ಉಡುಪಿ: ಮಲ್ಪೆ ಪಡುಕೆರೆ ಮೀನುಗಾರಿಕಾ ಬೋಟಿನಲ್ಲಿ ಕಾರ್ಮಿಕನ ಕೊಲೆ; ಆರೋಪಿ ಪೊಲೀಸರು ವಶಕ್ಕೆ.!

ಉಡುಪಿ: ಮಲ್ಪೆ ಪಡುಕೆರೆ ದಕ್ಕೆಯಲ್ಲಿ ಬೋಟಿನಲ್ಲಿ ನಡೆದ ಗಲಾಟೆ ವೇಳೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ.ಕೊಲೆಯಾದವರನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಎಂಬಾತನನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಸೋಮವಾರ ರಾತ್ರಿ ಬೋಟಿನಲ್ಲಿ ಗೋವಿಂದ ಮತ್ತು ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಮಂಗಳವಾರ ಬೆಳಗಿನ ಜಾವ ಗೋವಿಂದ ಅಭಿಷೇಕ್‌ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಮಾಹಿತಿ ಪಡೆದ ತಕ್ಷಣ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ (ಕಾ.ಸು.) ಅನಿಲ್ […]

ಮಂಗಳೂರು: ಗೋವಾದಿಂದ ಕೇರಳಕ್ಕೆ ಅಕ್ರಮ ಮದ್ಯ ಸಾಗಣೆ: ಇಬ್ಬರ ಬಂಧನ

ಮಂಗಳೂರು: ಗೋವಾದಿಂದ ಅಕ್ರಮವಾಗಿ ಮದ್ಯವನ್ನು ಸಾಗಿಸಿ, ಮಂಗಳೂರು ಮೂಲಕ ಕೇರಳಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಅಬಕಾರಿ ಪೊಲೀಸರು ಭೇದಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾರಿನ ಮಾಲೀಕ ಹಾಗೂ ಚಾಲಕ ಬಸವರಾಜು ಬೋವಿ ಮತ್ತು ನಾಗವೇಣಿ ನಾಯಕ್ ಎಂದು ಗುರುತಿಸಲಾಗಿದೆ. ಮಾನ್ಯ ಪರವಾನಗಿ ಇಲ್ಲದೆ ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ವಿಶೇಷ ಅಬಕಾರಿ ತಂಡ ಕಾರ್ಯಾಚರಣೆ ನಡೆಸಿತು. ಈ ವೇಳೆ ಕಾರನ್ನು ತಡೆದು ಪರಿಶೀಲಿಸಿದಾಗ 438 ಲೀಟರ್ ಗೋವಾ ಮದ್ಯ ಪತ್ತೆಯಾಗಿದ್ದು, ಅದನ್ನು […]

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರನ ಬರ್ಬರ ಹತ್ಯೆ

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರನೊಬ್ಬನನ್ನು ಕೊಲೆಗೈದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.ಮೃತನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹ ಕಾರ್ಮಿಕರ ನಡುವೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಅಭಿಷೇಕ್‌ನನ್ನು ಸಹ ಕಾರ್ಮಿಕನೊಬ್ಬ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಮೂಲದ ಹಾಗೂ ಮಲ್ಪೆಯಲ್ಲಿ ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆತನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ.ಘಟನಾ ಸ್ಥಳಕ್ಕೆ ಉಡುಪಿ […]

ಉಡುಪಿ: ಡೇವಿಡ್ ಡಿಸೋಜ ಹತ್ಯೆ – ಕೋಟ್ಯಂತರ ರೂ. ಗುತ್ತಿಗೆ ವಿವಾದ, ಭೂಗತ ನಂಟು

ಉಡುಪಿ: ಮುದರಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಯುಪಿಸಿಎಲ್‌ ಗುತ್ತಿಗೆ ಕಾಮಗಾರಿಯ ವಿವಾದವೇ ಹತ್ಯೆಗೆ ಪ್ರಮುಖ ಕಾರಣ ಎನ್ನುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಜಿಲ್ಲಾ ಪೊಲೀಸ್‌ ಅಧೀಕ್ಷಕ ಹರಿರಾಂ ಶಂಕರ್‌ ತಿಳಿಸಿದ್ದಾರೆ.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ರಾಮ್ ಪೂಜಾರಿ ಯುಪಿಸಿಎಲ್‌ ವ್ಯಾಪ್ತಿಯ ಪೈಪ್‌ಲೈನ್‌ ಮತ್ತು ಕಾಂಕ್ರೀಟ್‌ ರಸ್ತೆ ಕಾಮಗಾರಿ ಪಡೆಯಲು ಬಯಸಿದ್ದ. ಆದರೆ ಗುತ್ತಿಗೆ ಡೇವಿಡ್ […]

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ- ಕರವೇ ಆಗ್ರಹ; ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ- ಎಚ್ಚರಿಕೆ

ಉಡುಪಿ: ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ ಕಳೆದರೂ ಸಾರ್ವಜನಿಕ ಸೇವೆಗೆ ಆಸ್ಪತ್ರೆಯನ್ನು ಒದಗಿಸದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕ ಖಂಡಿಸಿದೆ.ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರವೇ ಜಿಲ್ಲಾ ಗೌರವಾಧ್ಯಕ್ಷ ಅನ್ಸರ್ ಅಹ್ಮದ್, ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ಎಲ್ಲ ಸುಸಜ್ಜಿತ ಸೌಲಭ್ಯಗಳನ್ನು ಕಲ್ಪಿಸಿ, 2026ರ ಸೆಪ್ಟೆಂಬರ್ 30ರೊಳಗೆ ಹೊಸ ಕಟ್ಟಡದಲ್ಲಿ ಆಸ್ಪತ್ರೆಯ ಸೇವೆ ಆರಂಭಿಸಬೇಕು ಎಂದು ಆಗ್ರಹಿಸಿದರು.ನೂತನ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ […]