ನೇಪಾಳದಲ್ಲಿ ಸಂಕಷಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ಜನರ ಮಾಹಿತಿ ನೀಡಲು ಸೂಚನೆ

ಉಡುಪಿ: ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಹಠಾತ್ ಭೀಕರ ಜಲಪ್ರಳಯ ಹಾಗೂ ಭೂಕುಸಿತದಿಂದಾಗಿ (Nepal Flash Floods)ಉಡುಪಿ ಜಿಲ್ಲೆಯಿಂದ ಪ್ರವಾಸ ಅಥವಾ ಯಾತ್ರೆಗೆ ತೆರಳಿ ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ವ್ಯಕ್ತಿಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಅವರನ್ನು ಸುರಕ್ಷಿತವಾಗಿ ಕರೆತರಲು ಜಿಲ್ಲಾಡಳಿತದಿಂದ ತುರ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನೇಪಾಳದಲ್ಲಿ ಸಿಲುಕಿರುವ ಉಡುಪಿ ಜಿಲ್ಲೆಯ ನಿವಾಸಿಗಳ ಕುಟುಂಬಸ್ಥರ ಅನುಕೂಲಕ್ಕಾಗಿ ಜಿಲ್ಲಾ ಮಟ್ಟದಲ್ಲಿ ತುರ್ತು ಸಹಾಯವಾಣಿಯನ್ನು ತೆರೆಯಲಾಗಿದ್ದು, ಬಾಧಿತರ ವಿವರಗಳನ್ನು ತಕ್ಷಣವೇ ನೀಡುವಂತೆ ಜಿಲ್ಲಾಡಳಿತ ಸೂಚಿಸಿದೆ. ಮಾಹಿತಿ ಒದಗಿಸುವ ವಿಧಾನ: […]

ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಫಾಸ್ಟ್ ಫುಡ್ ಟ್ರಕ್/ಟ್ರೈಲರ್/ ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್, ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯಧನ, ಅರಿವು ಹಾಗೂ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಗಳಡಿ ಸಾಲ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ನಿಗಮದ ವೆಬ್‌ಸೈಟ್ kccdclonline.karnataka.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) “ಮೌಲಾನಾ […]

ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ಉಡುಪಿ: ಪಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ. ಕಿಸಾನ್) ಯೋಜನೆಯಡಿ ಕೇಂದ್ರ ಸರ್ಕಾರದಿಂದ ನೀಡಲಾಗುವ ಆರ್ಥಿಕ ನೆರವನ್ನು ಪಡೆಯಲು ಫಲಾನುಭವಿಗಳು ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಇ-ಕೆವೈಸಿ ಪೂರ್ಣಗೊಳಿಸದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತಿನ ಆರ್ಥಿಕ ನೆರವು ಬಿಡುಗಡೆಯಾಗುವುದಿಲ್ಲ.ಜಿಲ್ಲೆಯಲ್ಲಿ ಪಿ.ಎಂ. ಕಿಸಾನ್ ಯೋಜನೆಯಡಿ ಒಟ್ಟು 1,82,174 ಮಂದಿ ರೈತರು ನೋಂದಾಯಿಸಿಕೊoಡಿರುತ್ತಾರೆ. ನೋಂದಾಯಿಸಿಕೊoಡಿರುವ ರೈತ ಫಲಾನುಭವಿಗಳ ಪೈಕಿ ಉಡುಪಿ ತಾಲೂಕಿನಲ್ಲಿ 55,466, ಕುಂದಾಪುರ ತಾಲೂಕಿನಲ್ಲಿ 73,985 ಹಾಗೂ ಕಾರ್ಕಳ ತಾಲೂಕಿನಲ್ಲಿ 35,821 ಮಂದಿ ಸೇರಿದಂತೆ ಒಟ್ಟು 1,65,272 ಮಂದಿ […]

UDUPI: OFFICE SPACE FOR RENT

UDUPI: OFFICE SPACE FOR RENT Facilities Offered: For More Details: Business Bay DevelopersKunjibettu, Udupi-Manipal Road Contact Us: 9741551188www.businessbaycenter.in

ನವೆಂಬರ್ ಮೊದಲ ವಾರ ಉಡುಪಿ ನಗರದಲ್ಲಿ ಪೈಪ್‌ಲೈನ್ ಮೂಲಕ ಗ್ಯಾಸ್ ವಿತರಣೆ

ಉಡುಪಿ: ಮನೆಮನೆಗೆ ಪೈಪ್‌ಲೈನ್ ಮೂಲಕ ಅಡುಗೆ ಅನಿಲ ಪೂರೈಸುವ ಯೋಜನೆಯಡಿ ನವೆಂಬರ್ ಮೊದಲ ವಾರದಲ್ಲಿ ಉಡುಪಿ ನಗರದಲ್ಲಿ ಗ್ಯಾಸ್ ವಿತರಣೆ ಆರಂಭಿಸುವುದಾಗಿ ಅದಾನಿ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಯೋಜನೆಯ ಅನುಷ್ಠಾನದ ಕುರಿತು ಚರ್ಚಿಸಲಾಯಿತು. ಸುಮಾರು 25 ಸಾವಿರ ಕುಟುಂಬಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆ ಆರೇಳು ವರ್ಷಗಳಿಂದ ವಿಳಂಬವಾಗುತ್ತಿರುವ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದ ಕೋಟ, ಪಣಂಬೂರಿನಿಂದ ಕರಾವಳಿ ಜಂಕ್ಷನ್‌ವರೆಗೆ ಸುಮಾರು 48 ಕಿ.ಮೀ. ಪೈಪ್‌ಲೈನ್ ವಿಸ್ತರಿಸಲಾಗಿದೆ. […]