ಸೌಹಾರ್ದ ಸಹಕಾರಿ ಸಂಘಗಳ ಎಸ್. ಎಲ್. ಆರ್. ನಿಧಿಯನ್ನು RBI ಮಾನ್ಯತೆ ಪಡೆದ ಸಹಕಾರಿ ಬ್ಯಾಂಕುಗಳಲ್ಲಿಯೂ ಠೇವಣಿಗೆ ಅವಕಾಶ ನೀಡಿ : ಯಶ್ ಪಾಲ್ ಸುವರ್ಣ

2025ನೇ ಸಾಲಿನ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕದ ಬಗ್ಗೆ ಇಂದು ವಿಧಾನಸಭೆ ಅಧಿವೇಶನದಲ್ಲಿ ನಡೆದ ಚರ್ಚೆಯಲ್ಲಿ ಈ ವಿಧೇಯಕದ ಮೂಲಕ ಸೌಹಾರ್ದ ಸಹಕಾರಿ ಸಂಸ್ಥೆಗಳು ತಮ್ಮ ಶಾಸನಬದ್ಧ ದ್ರವ್ಯಾಸ್ತಿ ನಿಧಿಯನ್ನು ಅಪೆಕ್ಸ್ ಹಾಗೂ ಡಿ ಸಿ ಸಿ ಬ್ಯಾಂಕುಗಳಲ್ಲಿ ಮಾತ್ರ ಠೇವಣಿ ಇಡಲು ಅವಕಾಶ ನೀಡಿದ್ದು, ಇದರಿಂದ ಠೇವಣಿಗಳ ಮೇಲೆ ಸ್ಪರ್ಧಾತ್ಮಕ ಬಡ್ಡಿದರಗಳ ಪಡೆಯಲು ಸಾಧ್ಯವಾಗದೆ ಆರ್ಥಿಕ ಹೊರೆಯಾಗಲಿದೆ. ಅದುದರಿಂದ ಸೌಹಾರ್ದ ಸಹಕಾರಿ ಸಂಘಗಳ ಹಿತದೃಷ್ಟಿಯಿಂದ ಅಪೆಕ್ಸ್ ಬ್ಯಾಂಕ್ ಹಾಗೂ ಡಿ ಸಿ ಸಿ ಬ್ಯಾಂಕುಗಳ […]
ಮಹಿಳೆಯ ವಿರುದ್ಧ ಪ್ರೋಕ್ಸೋ ಪ್ರಕರಣ, ರದ್ದು ಮಾಡಲು ಸಾಧ್ಯವಿಲ್ಲ ಎಂದ ಹೈ ಕೋರ್ಟ್!

ಬೆಂಗಳೂರು: ಪೋಕ್ಸೋ ಕಾಯ್ದೆಗೆ ಲಿಂಗ ಭೇದ ಇಲ್ಲ ಎಂದು ಸಾರಿರುವ ಹೈಕೋರ್ಟ್, ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ 52 ವರ್ಷದ ಮಹಿಳೆಯ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ. ತನ್ನ ವಿರುದ್ಧದ ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಕೋರಿ ಬೆಂಗಳೂರಿನ 52 ವರ್ಷದ ಶಿಕ್ಷಕಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಮಹಿಳೆಗೆ ಪೋಕ್ಸೋ ಕಾಯ್ದೆ […]
ರೈಲ್ವೇ ಟ್ರ್ಯಾಕ್ ಮೇಲೆ ಸೌರಫಲಕ: ಭಾರತೀಯ ರೈಲ್ವೇ ಹೊಸ ಹೆಜ್ಜೆ

