ಕೊಂಕಣ ರೈಲ್ವೆಯಲ್ಲಿ ಟಿಕೆಟ್ ರಹಿತ ಪ್ರಯಾಣ; 2.37 ಕೋಟಿ ರೂ. ದಂಡ ವಸೂಲಿ

ಉಡುಪಿ: ಟಿಕೆಟ್‌ ರಹಿತ ಪ್ರಯಾಣಿಕರ ಪತ್ತೆಗಾಗಿ ಕೊಂಕಣ ರೈಲು ಮಾರ್ಗದಲ್ಲಿ ವಿಶೇಷ ಅಭಿಯಾನವನ್ನು ಕೈಗೊಂಡಿರುವ ಕೊಂಕಣ ರೈಲ್ವೆ ನಿಗಮವು ಈ ವರ್ಷ ಇದುವರೆಗೆ ಒಟ್ಟು 2,37,11,161 ರೂ.ಗಳನ್ನು ದಂಡ ರೂಪದಲ್ಲಿ ವಸೂಲಿ ಮಾಡಿದೆ ಎಂದು ನಿಗಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಇಂದಿನವರೆಗೆ ಒಟ್ಟು 3,765 ಟಿಕೇಟ್ ರಹಿತ ಪ್ರಯಾಣಿಕರ ತಪಾಸಣಾ ಅಭಿಯಾನ ಕೈಗೊಳ್ಳಲಾಗಿದೆ. ಈ ವೇಳೆ 40,602 ಮಂದಿ ಅನಧಿಕೃತವಾಗಿ ಸಂಚರಿಸುವವರನ್ನು ಹಾಗೂ ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಂಚಿ, ದಂಡ […]

ಧರ್ಮಸ್ಥಳ ಪ್ರಕರಣ: FSL ವರದಿ ಬರುವವರೆಗೂ ಶವ ಶೋಧ ಕಾರ್ಯಾಚರಣೆ ಸ್ಥಗಿತ; ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಧರ್ಮಸ್ಥಳ ಗ್ರಾಮ ಪ್ರಕರಣ ಸಂಬಂಧಿಸಿದಂತೆ ವಿಧಿವಿಜ್ಞಾನದ ಪ್ರಯೋಗಾಲಯದ ವರದಿ ಬರುವವರೆಗೂ ಶವ ಶೋಧ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಎಸ್ಐಟಿ ನಿರ್ಧರಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸೋಮವಾರ ಹೇಳಿದರು. ಸೋಮವಾರ ವಿಧಾನಸಭೆಯಲ್ಲಿ ಸುದೀರ್ಘ ಚರ್ಚೆಯ ಬಳಿಕ ಉತ್ತರಿಸಿದ ಅವರು, ಎಸ್‌ಐಟಿ ಯಾರದೇ ಒತ್ತಡಕ್ಕೆ ಮಣಿಯದೆ ಬಹಳ ಗಂಭೀರ ಮತ್ತು ಪಾರದರ್ಶಕವಾಗಿ ತನಿಖೆ ನಡೆಸುತ್ತಿದೆ. ಧರ್ಮಸ್ಥಳದಲ್ಲಿ ಇನ್ನೂ ಎಷ್ಟು ಕಡೆ ಅಗೆಯಬೇಕು, ತನಿಖೆ ಮುಂದಕ್ಕೆ ಹೋಗಬೇಕಾ ಅಥವಾ ಬೇಡವಾ ಎಂಬುದನ್ನು ಎಸ್‌ಐಟಿ ತೀರ್ಮಾನಿಸಲಿದೆ. ಈವರೆಗೆ ಸಿಕ್ಕಿರುವ ಅಸ್ಥಿಪಂಜರ, […]

ಧರ್ಮಸ್ಥಳ ಪ್ರಕರಣದಲ್ಲಿ ಶೀಘ್ರವೇ ಸತ್ಯಾಸತ್ಯತೆ ಹೊರಬರಲಿದೆ:ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಿಧಾನಸೌಧ: ಧರ್ಮಸ್ಥಳದ ಹೆಸರಿಗೆ ಕಳಂಕ ಬರಬಾರದು ಎಂಬ ಕಾರಣಕ್ಕೆ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಈ ಕುರಿತು ಶೀಘ್ರವೇ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಗೃಹ ಸಚಿವರು ಉತ್ತರವನ್ನು ಕೊಟ್ಟಿದ್ದಾರೆ. ಅದಷ್ಟು ಬೇಗ ಸತ್ಯ ಹೊರಬೀಳಲಿದೆ ಎಂದರು. ನಿನ್ನೆ ಶ್ರಾವಣ ಸೋಮವಾರ ಆದ ಕಾರಣ ಎಲ್ಲಾ ವೀರಶೈವ-ಲಿಂಗಾಯತ ಸಚಿವರು, ಶಾಸಕರು, ವಿಧಾನಪರಿಷತ್‌ ಸದಸ್ಯರು ಪೂಜೆಯಲ್ಲಿ […]

