ಕಾರ್ಕಳದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ರಕ್ಷಾಬಂಧನ ಕಾರ್ಯಕ್ರಮ

ಕಾರ್ಕಳ: ನಗರದ ಆರಾಮ್ ಇಂಡಸ್ಟ್ರೀಸ್ ರಸ್ತೆಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸೇವಾಕೇಂದ್ರದಲ್ಲಿ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಕಾಸರಗೋಡು ಸೇವಾಕೇಂದ್ರದ ಸಂಚಾಲಕಿ ರಾಜಯೋಗಿನಿ ಬಿ.ಕೆ. ವಿಜಯಾಜಿ ಅವರು ರಕ್ಷಾಬಂಧನ ಹಬ್ಬದ ಆಧ್ಯಾತ್ಮಿಕ ಮಹತ್ವವನ್ನು ವಿವರಿಸಿದರು. ಪ್ರಪಂಚದ ಎಲ್ಲ ಮಾನವ ಆತ್ಮರೂ ಒಬ್ಬ ಪರಮಾತ್ಮನ ಸಂತಾನರು. ಪ್ರಸ್ತುತ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿದ್ದು, ನೈತಿಕ ಹಾಗೂ ಆಧ್ಯಾತ್ಮಿಕ ಶಕ್ತಿಯ ಕೊರತೆ ಕಂಡುಬರುತ್ತಿದೆ. ಇಂತಹ ಸಂದರ್ಭದಲ್ಲಿ ಪರಮಾತ್ಮನ ಅವತರಣೆಯಾಗಿದೆ ಎಂದು ಅವರು ಹೇಳಿದರು. […]

ಮಲ್ಪೆಯಲ್ಲಿ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ

ಉಡುಪಿ: ಮಳೆಗಾಲದ ಎರಡು ತಿಂಗಳ ಮೀನುಗಾರಿಕೆ ರಜೆ ಪೂರ್ಣಗೊಂಡಿದ್ದು, ಪಶ್ಚಿಮ ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆ ಚುರುಕುಗೊಂಡಿದೆ. ಬೃಹತ್ ಗಾತ್ರದ ಯಾಂತ್ರಿಕೃತ ಮೀನುಗಾರಿಕಾ ಬೋಟುಗಳು ಕಡಲಿಗಿಳಿದಿರುವ ಹಿನ್ನೆಲೆಯಲ್ಲಿ ಉತ್ತಮ ಮೀನುಗಾರಿಕೆ ಹಾಗೂ ಮೀನುಗಾರರ ಸುರಕ್ಷತೆಗಾಗಿ ಮಲ್ಪೆಯಲ್ಲಿ ಶ್ರಾವಣ ಹುಣ್ಣಿಮೆಯಂದು ಸಮುದ್ರ ಪೂಜೆ ನೆರವೇರಿಸಲಾಯಿತು. ಮಲ್ಪೆಯ ವಡಭಂಡೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮೀನುಗಾರ ಮುಖಂಡರು ಹಾಗೂ ಮೀನುಗಾರರು ಮೆರವಣಿಗೆಯಲ್ಲಿ ಸಮುದ್ರ ತೀರಕ್ಕೆ ತೆರಳಿದರು. ಅಲ್ಲಿ ಸಮುದ್ರರಾಜನಿಗೆ ಆರತಿ ಬೆಳಗಿಸಿ, ಉತ್ತಮ ಮೀನುಗಾರಿಕೆ ಹಾಗೂ ಯಾವುದೇ ಅನಾಹುತ […]

ಅಷ್ಟಮಿ ಸಂಭ್ರಮಕ್ಕೆ ಹುಲಿಗಳ ಘರ್ಜನೆ

ಉಡುಪಿ: ಕೃಷ್ಣನೂರು ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಕ್ಕೆ ಸಜ್ಜಾಗುತ್ತಿದ್ದು, ಅಷ್ಟಮಿಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕೃಷ್ಣಮಠದ ಸುತ್ತಮುತ್ತ ಹಾಗೂ ರಥಬೀದಿಯಲ್ಲಿ ಹಬ್ಬದ ಸಿದ್ಧತೆಗಳು ಭರದಿಂದ ಸಾಗಿವೆ. ಈ ಬಾರಿ ಅಷ್ಟಮಿ ಸಂಭ್ರಮಕ್ಕೆ ಕರಾವಳಿಯ ಜನಪದ ಸೊಗಡಿನ ಹುಲಿವೇಷ ಮತ್ತಷ್ಟು ಮೆರುಗು ನೀಡಲಿದೆ. ಅಷ್ಟಮಿ ಸಂಭ್ರಮಕ್ಕೆ ಹುಲಿಗಳ ಘರ್ಜನೆ; ಎರಡು ದಿನ ಹುಲಿವೇಷ ಸ್ಪರ್ಧೆ ಅಷ್ಟಮಿ ಅಂಗವಾಗಿ ಕೃಷ್ಣಮಠದ ರಾಜಾಂಗಣದಲ್ಲಿ ಸೆ.4 ಮತ್ತು 5ರಂದು ಎರಡು ದಿನಗಳ ಕಾಲ ಹುಲಿವೇಷ ಸ್ಪರ್ಧೆ ಆಯೋಜಿಸಲಾಗಿದೆ. ಹುಲಿವೇಷ ತಂಡಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ […]

ಇನ್ನಂಜೆಯಲ್ಲಿ ಕಾಪು ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

ಉಡುಪಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಇನ್ನಂಜೆ ಎಸ್.ವಿ.ಎಚ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಬಾಲಕ–ಬಾಲಕಿಯರ ತ್ರೋಬಾಲ್ ಪಂದ್ಯಾಟಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪಂದ್ಯಾಟವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಇನ್ನಂಜೆ ಎಸ್.ವಿ.ಎಚ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರತ್ನ ಕುಮಾರ್, ಉಡುಪಿ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್. ಐತಾಳ್, ಉದಯ್ ಇನ್ನಂಜೆ, ಇನ್ನಂಜೆ ಗ್ರಾಮ ಪಂಚಾಯಿತಿ […]

ಉಚಿತ ದಂತ ಚಿಕಿತ್ಸಾ ಶಿಬಿರ

ನಿಟ್ಟೂರು: ಶ್ರೀ ಧೂಮಾವತಿ ಯುವಕ ಮಂಡಲ (ರಿ) ವಿಷ್ಣುಮೂರ್ತಿ ನಗರ, ನಿಟ್ಟೂರು, ಹಾಗೂ ಅಗ್ರಜ ಸೌಹಾರ್ದ ಸಹಕಾರಿ ಸಂಘ (ನಿ), ವಾದಿರಾಜ ಕಾಂಪ್ಲೆಕ್ಸ್, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಆಗಸ್ಟ್ 30ರಂದು ಆದಿತ್ಯವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿಟ್ಟೂರಿನ ಶ್ರೀ ಸೋಮನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ನಿಟ್ಟೂರು ಇಲ್ಲಿಯ ಶ್ರೀಮತಿ ಯಶೋಧ ಗುಂಡುರಾಜ ಸಭಾಭವನದಲ್ಲಿ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಮಣಿಪಾಲ, […]