ಉಡುಪಿ: ಯುವಕ ನಾಪತ್ತೆ

ಉಡುಪಿ ಆಗಸ್ಟ್ 27: ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಅಲೆವೂರಿನ ಇಂದಿರಾನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪವನ್ ಕುಮಾರ್ (24) ಎಂಬ ಯುವಕ ಆಗಸ್ಟ್ 8 ರಂದು ರಾತ್ರಿ 9 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ಇದುವರೆಗೂ ವಾಪಾಸು ಬಾರದೇ, ಸಂಬoಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.5 ಅಡಿ 2 ಇಂಚು ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ […]

ಉಡುಪಿ: ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ: ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. POSITION — NO’S * SALES MANAGER— 1 * SERVICE MANAGER— 1 * SALES EXECUTIVES— 4 * ADVISORS — 2 * HELPERS — 3ಆಸಕ್ತರು ತಮ್ಮ ರೆಸ್ಯೂಮ್ ಅನ್ನು ಇಮೇಲ್ ಮೂಲಕ ಕಳಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: [email protected]📞 +91 7996210666LOCATIONS: Udupi, Kundapura, Kaup, Brahmavara

ತ್ರಿಶಾ ಕ್ಲಾಸಸ್: ಸಿಎಸ್ ಪ್ರೊಫೆಷನಲ್ ಪರೀಕ್ಷೆಯಲ್ಲಿ ಹಿತೇಶ್ ಆರ್. ಎನ್. ಉತ್ತೀರ್ಣ

ಹೊಸದಿಲ್ಲಿಯ ಕಂಪೆನಿ ಸೆಕ್ರೆಟರಿ ಪ್ರೊಫೆಷನಲ್ (CS Professional) ICSI (Institute of Company Secretaries of India) ಸಂಸ್ಥೆಯಿಂದ ನಡೆಸಲ್ಪಟ್ಟ ಜೂನ್ 2026 ಪರೀಕ್ಷೆಯಲ್ಲಿ ಹಿತೇಶ್ ಆರ್. ಎನ್. ಉತ್ತೀರ್ಣರಾಗಿದ್ದಾರೆ. ಅವರು ಬಂಟ್ವಾಳದ ರತ್ನಕರ್ ನಡಾರ್ ಹಾಗೂ ಹರಿಣಾಕ್ಷಿ ದಂಪತಿಗಳ ಸುಪುತ್ರನಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಸಿಎಸ್ ಉಲ್ಲಾಸ್ ಭಟ್ & ಅಸೋಸಿಯೇಟ್ ಮಂಗಳೂರಿನಲ್ಲಿ ನಡೆಸುತ್ತಿದ್ದಾರೆ. ಸಿಎಸ್ ಇಇಟಿ, ಸಿಎಸ್ ಎಕ್ಸಿಕ್ಯೂಟಿವ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಮಂಗಳೂರಿನ ತ್ರಿಶಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ. ತ್ರಿಶಾ ಸಂಸ್ಥೆಯ […]

ತ್ರಿಶಾ ಕ್ಲಾಸಸ್: ಸಿಎಸ್ ಪ್ರೊಫೆಷನಲ್ ಪರೀಕ್ಷೆಯಲ್ಲಿ ದಿಶಾ ಚಿತ್ತಲ್ ಉತ್ತೀರ್ಣ

ಹೊಸದಿಲ್ಲಿಯ ಕಂಪೆನಿ ಸೆಕ್ರೆಟರಿ ಪ್ರೊಫೆಷನಲ್ (CS Professional) ICSI (Institute of Company Secretaries of India) ಸಂಸ್ಥೆಯಿಂದ ನಡೆಸಲ್ಪಟ್ಟ ಜೂನ್ 2026 ಪರೀಕ್ಷೆಯಲ್ಲಿ ದಿಶಾ ಚಿತ್ತಲ್ ಉತ್ತೀರ್ಣರಾಗಿದ್ದಾರೆ. ಅವರು ಕಾರವಾರದ ವಿನಾಯಕ್ ಚಿತ್ತಲ್ & ವನಿತಾ ಚಿತ್ತಲ್ ದಂಪತಿಗಳ ಸುಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು Pharmaids Pharmaceuticals Limited ಬೆಂಗಳೂರಿನಲ್ಲಿ ನಡೆಸುತ್ತಿದ್ದಾರೆ. ಸಿಎಸ್ ಫೌಂಡೇಶನ್, ಸಿಎಸ್ ಎಕ್ಸಿಕ್ಯೂಟಿವ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಉಡುಪಿಯಲ್ಲಿ, ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ […]

ನಾರಾಯಣ ಗುರು ಜನ್ಮದಿನ: ಆ.30ರಂದು ಗುರು ಸಂದೇಶ ಸಾಮರಸ್ಯ ಜಾಥಾ

ಉಡುಪಿ: ಶ್ರೀ ನಾರಾಯಣ ಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಆಶ್ರಯದಲ್ಲಿ ‘ಗುರು ಸಂದೇಶ ಸಾಮರಸ್ಯ ಜಾಥಾ’ ಹಾಗೂ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆ.30ರಂದು ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9.30ಕ್ಕೆ ನಾರಾಯಣಗುರು ಆಡಿಟೋರಿಯಂನಲ್ಲಿ ರಾಜ್ಯಮಟ್ಟದ ಭಾಷಣ ಸ್ಪರ್ಧೆ ಉದ್ಘಾಟನೆಗೊಳ್ಳಲಿದೆ. ಮಧ್ಯಾಹ್ನ 1ಕ್ಕೆ ಬಹುಮಾನ ವಿತರಣೆ ಸಮಾರಂಭ ನಡೆಯಲಿದೆ. ಬಳಿಕ ಗುರು […]