ಮಣಿಪಾಲ: ಈಶ್ವರ ನಗರದ ಕುಡಿಯುವ ನೀರಿನ ಘಟಕಕ್ಕೆ ನುಗ್ಗಿದ ಕಾರು: ವಿದ್ಯಾರ್ಥಿಗಳಿಗೆ ಗಾಯ

ಉಡುಪಿ: ಮಣಿಪಾಲದ ಈಶ್ವರ ನಗರದಲ್ಲಿರುವ ನಗರಸಭೆಯ ಶುದ್ಧ ಕುಡಿಯುವ ನೀರಿನ ಘಟಕದ ಆವರಣಕ್ಕೆ ಮಧ್ಯರಾತ್ರಿ ಕಾರೊಂದು ನುಗ್ಗಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ. ಮಣಿಪಾಲದಿಂದ ಆತ್ರಾಡಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 169A ಮೂಲಕ ಸಾಗುತ್ತಿದ್ದ ಕಾರು ದಾರಿ ತಪ್ಪಿ ಹೆದ್ದಾರಿಯಿಂದ ಹೊರಬಂದು ನೇರವಾಗಿ ಕುಡಿಯುವ ನೀರಿನ ಘಟಕದೊಳಗೆ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಏರ್ಬ್ಯಾಗ್ಗಳು ತೆರೆದಿದ್ದು, ಕಾರಿನಲ್ಲಿದ್ದವರಿಗೆ ತಲೆಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳೀಯರ ಪ್ರಕಾರ, ಇದೇ ಸ್ಥಳದಲ್ಲಿ […]
ಗೋಮಾತೆಗೆ ರಾಷ್ಟ್ರಮಾತೆ ಸ್ಥಾನಮಾನಕ್ಕೆ ಆಗ್ರಹ: ಜು.27ರಂದು ಉಡುಪಿ ಜಿಲ್ಲಾಧಿಕಾರಿಗೆ ಮನವಿ

ಉಡುಪಿ: ಗೋಮಾತೆಗೆ ರಾಷ್ಟ್ರಮಾತೆ, ರಾಷ್ಟ್ರೀಯ ದೇವತೆ, ರಾಷ್ಟ್ರೀಯ ಪರಂಪರೆ ಹಾಗೂ ರಾಷ್ಟ್ರೀಯ ಗೌರವದ ಸ್ಥಾನಮಾನ ನೀಡಬೇಕು. ಗೋಸೇವೆಗಾಗಿ ಕೇಂದ್ರ ಕಾನೂನು ಜಾರಿಗೊಳಿಸಿ, ದೇಶಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿ ರಾಷ್ಟ್ರಮಟ್ಟದ ನಾಲ್ಕು ಹಂತದ ‘ಗೋ ಸಮ್ಮಾನ್ ಆಹ್ವಾನ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ಶಂಕರಪುರದ ದ್ವಾರಕಾಮಾಯಿ ಮಠದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಾದ್ಯಂತ ಆಚಾರ್ಯರು, ಸಾಧು–ಸಂತರು, ಗೋಸೇವಾ ಸಂಸ್ಥೆಗಳು, ಗೋಪಾಲಕರು ಹಾಗೂ ಗೋಭಕ್ತರ ಸಹಭಾಗಿತ್ವದಲ್ಲಿ ಈ […]
ಜುಲೈ 8: ಸ್ಥಾಪಕರ ದಿನಾಚರಣೆಯ ಅಂಗವಾಗಿ ಟಿಮೋರಾ ಪ್ರೀಸ್ಕೂಲ್ನಲ್ಲಿ ವಿಶೇಷ ಕಾರ್ಯಕ್ರಮ

