ಬಂಟ್ವಾಳದ ಸಮಗ್ರ ಅಭಿವೃದ್ದಿಗಾಗಿ ರಮಾನಾಥ್ ರೈ ಅವರನ್ನು ಗೆಲ್ಲಿಸೋಣ: ಜಯಂತಿ ಪೂಜಾರಿ

ಬಂಟ್ವಾಳ: ಮಹಿಳೆಯರಿಗೆ ಸುರಕ್ಷಿತ, ಸುಭದ್ರ ಮತ್ತು ಸಮೃದ್ಧಿದಾಯಕ ಪ್ರಣಾಳಿಕೆಯನ್ನು ಕಾಂಗ್ರೆಸ್ ಘೋಷಿಸಿದ್ದು, ಇಂತಹ ದೂರದೃಷ್ಟಿಯುಳ್ಳ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡುವ ಮೂಲಕ ರಾಜ್ಯದಲ್ಲಿ ಸುಸ್ಥಿರ ಸರಕಾರ ರಚಿಸಲು ನೆರವಾಗುವಂತೆ ಬಂಟ್ವಾಳ ಕಾಂಗ್ರೆಸ್ ಮಹಿಳಾ ವಿಭಾಗದ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಮನವಿ ಮಾಡಿದರು. ಬಂಟ್ವಾಳ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಐದು ಪ್ರಮುಖ ಗ್ಯಾರಂಟಿಗಳನ್ನು ಘೋಷಿಸಿದೆ. ಬೆಲೆ ಏರಿಕೆ ಗಗನಕ್ಕೇರಿರುವ ಇಂತಹ ಸಂದರ್ಭದಲ್ಲಿ ಮನೆ ನಿರ್ವಹಿಸಲು ಮಹಿಳೆಯರಿಗೆ ಅನುಕೂಲವಾಗುವಂತಹ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. […]

ಕಾರ್ಕಳ-ಬಂಟ್ವಾಳದಲ್ಲಿ ಉ.ಪ್ರ. ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಬೃಹತ್‌ ರೋಡ್‌ ಶೋ : ಹರಿದು ಬಂದ ಜನಸಾಗರ

ಕಾರ್ಕಳ : ಕರಾವಳಿಯ ಜಿಲ್ಲೆಗಳಾದ ಕಾರ್ಕಳ ಮತ್ತು ಬಂಟ್ವಾಳದಲ್ಲಿ ಉ.ಪ್ರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೃಹತ್ ರೋಡ್ ನಡೆಸಿದರು. ಸುಮಾರು 15 ಸಾವಿರಕ್ಕೂ ಅಧಿಕ ಮಂದಿ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅವರನ್ನು ಸ್ವಾಗತಿಸಿ, ರೋಡ್ ಶೋದಲ್ಲಿ ಪಾಲ್ಗೊಂಡರು. ಬಜರಂಗದಳದ ಸುದ್ದಿಗೇನಾದರೂ ಕಾಂಗ್ರೆಸ್ ಕೈ ಹಾಕಿದಲ್ಲಿ ಸಹಿಸುವ ಮಾತೇ ಇಲ್ಲ. ಬಜರಂಗದಳ ನಿಶೇಧ ಕುರಿತು ಕಾಂಗ್ರೆಸ್ ಯೋಚಿಸಿದ್ದು, ಅಂಥದ್ದೇನಾದರೂ ನಡೆಯದಂತೆ ಬಿಜೆಪಿಯನ್ನೇ ಜನರು ಆಯ್ಕೆ ಮಾಡಬೇಕು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. भगवान श्री हनुमान […]

ಹಿರಿಯಡ್ಕ: ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮಹಾಲಸ ಕ್ಯಾಶ್ಯೂ ಫ್ಯಾಕ್ಟರಿಗೆ ಭೇಟಿ..

