣಾ ಕರ್ತವ್ಯ ನಿರ್ವಹಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾರಾವ್ ಎಂ. ಕೃತಜ್ಞತೆಯನ್ನು ತಿಳಿಸಿದ್ದಾರೆ.