ಮಹಿಳಾ ಉದ್ಯಮಿಗಳಿಗೆ ಕಡಿಮೆ ಬಡ್ಡಿಯಲ್ಲಿ ಸಾಲ ನೀಡುವ ಯೋಜನೆ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯದ ಮಹಿಳೆಯರು ಸಣ್ಣ ಪ್ರಮಾಣದ ಉದ್ಯಮಗಳನ್ನು ಸ್ಥಾಪಿಸಲು ಎಲ್ಲ ಬೆಂಬಲ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ಉದ್ದಿಮೆದಾರರ ದಿನಾಚರಣೆಯ ಸಮಾರೋಪದಲ್ಲಿ ಮಾತನಾಡಿದ ಅವರು, ‘ಮಹಿಳಾ ಉದ್ಯಮಿಗಳಿಗೆ ಅಥವಾ ಸ್ವಂತ ಉದ್ಯಮ ಆರಂಭಿಸಲು ಬಯಸುವ ಮಹಿಳೆಯರಿಗೆ ಸರ್ಕಾರವು ಶೇ 3ರ ಬಡ್ಡಿ ದರದಲ್ಲಿ ₹5 ಕೋಟಿವರೆಗೆ ಸಾಲ ನೀಡುತ್ತದೆ’ ಎಂದರು. ಮಹಿಳೆಯರ ಸಬಲೀಕರಣದ ಉದ್ದೇಶದ […]

ಅಮೇರಿಕಾದಲ್ಲಿ ಲ್ಯಾಪ್ ಟಾಪ್ ನಿಂದ 8 ವರ್ಷದ ಬಳಿಕ ಸಿಕ್ಕಿಬಿದ್ದ ಹಂತಕ: ಆತ ಮಾಡಿದ್ದೇನು?

ನವದೆಹಲಿ: ಅಮೆರಿಕದ ನ್ಯೂಜರ್ಸಿಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದ ಭಾರತೀಯ ಮೂಲದ ತಾಯಿ ( Indian Woman ) ಮತ್ತು ಮಗನ ಕೊಲೆ ಪ್ರಕರಣದಲ್ಲಿ ಸುಮಾರು ಎಂಟು ವರ್ಷಗಳ ಬಳಿಕ ಆರೋಪಿಗೆ ದೋಷಾರೋಪ ಹೊರಿಸಲಾಗಿದೆ. ಆರೋಪಿ ಕೂಡ ಭಾರತೀಯ ಮೂಲದವನಾಗಿದ್ದು, ಇಡೀ ಪ್ರಕರಣದಲ್ಲಿ ಒಂದು ಲ್ಯಾಪ್​ಟಾಪ್​ ಪ್ರಮುಖ ಪಾತ್ರವಹಿಸಿದೆ. ಆಂಧ್ರ ಪ್ರದೇಶ ಮೂಲದ ಶಶಿಕಲಾ ನಾರಾ ಮತ್ತು ಆಕೆಯ ಮಗ ಅನೀಶ್​ ನ್ಯೂಜರ್ಸಿಯಲ್ಲಿದ್ದ ತಮ್ಮ ಅಪಾರ್ಟ್​ಮೆಂಟ್​ನಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ನಜೀರ್​ ಹಮೀದ್​ ಎಂಬಾತನ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. ಈತ […]

ನ.21ರಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

ಬ್ರಹ್ಮಾವರ: ನೀಲಾವರ ಶ್ರೀ ಮಹಿಷಮರ್ದಿನೀ ದಶಾವತಾರ ಯಕ್ಷಗಾನ ಮೇಳದ ತಿರುಗಾಟಕ್ಕೆ ನ. 21ರಂದು ಚಾಲನೆ ದೊರೆಯಲಿದೆ. ಶ್ರೀ ಕ್ಷೇತ್ರದಲ್ಲಿ ಬೆಳಗ್ಗೆ ಗಣಹೋಮ, ರಾತ್ರಿ ಚೌಕಿಯಲ್ಲಿ ಗಣಪತಿ ಪೂಜೆ, ಅನಂತರ ಪ್ರಥಮ ದೇವರ ಸೇವೆ ಆಟ ಶಶಿಪ್ರಭಾ, ಪರಿಣಯ, ಶ್ರೀನಿವಾಸ ಕಲ್ಯಾಣ ಜರಗಲಿದೆ.

ಪೆರ್ಡೂರಿನ ಶ್ರೀಶಾನ್ ಶೆಟ್ಟಿ ಸಾವು ಪ್ರಕರಣ: ಸಮಗ್ರ ತನಿಖೆಗೆ ಪೋಷಕರ ಮನವಿ!

ಉಡುಪಿ: ಪೆರ್ಡೂರು ಕುಕ್ಕುಂಜಾರು ನಿವಾಸಿ ಶ್ರೀಶಾನ್ ಶೆಟ್ಟಿ (15) ನಾಪತ್ತೆ ಹಾಗೂ ಸಾವು ಪ್ರಕರಣಕ್ಕೆ ಸಂಬಂಧಿಸಿ ಸಂಶಯ ವ್ಯಕ್ತಪಡಿಸಿ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ ತಂದೆ ಕರುಣಾಕರ ಶೆಟ್ಟಿ ದೂರು ನೀಡಿದ್ದಾರೆ. ಮಗನ ಜತೆಗೆ ಹೊಳೆ ಬದಿಗೆ ಹೋಗಿದ್ದ ನವೀನ್ (25) ಮೇಲೆ ಸಂಶಯ ವ್ಯಕ್ತವಾಗಿದೆ. ನ.10ರಂದು ಶ್ರೀಶಾನ್ ತಂದೆಯೊಂದಿಗೆ ಪೆರ್ಡೂರು ಪೇಟೆಗೆ ಬಂದಿದ್ದು ಆ ಬಳಿಕ ಅಜ್ಜಿಯ ಮನೆಗೆ ಹೋಗಿ ಬರುವೆನೆಂದು ತಿಳಿಸಿ ತಂದೆಯ ಸ್ಕೂಟರ್ ತೆಗೆದುಕೊಂಡು ಹೋಗಿದ್ದನು. ಅಲ್ಲಿ ನೆರೆಮನೆಯ ಯುವಕ ನವೀನ್ ಎಂಬವನೊಂದಿಗೆ […]

ಯಕ್ಷಗಾನ ಕಲಾವಿದ ಈಶ್ವರ ಗೌಡ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಸಂತಾಪ

ಉಡುಪಿ: ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆಯಲ್ಲಿ ಮಹಿಷಾಸುರನ ಪಾತ್ರ ಮುಗಿಸಿ ಚೌಕಿಗೆ ನಿರ್ಗಮಿಸುತ್ತಿದ್ದಂತೆ ಈಶ್ವರ ಗೌಡರು ( 51) ಹೃದಯಾಘಾತದಿಂದ ನಿನ್ನೆ ನಿಧನರಾದರು. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಈಶ್ವರ ಗೌಡರು ಬುಧವಾರ ರಾತ್ರಿ ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥ ಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. […]