ಟೆಕ್ನೋಟೈಟಾನ್ಸ್ ಮಂಗಳೂರು ತಂಡಕ್ಕೆ ಟೆಸ್ಟ್‌ ಚಾಂಪಿಯನ್ ಶಿಪ್ ಟ್ರೋಫಿ.

ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಜರಗಿದ ಟೆನಿಸಬಾಲ್ ಟೆಸ್ಟ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ದುಬೈನ ವಿಠಲ್ ರಿಶಾನ್ ಮಾಲಕತ್ವದ ಮಂಗಳೂರಿನ ಟೆಕ್ನೋಟೈಟಾನ್ಸ್ ತಂಡವು ಯುನೈಟೆಡ್ ತಂಡವನ್ನು ಭರ್ಜರಿಯಾಗಿ ಮಣಿಸಿ ಈ ಭಾರಿಯ ಟೆಸ್ಟ್ ಚಾಂಪಿಯನ್ ಪೀಠವನ್ನು ಅಲಂಕರಿಸಿತು. ಟೆನಿಸ್ ಬಾಲ್ ಕ್ರಿಕೆಟ್ ಇತಿಹಾಸದಲ್ಲೇ ವಿನೂತನ ಎನ್ನುವ ಮಾದರಿಯಲ್ಲಿ ಆಯೋಜನೆಗೊಂಡ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಒಂದೇದಿನದಲ್ಲಿ ಎರಡೂ ತಂಡಗಳು 25ಓವರುಗಳ ಎರಡು ಇನ್ನಿಂಗ್ಸನ್ನು ಕಡ್ಡಾಯವಾಗಿ ಆಡಲೇಬೇಕು.ಈ ಇನ್ನಿಂಗ್ಸಿಗಳ ಫಲಿತಾಂಶವು ಪಂದ್ಯದ ವಿಜೇತರನ್ನು ನಿರ್ಧರಿಸುತ್ತದೆ. ಈ ಪಂದ್ಯಾವಳಿಯಲ್ಲಿ ಮೊದಲು ಬ್ಯಾಟ್ ಮಾಡಿದ ಟೆಕ್ನೋಟೈಟಾನ್ಸ್ […]

ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಸೊಸೈಟಿ ಲಿ. ವಾರ್ಷಿಕ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ

ಉಡುಪಿ: ಸೊಸೈಟಿಯ 24 ನೇ ವಾರ್ಷಿಕ ಮಹಾಸಭೆ ಸೆಪ್ಟಂಬರ್ 21 ರಂದು ಆರ್ ಎಸ್ ಬಿ ಸಭಾಭವನ ಮಣಿಪಾಲದಲ್ಲಿ ಸೊಸೈಟಿಯ ಅಧ್ಯಕ್ಷರಾದ ಅಶೋಕ್ ಕಾಮತ್ ಕೊಡಂಗೆ ಯವರ ಅಧ್ಯಕ್ಷತೆಯಲ್ಲಿ ಜರಗಿತು. 2024-25 ನೇ ಸಾಲಿನ ಅಂತ್ಯಕ್ಕೆ ರೂ 2.10 ಕೋಟಿ ಪಾಲು ಬಂಡವಾಳ, ರೂ 13.91 ನಿಧಿಗಳು, ರೂ 141.29 ಕೋಟಿ ಠೇವಣಿ , ರೂ 104.24 ಕೋಟಿ ಸಾಲ ಹೊರಬಾಕಿಯೊಂದಿಗೆ , ರೂ 2.91 ನಿವ್ವಳ ಲಾಭ ಗಳಿಸಿ ಲೆಕ್ಕಪರಿಶೋಧನೆಯಲ್ಲಿ ’ಏ’ ಶ್ರೇಣಿಯ ಸಹಕಾರ ಸಂಘಎಂದು […]

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ: ಶಿಕ್ಷಣ ಇಲಾಖೆ ಆದೇಶ.

