ಶ್ರೀ ಕ್ಷೇತ್ರ ಶಂಕರಪುರದಲ್ಲಿ ಶ್ರೀ ಮುಖ್ಯಪ್ರಾಣ ಭವ್ಯ ಶಿಲಾ ಮೂರ್ತಿ ಪ್ರತಿಷ್ಠಾಪನ ಸಮಿತಿ ರಚನೆ.

ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ ಶ್ರೀ ದ್ವಾರಕಾಮಯಿ ಮಠ(ರಿ.) ಹಾಗೂ ಶ್ರೀ ಸಾಯಿ ಸಾಂತ್ವನ ಮಂದಿರ ಟ್ರಸ್ಟ್(ರಿ.) ವತಿಯಿಂದ ಶ್ರೀ ಮುಖ್ಯಪ್ರಾಣ ದೇವರ ಭವ್ಯ ಶಿಲಾ ಮೂರ್ತಿಯ ಪ್ರತಿಷ್ಠಾಪನೆ 2026 ಏಪ್ರಿಲ್ ತಿಂಗಳಲ್ಲಿ ಶ್ರೀ ಕ್ಷೇತ್ರದ ಆವರಣದಲ್ಲಿ ಪ್ರತಿಷ್ಠಾಪಿಸುವುದರ ಬಗ್ಗೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಸಂಕಲ್ಪಿಸಿದರು, ಈ ಸಂಕಲ್ಪದಲ್ಲಿ ಸಕಾರ ಗೊಳಿಸಲು ಶ್ರೀ ಕ್ಷೇತ್ರದ ಭಕ್ತರು, ಟ್ರಸ್ಟ್, ಸೇವಾದಳವನ್ನು ಒಳಗೊಂಡ ಸಮಿತಿಯನ್ನು 2025 ಜುಲೈ 01ರ ಮಂಗಳವಾರ ರಚಿಸಲಾಯಿತು. ಪ್ರದಾನ ಗೌರವ ಅಧ್ಯಕ್ಷರಾಗಿ ದಯಾನಂದ […]

ವಿಬುಧೇಶತೀರ್ಥರ ವ್ಯಕ್ತಿತ್ವದ ಒಳಮುಖಗಳು ಬನ್ನಂಜೆ ಗೋವಿಂದಾಚಾರ್ಯರು ಕಂಡಂತೆ

ದ್ವೈತಸಿದ್ಧಾಂತಿ ಪ್ರತಿಪಾದಕ ಆಚಾರ್ಯ ಮಧ್ವರ ಮಾತಿದು:ಮಹಾಪ್ರಯತ್ನ –ವರ್ಜಿತಾಃಮಹಾನುಭಾವ –ವರ್ಜಿತಾಃ |ಹರೇರನಗ್ರಹೋಜ್ಝಿತಾಃ ನರಾ ನ ಜಗ್ಮುರುನ್ನತಿಮ್ ||ನಿರಂತರ ಪ್ರಯತ್ನಶೀಲತೆ, ಮಹತ್ತನ್ನು ಸಾಧಿಸುವ ಛಲತೊಟ್ಟ ಆತ್ಮಶಕ್ತಿ ಮತ್ತು ಭಗವಂತನ ಅನುಗ್ರಹ- ಈ ಮೂರರಲ್ಲಿ ಯಾವೊಂದು ಕೊರತೆಯಾದರೂ ಮನುಷ್ಯ ಎತ್ತರಕ್ಕೇರಲಾರ. ಉಡುಪಿಯ ಶ್ರೀ ಅದಮಾರು ಮಠದ 31 ನೆಯ ಯತಿವರ್ಯರಾಗಿದ್ದ ಶ್ರೀ ವಿಬುಧೇಶತೀರ್ಥ ಶ್ರೀಪಾದರಲ್ಲಿ ಈ ಮೂರೂ ಮುಪ್ಪುರಿಗೊಂಡಿದೆ. ಸಾಮಾಜಿಕ ಜೀವನದ ಅವರ ಯಶಸ್ಸಿನ ಗುಟ್ಟು ಇದೇ ಆಗಿದೆ ಎನ್ನುತ್ತಾರೆ ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು. ಮಾಧ್ವವಾಙ್ಮಯದ ಉದ್ ಗ್ರಂಥ ‘ನ್ಯಾಯಸುಧಾ’ದ ಪಾಠ […]

ಮಣಿಪಾಲ: ಎಕ್ಸ್ ಪ್ರೆಸ್ ಬಸ್ ನ ಚಕ್ರದಡಿಗೆ ಸಿಲುಕಿ ಮಹಿಳೆ ಮೃತ್ಯು.

ಉಡುಪಿ: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಬಸ್ ನಡಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಮಣಿಪಾಲ ಈಶ್ವರನಗರದ ಎಂಐಟಿ ಕಾಲೇಜು ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಸಂಭವಿಸಿದೆ.ಮೃತರನ್ನು ವಿನೋದ ಸಿಸ್ಟರ್ (65) ಎಂದು ಗುರುತಿಸಲಾಗಿದೆ. ಅವರು ತನ್ನ ಮಗಳ ಮಕ್ಕಳನ್ನು ಶಾಲಾ ಬಸ್ ನಿಂದ ಇಳಿಸಿ ಮನೆ ಬಿಟ್ಟು ಬಳಿಕ ಉಪ್ಪೂರು ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಸ್ ನ ಚಕ್ರದಡಿಗೆ ಸಿಲುಕಿದ ಮಹಿಳೆಯ ದೇಹ ಛಿದ್ರ ಛಿದ್ರಗೊಂಡಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ […]

ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ.

ಉಡುಪಿ: ಕಾರ್ಮಿಕ ಇಲಾಖೆಯ ಸರಕಾರದ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ

ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ ಸ್ಟಿಟ್ಯೂಟ್ ನಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಗತಿ ಆರಂಭ

ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಗತಿ ಆರಂಭ ಕಳೆದ 14 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಮಣಿಪಾಲದ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ 2024-25ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯನ್ನು ವಿಧ್ಯುಕ್ತವಾಗಿ ಆರಂಭವಾಯಿತು. ತರಬೇತಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಡಾ. ಎನ್.ವಿ. ಕಾಮತ್ ಅವರು ಮಾತ್ರವಲ್ಲದೇ ಅತಿಥಿಗಳಾಗಿ ಶ್ರೀಮತಿ ಚಂದ್ರಕಲಾ, ಶ್ರೀಮತಿ ಚೇತನಾ ಅವರೂ ಭಾಗವಹಿಸಿ ದೀಪ ಪ್ರಜ್ವಲನದ ಮೂಲಕ ಉದ್ಘಾಟನೆಯನ್ನು ನೆರವೇರಿಸಿದರು. ಸಂಸ್ಥೆಯ ಪ್ರಾಂಶುಪಾಲೆ ಶ್ರೀಮತಿ ಸುನೀತಾ ಅವರು ಸಂಸ್ಥೆಯು ನಡೆದು ಬಂದ […]