ಶಿರಸಿ: ಸಾಹಿತ್ಯ ಅಕಾಡೆಮಿ ಹೊಸದೆಹಲಿ ವತಿಯಿಂದ ಕಥಾಸಂಧಿ ಸಾಹಿತ್ಯ ಕಾರ್ಯಕ್ರಮ

ಶಿರಸಿ: ನಾನು ಕಾಲ್ಪನಿಕ ಕತೆಗಳನ್ನು ಬರೆಯುವುದಿಲ್ಲ. ನನ್ನ ಹೆಚ್ಚಿನ ಕತೆಗಳು ಸಮಾಜಿಕ ಅಸಮಾನತೆ, ಶೋಷಣೆಯ ಹಿನ್ನೆಲೆಯಲ್ಲೇ ಹುಟ್ಟಿಕೊಂಡಿವೆ. ನಾಗರಿಕ ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆಯ ಪಿಡುಗು ಚಾಲ್ತಿಯಲ್ಲಿರುವುದು ಶೋಚನೀಯ ಎಂದು ಕಥಾಕಾರ, ಗೋವಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಪ್ರಕಾಶ್ ಪರ್ಯೆಂಕರ್ ಅಭಿಪ್ರಾಯಪಟ್ಟರು. ಅವರು ಸಾಹಿತ್ಯ ಅಕಾಡೆಮಿ, ಹೊಸದೆಹಲಿ ಶಿರಸಿಯ ನರೇಬೈಲ್‌ನಲ್ಲಿ ಚಂದನ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದೊಂದಿಗೆ ಡಿ. 4 ರಂದು ಆಯೋಜಿಸಿದ್ದ ಕಥಾಸಂಧಿ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಗ್ರಾಮಾಂತರ ಪ್ರದೇಶಗಳಲ್ಲಿ ಈಗಲೂ ಚಾಲ್ತಿಯಲ್ಲಿರುವ ಅಸ್ಪೃಶ್ಯತೆ ಮತ್ತು […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಡಿ. 05 ರಂದು ನಡೆಯಿತು. ನಿವೃತ್ತ ಪ್ರಾಂಶುಪಾಲ ಎ. ಲಕ್ಷ್ಮೀ ನಾರಾಯಣ ಚಾತ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸ್ಪರ್ಧಾತ್ಮಕ ಹಾಗೂ ವಾರ್ಷಿಕ ಪರೀಕ್ಷೆಯ ಕಡೆಗೆ ಹೆಚ್ಚಿನ ಗಮನ ನೀಡಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ಶ್ರಮಿಸಬೇಕು. ಅಂತಹ ವಾತಾವರಣ ಶ್ರೀ ವೆಂಕಟರಮಣ ಸಂಸ್ಥೆಯಲ್ಲಿ ಇರುವುದರಿಂದ ವಿದ್ಯಾರ್ಥಿಗಳು ಅದಕ್ಕೆ ಸ್ಪಂದಿಸಬೇಕು ಎಂದರು. ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಮಾತನಾಡಿ, ಕಡಿಮೆ ಶುಲ್ಕದಲ್ಲಿ […]

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಡಿ.5ರಂದು ನಡೆಯಿತು. ನಿವೃತ್ತ ಪ್ರಾಂಶುಪಾಲರಾದ ಶ್ರೀ. ಎ. ಲಕ್ಷ್ಮೀ ನಾರಾಯಣ ಚಾತ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸ್ಪರ್ಧಾತ್ಮಕ ಹಾಗೂ ವಾರ್ಷಿಕ ಪರೀಕ್ಷೆಯ ಕಡೆಗೆ ಹೆಚ್ಚಿನ ಗಮನ ನೀಡಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ಶ್ರಮಿಸಬೇಕು. ಅಂತಹ ವಾತಾವರಣ ಶ್ರೀ ವೆಂಕಟರಮಣ ಸಂಸ್ಥೆಯಲ್ಲಿ ಇರುವುದರಿಂದ ವಿದ್ಯಾರ್ಥಿಗಳು ಅದಕ್ಕೆ ಸ್ಪಂದಿಸಬೇಕು ಎಂದರು. ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈಯವರು ಕಡಿಮೆ ಶುಲ್ಕದಲ್ಲಿ ಮೌಲ್ಯಯುತ ಶಿಕ್ಷಣ […]

ಉಡುಪಿ: ಯುವಕ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಸವರಾಜ್ (27) ಎಂಬ ಯುವಕನು ನವೆಂಬರ್ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ಉದ್ದಮುಖ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ: ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಸಿ.ಟಿ ಬಸ್ ನಿಲ್ದಾಣದ ಬಳಿ ಇರುವ ಪಿ.ಜಿ.ಯಲ್ಲಿ ವಾಸವಿದ್ದ ಅರ್ಚನಾ (19) ಎಂಬ ಯುವತಿಯು ನವೆಂಬರ್ 4 ರಿಂದ ಕಾಣೆಯಾಗಿರುತ್ತಾರೆ. 5 ಅಡಿ 2 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆ ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.