ಮಣಿಪಾಲ :ಕರಾವಳಿ ಜಿಲ್ಲೆಯಲ್ಲಿ ಮಕ್ಕಳ ಪ್ರೀಸ್ಕೂಲ್ ಗೆ ಹೆಸರುವಾಸಿಯಾದ ಸಂಸ್ಥೆ ಟಿಮೋರ ಪ್ರೀಸ್ಕೂಲ್ ತನ್ನ ಯಶಸ್ವಿ ಒಂದು ವರ್ಷದ ಪೂರೈಕೆಯ ಅಂಗವಾಗಿ ಸ್ಥಾಪಕರ ದಿನಾಚರಣೆಯನ್ನು ಜುಲೈ 8ರಂದು ಸಂಭ್ರಮದಿಂದ ಆಚರಿಸಿತು. ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿಯವರು ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಆಶೀರ್ವಚನ ನೀಡಿ, ಸಂಸ್ಥೆಯ ಶೈಕ್ಷಣಿಕ ಸೇವೆಯನ್ನು ಪ್ರಶಂಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಶಾಲೆಯ ಸಂಸ್ಥಾಪಕಿ ಅರ್ಚನಾ ರಾವ್ ಅವರು ಸ್ವಾಮೀಜಿಯವರನ್ನು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿದರು. […]
ಮಣಿಪಾಲ MSDC ಯಲ್ಲಿ ಜಪಾನೀಸ್ ಭಾಷೆ ಕಲಿಯುವ ಒಂದೊಳ್ಳೆ ಅವಕಾಶ,ಜಪಾನೀಸ್ ಭಾಷಾ ಕೋರ್ಸ್ಗೆ ಅರ್ಜಿ ಆಹ್ವಾನ

ಮಣಿಪಾಲ: ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC), ಕೆಟಿಸಿ (KTC) ಹಾಗೂ ಜಪಾನ್ನ ಚುಒಹ್ ಪಬ್ಲಿಷಿಂಗ್ ಕಂಪನಿಯ ಸಹಯೋಗದಲ್ಲಿ ಜಪಾನೀಸ್ ಭಾಷಾ ಕೋರ್ಸ್ (N5 – Beginner Level) ಆರಂಭಿಸಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೋರ್ಸ್ ಜುಲೈ 20, 2026 ರಿಂದ ಆರಂಭವಾಗಲಿದ್ದು, ಜಪಾನ್ನಲ್ಲಿ ಕೌಶಲ್ಯಾಧಾರಿತ ಉದ್ಯೋಗಗಳನ್ನು ಗುರಿಯಾಗಿಸಿಕೊಂಡವರಿಗೆ ಇದು ಉತ್ತಮ ಅವಕಾಶವಾಗಿದೆ. ಈ ತರಬೇತಿಯಲ್ಲಿ ಜಪಾನೀಸ್ ಭಾಷೆಯನ್ನು ಓದುವುದು, ಬರೆಯುವುದು, ಬರವಣಿಗೆ ಪದ್ಧತಿಗಳನ್ನು ಕಲಿಯುವುದು, ಅರ್ಥಮಾಡಿಕೊಂಡು ಪ್ರತಿಕ್ರಿಯಿಸುವುದು, ಕಂಜಿ (Kanji) ಅಕ್ಷರಗಳ ಪಾಂಡಿತ್ಯ, ಸಂಭಾಷಣಾ […]
ಉಡುಪಿ ಹೀರೋ ಶಕ್ತಿ ಮೋಟಾರ್ಸ್’ನಲ್ಲಿ ಉದ್ಯೋಗಾವಕಾಶ

ಉಡುಪಿ: ಉಡುಪಿ ಹೀರೋ ಶಕ್ತಿ ಮೋಟಾರ್ಸ್’ನಲ್ಲಿ ಉದ್ಯೋಗಾವಕಾಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪುರುಷ ಅಭ್ಯರ್ಥಿಗಳು -5 ಜನ ವಯಸ್ಸು: 25 ರಿಂದ 35 ರ ವರೆಗೆ #ಚಾಲನಾ ಪರವಾನಗಿ # PDI # ಪಾರ್ಸೆಲ್ ಪಿಕ್ಕೆರ್ # ಮೆಕ್ಯಾನಿಕ್ಗಳು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.ಮೊ:7996210666 Email: [email protected]