ಹಿರಿಯಡ್ಕ: ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಕಾಪು ವಿಧಾನಸಭಾ ಕ್ಷೇತ್ರದ ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾಲಸ ಕ್ಯಾಶ್ಯೂ ಫ್ಯಾಕ್ಟರಿಗೆ ಭೇಟಿ ನೀಡಿ ಮತಯಾಚಿಸಿ.

ಕಾಪು; ಮನೆಗೊಂದರಂತೆ ಉದ್ಯೋಗ ಒದಗಿಸಿಕೊಡುವ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಚಾಲನೆ: ಸೊರಕೆ

ಕಾಪು : ಸಣ್ಣ ಕೈಗಾರಿಕೆಗೆ ಒತ್ತು ಕೊಟ್ಟು ಮನೆಗೊಬ್ಬರಿಗೆ ಉದ್ಯೋಗ ನೀಡುವ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಶಾಸಕನಾದ ಕೂಡಲೇ ಚಾಲನೆ ನೀಡಲಾಗುವುದು ಎಂದು ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನಯ್‌ ಕುಮಾರ್‌ ಸೊರಕೆ ಹೇಳಿದ್ದಾರೆ. ಮಣಿಪಾಲ ಟೆಕ್ನಾಲಜಿ ಸಮೂಹ ಸಂಸ್ಥೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಅವರು ಕಾರ್ಮಿಕರೇ ಈ ದೇಶದ ನಿಜವಾದ ಸಂಪತ್ತು. ಮಣಿಪಾಲ ಗ್ರೂಫ್ಸ್ ತಾಂತ್ರಿಕ ಸಂಸ್ಥೆಗಳು ದೇಶ ಮಾತ್ರವಲ್ಲದೇ ಪ್ರಪಂಚದಾದ್ಯಂತ ಸುದ್ಧಿಯಲ್ಲಿವೆ. ಗ್ರಾಮೀಣ ಭಾಗದ ಸಾವಿರಾರು ಮಂದಿಗೆ ಉದ್ಯೋಗ ನೀಡುವ ಮಹತ್ಕಾರ್ಯ ಮಣಿಪಾಲ ಸಮೂಹ […]

ಹರೀಶ್‌ ಪೂಂಜ ಪರವಾಗಿ ಬೃಹತ್ ರೋಡ್‌ ಶೋ ಮೂಲಕ ಮತಯಾಚಿಸಿದ ಹಿಂದೂ ಫಯರ್‌ ಬ್ರಾಂಡ್‌ ಖ್ಯಾತಿಯ ಅಸ್ಸಾಂ ಮುಖ್ಯಮಂತ್ರಿ

ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್‌ ಪೂಂಜ ಅವರ ಪರವಾಗಿ ಹಿಂದೂ ಫಯರ್‌ ಬ್ರಾಂಡ್‌ ಖ್ಯಾತಿಯ, ಬೆಂಕಿ ಚೆಂಡಿನ ಮಾತುಗಳಿಂದ ಪ್ರಸಿದ್ಧಿ ಪಡೆದಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ್ ಬಿಸ್ವಾ ಶರ್ಮಾ ಅವರು‌ ಇಂದು ದಿನಾಂಕ 06.05.2023 ರಂದು ಉಜಿರೆಯಲ್ಲಿ ಬೃಹತ್‌ ರೋಡ್ ಶೋ ಮೂಲಕ ಮತಯಾಚಿಸಿದರು. ಉಜಿರೆ ಎಸ್‌ಡಿಎಂ ಕಾಲೇಜು ಮೈದಾನದಿಂದ ಆರಂಭಗೊಂಡು ಜನಾರ್ಧನ ಸ್ವಾಮಿ ದೇವಸ್ಥಾನದ ಬೀದಿಯವರೆಗೆ ಬೃಹತ್‌ ರೋಡ್‌ ಶೋ ನಡೆಯಿತು. ಉಜಿರೆ ಮತ್ತು ಧರ್ಮಸ್ಥಳ ಜಿಲ್ಲಾ ಪಂಚಾಯತ್‌ ಕ್ಷೇತ್ರ ವ್ಯಾಪ್ತಿಯ […]