ಮೂಡಬಿದಿರೆ: ಡಿ.14 ರಿಂದ 17 ರವರೆಗೆ ನಡೆಯಲಿದೆ ಆಳ್ವಾಸ್ ವಿರಾಸತ್ 2023

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ಕಾರ್ಯಕ್ರಮವು ಡಿ.14 ರಿಂದ 17ರವರೆಗೆ ಮೂಡಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಶುಭಾಶೀರ್ವಾದೊಂದಿಗೆ ನಡೆಯುವ ವಿರಾಸತ್ ಅನ್ನು ದೇಶಕ್ಕಾಗಿ ದೇಹತ್ಯಾಗ ಮಾಡಿದ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ ಅರ್ಪಣೆ ಮಾಡಲಾಗಿದೆ ಎಂದು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ […]
ಉಡುಪಿ ಭಾರತ್ ಮಾರ್ಕೆಟಿಂಗ್ 16ನೇ ವರ್ಷಕ್ಕೆ ಪಾದಾರ್ಪಣೆ: ಎಲೆಕ್ಟ್ರಿಕಲ್ ಉಪಕರಣಗಳ ಮಾರಾಟದಲ್ಲಿ ಅತ್ಯಂತ ವಿಶ್ವಾಸಾರ್ಹತೆ ಹೊಂದಿದ ಸಂಸ್ಥೆ

ಉಡುಪಿ: ಉಡುಪಿಯ ಬನ್ನಂಜೆ ನಾರಾಯಣಗುರು ಸಂಕೀರ್ಣ ದಲ್ಲಿರುವ ಗುಣಮಟ್ಟದ ಅತ್ಯಾಧುನಿಕ ಬೃಹತ್ ಸಂಗ್ರಹದ ವಿದ್ಯುತ್ ಜೋಡಣೆ ಸಾಮಗ್ರಿಗಳ ಹವಾನಿಯಂತ್ರಿತ ಜಿಎಂ ಬ್ರ್ಯಾಂಡ್ ಶೋರೂಂ ‘ಭಾರತ್ ಮಾರ್ಕೆಟಿಂಗ್’ ಬ್ರ್ಯಾಂಡೆಡ್ ಎಲೆಕ್ಟ್ರಿಕಲ್ ಸರಕುಗಳ ಮಾರಾಟದ ಮೂಲಕ ಜನಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿ ನೂತನ ಮನೆ, ಸಭಾಂಗಣ, ಮಾಲ್, ಮಳಿಗೆ, ಸಮುಚ್ಚಯ ನಿರ್ಮಾಣದಲ್ಲಿ ಬಳಸುವ ಜಿಎಂ, ಹ್ಯಾವೆಲ್, ಫಿನೊಲೆಕ್ಸ್, ವಿ-ಗಾರ್ಡ್, ಲಿಗ್ರೆಂಡ್, ಆರ್ಆರ್, ಲ್ಯೂಕರ್, ಹಿಲ್ಸ್ ಕ್ಯಾಬ್, ಪ್ಯಾಸೋಲೈಟ್, ಸ್ಟ್ಯಾಂಡರ್ಡ್ ಕಂಪೆನಿಗಳ ಕೇಬಲ್ಸ್, ವಯರ್, ಎಲ್ಇಡಿ ಫಿಟ್ಟಿಂಗ್ಸ್, ಹವೆಲ್ಸ್ ಕಂಪೆನಿಯ ಇಲೆಕ್ಟ್ರಿಕಲ್ ಸಾಮಗ್ರಿಗಳಾದ […]
ಹಿರಿಯಡಕ: ಅಕ್ರಮವಾಗಿ ಮರಳು ಸಾಗಾಟ- ಟಿಪ್ಪರ್ ವಶ

ಹೆಬ್ರಿ: ಹಿರಿಯಡಕ ಪೊಲೀಸ್ ಠಾಣಾ ಮುಂಭಾಗದಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಟಿಪ್ಪ ರ್ ವಾಹನದಲ್ಲಿ ಹಿರಿಯಡಕ ಜಂಕ್ಷನ್ನಿಂದ ಮಣಿಪಾಲ ಕಡೆಗೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದವರನ್ನು ತಡೆದು ನಿಲ್ಲಿಸಿದಾಗ ಚಾಲಕ ಪರಾರಿಯಾದ ಘಟನೆ ನಡೆದಿದೆ. ಟಿಪ್ಪ ರ್ ವಾಹನವನ್ನು ಪರಿಶೀಲಿಸಿದಾಗ ಸುಮಾರು 12 ಸಾವಿರ ರೂ. ಮರಳನ್ನು ಯಾವುದೇ ಪರವಾನಿಗೆ ಇಲ್ಲದೇ ಕಳ್ಳತನ ಮಾಡಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದ್ದು ವಾಹನ ಸಹಿತ ವಶಪಡಿಸಿಕೊಂಡು ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬಿಜೆಪಿ ರಾಜ್ಯಧ್ಯಕ್ಷ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಬೆಂಗಳೂರಿನಲ್ಲಿ ಫಲಿಮಾರು ಮಠದ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್ ಮತ್ತು ಶ್ರೀ ಮಠದ ಪಿ ಆರ್ ಓ ಆದ ಕಡೆಕಾರು ಶ್ರೀಶ ಭಟ್, ಶ್ರೀಗಳ ಆಪ್ತರಾದ ಕೆ.ಗಿರೀಶ್ ಉಪಾಧ್ಯಾಯ, ಮತ್ತಿತರು ಉಪಸ್ಥಿತರಿದ್ದರು.
ಮಾಹೆ: ವೆಲ್ಕಮ್ಗ್ರೂಪ್ ಗ್ರ್ಯಾಜುಯೇಟ್ ಸ್ಕೂಲ್ ಆಫ್ ಹೊಟೇಲ್ ಎಡ್ಮಿನಿಸ್ಟ್ರೇಶನ್ ಇದರ ವಾರ್ಷಿಕೋತ್ಸವ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನ ಪ್ರತಿಷ್ಠಿತ ಘಟಕವಾಗಿರುವ ದ ವೆಲ್ಕಮ್ ಗ್ರೂಪ್ ಗ್ರ್ಯಾಜುಯೇಟ್ ಸ್ಕೂಲ್ ಆಫ್ ಹೊಟೇಲ್ ಎಡ್ಮಿನಿಸ್ಟ್ರೇಶನ್ ನ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ 7 ರಂದು ಮಣಿಪಾಲ್ ಫಾರ್ಚೂನ್ ಇನ್ನ್ ವ್ಯಾಲಿವ್ಯೂನ ಸಭಾಂಗಣದಲ್ಲಿ ಜರಗಿತು. ‘ಸುಸ್ಥಿರ ಅಭಿವೃದ್ಧಿಯ ಗುರಿಯತ್ತ ಕೇಂದ್ರೀಕರಿಸಿರುವ ಭಾರತದ ಕಿರು ಅಡುಗೆಪದ್ಧತಿಗಳು’ ಎಂಬುದು ಕಾರ್ಯಕ್ರಮದ ಮುಖ್ಯ ಆಶಯವಾಗಿತ್ತು. ಈ ಆಶಯವು ಸುಸ್ಥಿರ ಅಭಿವೃದ್ಧಿಯ ಗುರಿ ಮತ್ತು ಬಿಕಾನೇರ್, ಇಂದೋರ್ ಹಾಗೂ ಭುವನೇಶ್ವರಗಳ ಹೆಚ್ಚಿನ ಪ್ರಸಿದ್ಧವಲ್ಲದ […]