ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ- ಕರವೇ ಆಗ್ರಹ; ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ- ಎಚ್ಚರಿಕೆ

ಉಡುಪಿ: ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ ಕಳೆದರೂ ಸಾರ್ವಜನಿಕ ಸೇವೆಗೆ ಆಸ್ಪತ್ರೆಯನ್ನು ಒದಗಿಸದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕ ಖಂಡಿಸಿದೆ.ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರವೇ ಜಿಲ್ಲಾ ಗೌರವಾಧ್ಯಕ್ಷ ಅನ್ಸರ್ ಅಹ್ಮದ್, ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ಎಲ್ಲ ಸುಸಜ್ಜಿತ ಸೌಲಭ್ಯಗಳನ್ನು ಕಲ್ಪಿಸಿ, 2026ರ ಸೆಪ್ಟೆಂಬರ್ 30ರೊಳಗೆ ಹೊಸ ಕಟ್ಟಡದಲ್ಲಿ ಆಸ್ಪತ್ರೆಯ ಸೇವೆ ಆರಂಭಿಸಬೇಕು ಎಂದು ಆಗ್ರಹಿಸಿದರು.ನೂತನ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ […]

ಉಡುಪಿ ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸ: ನೋಟಿಸ್‌ಗೆ ಸಿದ್ಧತೆ- ಡಿಸಿ ಸ್ವರೂಪ ಟಿ.ಕೆ.

ಉಡುಪಿ: ಎನ್ಯುಮರೇಷನ್‌ ಹಂತದಲ್ಲಿ ಹಿಂದಿನ ಮತದಾರರ ಪಟ್ಟಿಯೊಂದಿಗೆ ಲಿಂಕ್ ಆಗದಿರುವ 31,903 ಪ್ರಕರಣಗಳು ಹಾಗೂ ಲಿಂಕೇಜ್‌ ಪೂರ್ಣಗೊಂಡ ಬಳಿಕದ ಪರಿಶೀಲನೆಯಲ್ಲಿ 65,803 ‘ಲಾಜಿಕಲ್‌ ಡಿಸ್ಕ್ರೆಪೆನ್ಸಿ (discrepancy) /ಅನಾಮಲಿಸ್‌ (anomalies) ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದ್ದಾರೆ.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಹಿಂದಿನ ಮತದಾರರ ಪಟ್ಟಿಯೊಂದಿಗೆ ವಿವರಗಳು ಲಿಂಕ್ ಆಗದಿರುವ ಪ್ರಕರಣಗಳು ಹಾಗೂ ಲಿಂಕೇಜ್‌ ಬಳಿಕದ ಪರಿಶೀಲನೆಯಲ್ಲಿ ತಾರ್ಕಿಕ ವ್ಯತ್ಯಾಸ ಅಥವಾ ಇತರ ಅಸಂಗತತೆ ಕಂಡುಬಂದ ಪ್ರಕರಣಗಳನ್ನು ಗುರುತಿಸಿ, ಸಂಬಂಧಪಟ್ಟ ಚುನಾವಣಾ […]

ಉಡುಪಿ–ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಗಸ್ಟ್ 25ರಂದು ಈದ್ ಮಿಲಾದ್ ರಜೆ

ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೀಡಲಾಗಿದ್ದ ಸಾರ್ವತ್ರಿಕ ರಜೆಯನ್ನು ಆ.26ರ ಬದಲಾಗಿ ಆ.25ರಂದು ನೀಡಲು ನಿರ್ಧರಿಸಲಾಗಿದೆ.ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಅವರು ಆದೇಶ ಹೊರಡಿಸಿದ್ದಾರೆ.ಈದ್ ಮಿಲಾದ್ ಹಬ್ಬದ ಅಂಗವಾಗಿ ಆ.26ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿ ಈ ಹಿಂದೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳ ಕೋರಿಕೆಯ ಮೇರೆಗೆ, ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ರಜೆಯನ್ನು ಆ.25ಕ್ಕೆ ಬದಲಾಯಿಸಲು ನಿಯಮಾನುಸಾರ […]

ಉಡುಪಿ: ಯುವ ಸ್ಯಾಕ್ಸಫೋನ್ ವಾದಕಿ ಆತ್ಮಹತ್ಯೆ

ಉಡುಪಿ: ಬ್ರಹ್ಮಾವರ ಮೂಲದ ಯುವ ಸ್ಯಾಕ್ಸಫೋನ್ ವಾದಕಿ ನಮೃತಾ ದೇವಾಡಿಗ (22) ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.ನೀಲಾವರ ಗ್ರಾಮದ ನಿವಾಸಿ ನಮೃತಾ ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಯಾವುದೋ ಕಾರಣಕ್ಕೆ ಮನನೊಂದು ವಿಷ ಸೇವಿಸಿದ್ದ ಅವರನ್ನು ತಕ್ಷಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕಿದಿಯೂರ್ಸ್ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್ ವತಿಯಿಂದ ಮುದ್ದು ಕೃಷ್ಣ ಸ್ಪರ್ಧೆ 2026: ವಿಜೇತರಿಗೆ ಕಾದಿದೆ ಭರ್ಜರಿ ಬಹುಮಾನಗಳು

ಉಡುಪಿ: ಕಿದಿಯೂರುಸ್ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್ ವತಿಯಿಂದ ‘ಮುದ್ದು ಕೃಷ್ಣ ಸ್ಪರ್ಧೆ 2026’ ಆಯೋಜಿಸಲಾಗಿದೆ. Yad Bhavam Tad Bhavati’ ಎಂಬ ಧ್ಯೇಯವಾಕ್ಯದೊಂದಿಗೆ ಪುಟಾಣಿಗಳ ಪ್ರತಿಭೆ ಹಾಗೂ ಸಂಭ್ರಮಕ್ಕೆ ವೇದಿಕೆ ಕಲ್ಪಿಸಲು ಶಾಲೆ ಮುಂದಾಗಿದೆ.  ಪುಟಾಣಿ ಕೃಷ್ಣಪ್ರೇಮಿಗಳಿಗಾಗಿ ವಿಶೇಷವಾಗಿ ಆಯೋಜಿಸಿರುವ ಈ ವರ್ಣರಂಜಿತ ಕಾರ್ಯಕ್ರಮವು ಸೆಪ್ಟೆಂಬರ್ 2 ರಂದು ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ. ಉಡುಪಿಯ ನಿಟ್ಟೂರಿನ ಜ್ಞಾನಕಾಶಿ ಕ್ಯಾಂಪಸ್‌ನಲ್ಲಿರುವ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್‌ನ ಜ್ಞಾನ ವೇದಿಕೆಯಲ್ಲಿ ಸ್ಪರ್ಧೆ ನಡೆಯಲಿದೆ. 2ರಿಂದ 5 ವರ್ಷದ […]