ವಾರಾಣಸಿ: ಉತ್ತರಪ್ರದೇಶದ ವಾರಾಣಸಿಯಲ್ಲಿರುವ ಬನಾರಸ್ ಲೋಕೋಮೋಟಿವ್ ವರ್ಕ್ಸ್ (ಬಿಎಲ್ಡಬ್ಲ್ಯೂ) ತನ್ನ ಕಾರ್ಯವ್ಯಾಪ್ತಿಯ ರೈಲ್ವೆ ಹಳಿಗಳ ಕಂಬಿಗಳ ನಡುವೆ ಸೌರ ಫಲಕಗಳನ್ನು ಅಳವಡಿಸುವ ದೇಶದ ಮೊದಲ ಪ್ರಯತ್ನಕ್ಕೆ ಕೈ ಹಾಕಿದೆ. ಬಿಎಲ್ಡಬ್ಲ್ಯೂನ ವರ್ಕ್ಶಾಪ್ನ ಸುಮಾರು 70 ಮೀ. ಉದ್ದಕ್ಕೆ ಫಲಕಗಳನ್ನು ಪ್ರಾಯೋಗಿಕವಾಗಿ ಅಳವಡಿಸಲಾಗಿದ್ದು, ಸ್ವಾತಂತ್ರೋತ್ಸವದ ದಿನ ಉದ್ಘಾಟಿಸಲಾಗಿದೆ. ಅಗತ್ಯ ಬಿದ್ದಾಗ ಬಿಚ್ಚಿ ಮತ್ತೆ ಜೋಡಿಸಬಹುದಾದ ಒಟ್ಟು 28 ಫಲಕಗಳು 15 ಕೆಡಬ್ಲ್ಯೂಪಿ ಸಾಮರ್ಥ್ಯ ಹೊಂದಿದ್ದು, ಪ್ರತಿ ಕಿ.ಮೀ.ಗೆ ದಿನವೊಂದಕ್ಕೆ 880 ಯುನಿಟ್ ವಿದ್ಯುಚ್ಛಕ್ತಿ ಉತ್ಪಾದಿಸಬಹುದಾಗಿದೆ. ಭೂಸ್ವಾಧೀನದ ಅಗತ್ಯವಿಲ್ಲದೆ, ಅನುಪಯುಕ್ತ […]
ಮೂಡುಬಿದಿರೆ: ಬಸ್ ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ; ವೃದ್ಧನ ಬಂಧನ

ಮೂಡುಬಿದಿರೆ: ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬೆಳುವಾಯಿಯ 60 ವರ್ಷದ ರೆಹಮಾನ್ ಎಂಬ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಆರಂಭದಲ್ಲಿ ಯಾವುದೇ ದೂರು ದಾಖಲಾಗದ ಕಾರಣ, ಪೊಲೀಸರು ರೆಹಮಾನ್ ಅವರನ್ನು ವಿಚಾರಣೆಗೆ ಠಾಣೆಗೆ ಕರೆಸಿ ಬಿಡುಗಡೆ ಮಾಡಿದ್ದರು. ಆದರೆ ಈ ಕ್ರಮದಿಂದ ಮೂಡುಬಿದಿರೆಯ ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆಯ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಅವರು ಮೂಡುಬಿದಿರೆ ಪೊಲೀಸ್ […]
ಮಣಿಪಾಲ: ಹೋಟೆಲ್ ಬಾರ್ ಉದ್ಯಮಿ ಕೃಷ್ಣರಾಜ್ ಹೆಗ್ಡೆ ಆತ್ಮಹತ್ಯೆ

ಉಡುಪಿ: ಮಣಿಪಾಲ ಈಶ್ವನಗರದ ಡೌನ್ ಟೌನ್ ಬಾರ್ ಆ್ಯಂಡ್ ರೆಸ್ಟೋರೆಂಟ್ ನ ಪಾಲುದಾರ ಕಾರ್ಕಳ ಬೈಲೂರಿನ ನಿವಾಸಿ ಕೃಷ್ಣರಾಜ್ ಹೆಗ್ಡೆ (45)ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಡುಪಿ-ಮಣಿಪಾಲದಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಇವರು, ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ.ಬೈಲೂರಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಮುಂಚೂಣಿಯಲ್ಲಿ ಸಕ್ರಿಯರಾಗಿದ್ದರು. ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.