ಕಿದಿಯೂರ್ಸ್ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್ ವತಿಯಿಂದ ಮುದ್ದು ಕೃಷ್ಣ ಸ್ಪರ್ಧೆ 2026: ವಿಜೇತರಿಗೆ ಕಾದಿದೆ ಭರ್ಜರಿ ಬಹುಮಾನಗಳು

ಉಡುಪಿ: ಕಿದಿಯೂರುಸ್ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್ ವತಿಯಿಂದ ‘ಮುದ್ದು ಕೃಷ್ಣ ಸ್ಪರ್ಧೆ 2026’ ಆಯೋಜಿಸಲಾಗಿದೆ. Yad Bhavam Tad Bhavati’ ಎಂಬ ಧ್ಯೇಯವಾಕ್ಯದೊಂದಿಗೆ ಪುಟಾಣಿಗಳ ಪ್ರತಿಭೆ ಹಾಗೂ ಸಂಭ್ರಮಕ್ಕೆ ವೇದಿಕೆ ಕಲ್ಪಿಸಲು ಶಾಲೆ ಮುಂದಾಗಿದೆ.  ಪುಟಾಣಿ ಕೃಷ್ಣಪ್ರೇಮಿಗಳಿಗಾಗಿ ವಿಶೇಷವಾಗಿ ಆಯೋಜಿಸಿರುವ ಈ ವರ್ಣರಂಜಿತ ಕಾರ್ಯಕ್ರಮವು ಸೆಪ್ಟೆಂಬರ್ 2 ರಂದು ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ. ಉಡುಪಿಯ ನಿಟ್ಟೂರಿನ ಜ್ಞಾನಕಾಶಿ ಕ್ಯಾಂಪಸ್‌ನಲ್ಲಿರುವ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್‌ನ ಜ್ಞಾನ ವೇದಿಕೆಯಲ್ಲಿ ಸ್ಪರ್ಧೆ ನಡೆಯಲಿದೆ. 2ರಿಂದ 5 ವರ್ಷದ […]

ಉಡುಪಿ: ಮನೆಯ ಶೆಡ್‌ನಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ರಿಕ್ಷಾಕ್ಕೆ ಬೆಂಕಿ- ಪಕ್ಕದಲ್ಲಿದ್ದ ಕಾರು, ಸ್ಕೂಟರ್‌ಗೂ ತಗುಲಿದ ಬೆಂಕಿ; ಇಬ್ಬರು ಯುವಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಉಡುಪಿ: ಮನೆಯ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾ ಏಕಾಏಕಿ ಹೊತ್ತಿ ಉರಿದು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್‌ಗೂ ಬೆಂಕಿ ವ್ಯಾಪಿಸಿದ ಘಟನೆ ಭಾನುವಾರ ಬೆಳಿಗ್ಗೆ ಪೆರಂಪಳ್ಳಿ ಸಮೀಪ ನಡೆದಿದೆ.ಘಟನೆ ವೇಳೆ ಸಮಯಪ್ರಜ್ಞೆ ಮೆರೆದ ಇಂಜಿನಿಯರ್ ಮನೋಜ್ ಹಾಗೂ ಯುವ ಉದ್ಯಮಿ ಶರತ್ ಅವರು ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ತಡೆದು ಮನೆಯವರನ್ನು ಹಾಗೂ ಆಸ್ತಿಯನ್ನು ರಕ್ಷಿಸುವಲ್ಲಿ ನೆರವಾದರು.ಭಾನುವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಮನೆಯ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ತೀವ್ರಗೊಂಡು […]

ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಓಣಂ ಆಚರಣೆ

ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಶನಿವಾರ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾದ ಸಾಂಪ್ರದಾಯಿಕ ತಿರುವಾತಿರಂ ನೃತ್ಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ನಂತರ ವಿವಿಧ ಮನರಂಜನಾತ್ಮಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.ಅನುಮೋಲ್, ಆಸಿಫ್ ಹಾಗೂ ಹೀನಾ ಅವರು ಓಣಂ ಹಬ್ಬದ ಮಹತ್ವವನ್ನು ತಿಳಿಸಿದರು.ಪವಿತ್ರಾ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು.ಆಯಿಷಾ ರಫೀದಾ ನಿರೂಪಿಸಿದರು.

ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ’ಗೆ ಸಾಧನಾ ಪ್ರಶಸ್ತಿ 2026

ಪರ್ಕಳ: ಕರಾವಳಿ ಕರ್ನಾಟಕದ ಶ್ರೇಷ್ಠ ಬ್ಯಾಂಕ್ ಎಂದು ಜಗದ್ವಿಖ್ಯಾತಿ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ವಾರ್ಷಿಕ ಸರ್ವಸದಸ್ಯರ ಮಹಾಸಭೆಯಲ್ಲಿ ಸೊಸೈಟಿಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ನೀಡುವ “ಸಾಧನಾ ಪ್ರಶಸ್ತಿ 2026“ ಪ್ರಥಮ ಬಾರಿಗೆ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಪರ್ಕಳ ಇವರಿಗೆ ನೀಡಿ ಗೌರವಿಸಲಾಯಿತು. ಈ ಸಂದರ್ಭ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷರಾದ ಡಾ ಎಂ ಎನ್ ರಾಜೇಂದ್ರ ಕುಮಾರ್ , ಉಪಾಧ್ಯಕ್ಷರು […]

ಬ್ರಹ್ಮಾವರ: ತಂದೆ–ತಾಯಿ ಹತ್ಯೆ; ಆರೋಪಿ ಮಗನ ಬಂಧನ

ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ ಆರೋಪದ ಮೇಲೆ ಪುತ್ರನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.ಗಾಂಧಿನಗರ ಬೈಕಾಡಿ ಗ್ರಾಮದ ಮೆಹಬೂಬ್ ಅಲಿ (55) ಹಾಗೂ ಅವರ ಪತ್ನಿ ಸಂಶದ್ ಬೇಗಂ (50) ಕೊಲೆಯಾದವರು. ಪುತ್ರ ಶಾಹಿದ್ ಅಲಿ (31) ಆರೋಪಿ.ತಂದೆ–ತಾಯಿ ಪ್ರತಿನಿತ್ಯ ಮಾನಸಿಕ ಹಿಂಸೆ ನೀಡುತ್ತಿದ್ದರೆಂಬ ಕಾರಣಕ್ಕೆ ಆ.23ರಂದು ರಾತ್ರಿ 7ರ ಸುಮಾರಿಗೆ ಅವರನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವುದಾಗಿ ಆರೋಪಿ 112ಕ್ಕೆ ಕರೆ ಮಾಡಿ ತಿಳಿಸಿದ್ದಾನೆ. ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದಾಗ ಇಬ್ಬರೂ ಮೃತಪಟ್ಟಿರುವುದು […]