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಕೇಂದ್ರ ಕಚೇರಿ, 6 ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ ಹಾಗೂ ಎಲ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಆಧಾರ್ ಸಹಿತ ಬಯೋಮೆಟ್ರಿಕ್ ಹಾಜರಾತಿಯನ್ನು ಜಾರಿಗೊಳಿಸುತ್ತಿದೆ.ಈ ಹಿನ್ನಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಮತ್ತು ಅತಿಥಿ ಉಪನ್ಯಾಸಕರು ತಮ್ಮ ವೈಯಕ್ತಿಕ ವಿವರಗಳನ್ನು ಇಲಾಖೆ ಪೋರ್ಟಲ್‌ನಲ್ಲಿ ಸೆ.30ರೊಳಗೆ ನೋಂದಣಿ ಮಾಡಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮೊಬೈಲ್ ಆೃಪ್‌ಗಳನ್ನು ತಮ್ಮ ಮೊಬೈಲ್‌ಗಳಲ್ಲಿ ಇನ್‌ಸ್ಟಾಲ್ ಮಾಡಿಕೊಂಡು ಕಡ್ಡಾಯವಾಗಿ ಹಾಜರಾತಿ […]

ಉಡುಪಿಯಲ್ಲಿ ‘ಟಿಡಿಎಫ್ ಡೈಮಂಡ್ಸ್ ಆಂಡ್ ಗೋಲ್ಡ್’ ಮಳಿಗೆ ಶುಭಾರಂಭ

ಉಡುಪಿ: ಉಡುಪಿ ನಗರದ ಗೀತಾಂಜಲಿ ರಸ್ತೆಯ ಪಿವಿಎಸ್ ಟವರ್(ಟಿವಿಎಸ್ ಮೋಟರ್ಸ್ ಶೋರೂಮ್ ಎದುರು)ನಲ್ಲಿ ನೂತನವಾಗಿ ಆರಂಭಿಸಲಾದ ‘ಟಿಡಿಎಫ್ ಡೈಮಂಡ್ಸ್ ಆಂಡ್ ಗೋಲ್ಡ್’ ಮಳಿಗೆಯನ್ನು ಸೋಮವಾರ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿ, ಈ ಸಂಸ್ಥೆಯು ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದಂತೆ ಗ್ರಾಹಕ ಸ್ನೇಹಿ ವ್ಯವಹಾರ ಮಾಡಿಕೊಂಡು ಬಂದಿದ್ದು, ಆಭರಣ ಕ್ಷೇತ್ರದಲ್ಲಿ ಬಹಳಷ್ಟು ಹೆಸರು ಗಳಿಸಿದೆ. ಎಲ್ಲರು ಒಂದೇ ಮನಸ್ಸಿನಿಂದ ಒಟ್ಟಾಗಿ ಈ ವ್ಯವಹಾರವನ್ನು ಮುನ್ನಡೆಸುತ್ತಿದ್ದಾರೆ. ಯಾವುದೇ ಉದ್ಯಮ ಪರಿಶ್ರಮದಿಂದ […]

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತರಬೇತಿ ಕಾರ್ಯಗಾರ “ಶಿಕ್ಷಕರಿಗೆ 21 ಶತಮಾನದ ಕೌಶಲ್ಯಗಳು”

ಮಣಿಪಾಲ: “ಶಿಕ್ಷಕರಿಗೆ 21 ಶತಮಾನದ ಕೌಶಲ್ಯಗಳು” ಶಿಕ್ಷಕರ ಕೌಶಲ್ಯ ಅಭಿವೃದ್ಧಿ ಕಾರ್ಯಗಾರವು ರೋಟರಿ ಐಸಿರಿ ಪರ್ಕಳ ಹಾಗೂ ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮಣಿಪಾಲ ಇವರ ಸಹಪ್ರಯೋಜಕತ್ವದಲ್ಲಿ ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನ ಆವರಣದಲ್ಲಿ ಸಂಪನ್ಮೂಲ ವ್ಯಕ್ತಿಯಾದ ರೋಟರಿ ಐಸಿರಿ ಪರ್ಕಳದ ರೊ. ಸ್ಮಿತಾ ಜಿ ಕಾಮತ್‍ರವರು ‘ಫೋರ್ ಸಿ’ಗಳ Critical thinking, Creativity, Communication and Collaboration (ವಿಮರ್ಶಾತ್ಮಕ ಚಿಂತನೆ, ಸೃಜನಶೀಲತೆ, ಸಂವಹನ ಮತ್ತು ಸಹಯೋಗ) ಬಗ್ಗೆ ಹಾಗೂ ಡಿಜಿಟಲ್ ಸಾಕ್ಷರತೆ, ಹೊಂದಿಕೊಳ್ಳುವಿಕೆ, […]