ಗೋಲ್ಡ್ ಮ್ಯಾನ್ ಗೆ ಒಲಿದ ಇಂಟರ್ ನ್ಯಾಶನಲ್ ಗೋಲ್ಡ್ ಅವಾರ್ಡ್

ಉಡುಪಿಯ ಆಭರಣ ಜ್ಯುವೆಲ್ಲರ್ಸ್ ನಿರ್ದೇಶಕ ಸುಭಾಶ್ ಎಂ. ಕಾಮತ್ ಕೀನ್ಯಾದ ಮಸೈಮಾರಾದಲ್ಲಿ ಸೆರೆಹಿಡಿದಿರುವ ಎರಡು ಚೀತಾಗಳು ತನ್ನ ಬೇಟೆಯನ್ನು ಬೆನ್ನು ಹತ್ತುವ “ಹಂಗರ್ ವರ್ಸಸ್ ಹೋಪ್” ಛಾಯಾಚಿತ್ರಕ್ಕೆ ಓರಾ ಡಿ ಫ್ರೇಮ್ ಸರ್ಕ್ಯುಟ್ ಆಯೋಜಿಸಿದ ಛಾಯಾಚಿತ್ರ ಸ್ಪರ್ಧೆಯ ವನ್ಯಜೀವಿ ವಿಭಾಗದಲ್ಲಿ ಕ್ಲಬ್ ಗೋಲ್ಡ್ ಅವಾರ್ಡ್ ಪಡೆದಿರುತ್ತಾರೆ. ಐವತ್ತಕ್ಕೂ ಹೆಚ್ಚು ದೇಶಗಳ ಛಾಯಾಗ್ರಾಹಕರು ಭಾಗವಹಿಸಿರುವ ಈ ಸ್ಪರ್ಧೆಯು ಪ್ರತಿಷ್ಟಿತ ಎಫ್. ಐ. ಎ. ಪಿ ಮಾನ್ಯತೆಯನ್ನು ಪಡೆದಿರುತ್ತದೆ. ಉಡುಪಿಯ ಪ್ರಸಿದ್ಧ ಉದ್ಯಮಿಯಾಗಿರುವ ಸುಭಾಶ್ ಕಾಮತ್ ಕೋವಿಡ್ ಲಾಕ್ ಡೌನ್ […]

ಅಮೆರಿಕದ ಐ ಸಿ ಎಸ್ ಇಂಟರ್‌ನ್ಯಾಷನಲ್‌ನಿಂದ ಆಸ್ಟ್ರೋ ಮೋಹನ್ ಅವರಿಗೆ ಗೌರವ ಫೆಲೋಶಿಪ್‌

ಉಡುಪಿ, ಆಗಸ್ಟ್‌ 19: ವಿಶ್ವ ಛಾಯಾಗ್ರಹಣ ದಿನದಂದು, ಖ್ಯಾತ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಇಮೇಜ್‌ ಕಾಲಿಗ್‌ ಸೊಸೈಟಿ ಇಂಟರ್‌ನ್ಯಾಷನಲ್‌ (ICS) ವತಿಯಿಂದ ಅತ್ಯುನ್ನತ ಗೌರವಗಳಲ್ಲಿ ಒಂದಾದ ಹಾನರರಿ ಫೆಲೋಶಿಪ್‌ (Hon.FICS) ಅನ್ನು ಪ್ರದಾನ ಮಾಡಲಾಗಿದೆ. ಶ್ರೀ ಟೋನಿ ಲೀ ಕಿಮ್ ಥುವಾನ್ APSA, Hon.EFIAP, ಕು. ಸಾರಾ ತೈ ಮೇ ಲಿನ್ ARPS ಹಾಗೂ ICS ಗೌರವ ಸಮಿತಿ ಅವರ ನೇತೃತ್ವದಲ್ಲಿ ನೀಡಲಾದ ಈ ಪ್ರಶಸ್ತಿ, ಛಾಯಾಗ್ರಹಣ ಕಲೆ ಹಾಗೂ ಸಂಸ್ಕೃತಿಯ ಅಭಿವೃದ್ದಿಗೆ, […]