ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದಲ್ಲಿ ಸೆ.22 ರಿಂದ ಅ.02ರ ವರೆಗೆ ಶರನ್ನವರಾತ್ರಿ ಮಹೋತ್ಸವ.

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶ್ರೀ ಕ್ಷೇತ್ರ ಕಮಲಶಿಲೆ, ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದಲ್ಲಿ ಸೆ.22 ರಿಂದ ಅ.02ರ ವರೆಗೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವ ನಡೆಯಲಿದೆ. ಈ ಕ್ಷೇತ್ರಕ್ಕೆ ತಾವೆಲ್ಲರೂ ತಮ್ಮ ಇಷ್ಟಮಿತ್ರ, ಬಂಧು-ಬಾಂಧವರೊಡಗೂಡಿ ಆಗಮಿಸಿ, ಶ್ರೀ ಸನ್ನಿಧಿಯಲ್ಲಿ ನಡೆಯುವ ಪೂಜಾ ಉತ್ಸವ ಕಾರ್ಯಕ್ರಮಗಳನ್ನು ವೀಕ್ಷಿಸಿ, ಈ ಪ್ರಸನ್ನ ಕಾಲದಲ್ಲಿ ಶ್ರೀ ಮುಡಿ ಗಂಧ ಪ್ರಸಾದಗಳನ್ನು ಸ್ವೀಕರಿಸಿ, ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರೀ ಅಮ್ಮನವರ ಸಂಪೂರ್ಣ ಕೃಪೆಗೆ ಪಾತ್ರರಾಗಬೇಕಾಗಿ ಅಪೇಕ್ಷಿಸುವ, […]

ಸೆ.22 ರಿಂದ ಅ.02 ರವರೆಗೆ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ.

ಉಡುಪಿ: ಶ್ರೀ ಕ್ಷೇತ್ರ ಮಂದಾರ್ತಿ, ಶ್ರೀ ದುರ್ಗಾಪರಮೇಶ್ವರೀ ದೇವಿ ಸನ್ನಿಧಿಯಲ್ಲಿ ನವರಾತ್ರಿ ವಿಶೇಷ ಪೂಜಾ ಸಮಾರಂಭವು ಸೆ. 22 ರಿಂದ ಅ.02 ರ ವರೆಗೆ ನಡೆಯಲಿದ್ದು, ಸೆ. 29, ಸೋಮವಾರ ಮೂಲ ನಕ್ಷತ್ರ ದಿನ ದೇವಳದ ವತಿಯಿಂದ ಚಂಡಿಕಾಯಾಗ ಜರಗಲಿರುವುದು. ನವರಾತ್ರಿಯ ಈ ಕಾರ್ಯಕ್ರಮಗಳಿಗೆ ತಾವೆಲ್ಲರೂ ಆಗಮಿಸಿ, ತನು-ಮನ-ಧನ-ಧಾನ್ಯಾದಿಗಳ ಅರ್ಪಣೆಯೊಂದಿಗೆ ಸಹಕರಿಸಿ, ಶ್ರೀ ದೇವಿಯ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ, ಅಮ್ಮನವರ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಅಪೇಕ್ಷಿಸುತ್ತೇವೆ. ಗೋವಿಂದ ನಾಯ್ಕ ಡಿ.ಟಿಕಾರ್ಯನಿರ್ವಹಣಾಧಿಕಾರಿ ಹೆಚ್. ಧನಂಜಯ ಶೆಟ್ಟಿಅಧ್ಯಕ್ಷರು ಹೆಚ್. ಪ್ರಭಾಕರ […]

ಉಡುಪಿ: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಲೋಕಾರ್ಪಣೆ

ಉಡುಪಿ: ಸುಮಾರು ಎಂಟು ವರ್ಷಗಳಿಂದ ಕುಂಟುತ್ತಾ ಸಾಗಿರುವ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಭಾನುವಾರ (ಸೆ.21) ರೈಲ್ವೆ ಮೇಲ್ಸೇತುವೆಯನ್ನು ಲೋಕಾರ್ಪಣೆ ಮಾಡಿದರು‌. ಆ ಮೂಲಕ ಉಡುಪಿ ನಗರದ ಎರಡು ದಶಕದ ಕನಸೊಂದು ನನಸಾದಂತಾಗಿದೆ.ಮಲ್ಪೆಯಿಂದ ಚಿತ್ರದುರ್ಗದ ಮೊಳಕಾಲ್ಮೂರು ನಡುವೆ ರಾಷ್ಟ್ರೀಯ ಹೆದ್ದಾರಿ 169 ಎ ನಿರ್ಮಾಣ ಆಗುತ್ತಿದ್ದು, ಉಡುಪಿಯ ಇಂದ್ರಾಳಿ ಬಳಿ ರೈಲ್ವೆ ಟ್ರ್ಯಾಕ್ ಹಾದು ಹೋಗುತ್ತದೆ. ಹಲವಾರು ತಾಂತ್ರಿಕ ಸಮಸ್ಯೆಗಳಿಂದ ರೈಲ್ವೆ ಬ್ರಿಡ್ಜ್ ಕಾಮಗಾರಿ […]

ಬಿಜೆಪಿ ಯುವ ಮೋರ್ಚಾ ಕುಂದಾಪುರ ವತಿಯಿಂದ ಬ್ರಹತ್ ರಕ್ತ ದಾನ ಶಿಬಿರ – 75 ಯೂನಿಟ್ ರಕ್ತ ಸಂಗ್ರಹಣೆ.

ಕುಂದಾಪುರ: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಯವರ 75 ನೇ ಜನ್ಮದಿನಾಚರಣೆ ಪ್ರಯುಕ್ತ ದೇಶದದ್ಯಾoತ ನಡೆಯುತ್ತಿರುವ ಸೇವಾ ಪಾಕ್ಷಿಕ ಕಾರ್ಯಕ್ರಮದ ಅನ್ವಯ ಕುಂದಾಪುರ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಬ್ರಹತ್ ರಕ್ತ ದಾನ ಶಿಬಿರವು ಜರಗಿತು. ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿಯವರ ಉಪಸ್ಥಿತಿಯಲ್ಲಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು. ಕಾರ್ಯಕ್ರದ ಅಧ್ಯಕ್ಷ ತೆಯನ್ನು ಮಂಡಲ ಯುವ ಮೋರ್ಚಾ ಅಧ್ಯಕ್ಷರರಾದ ಕಿರಣ್ ಪೂಜಾರಿ ತೆಕ್ಕಟ್ಟೆಯವರು ವಹಿಸಿದ್ದರು. […]

ಕರಾವಳಿಯ ಕಂಬಳ ರಾಜ್ಯ ಕ್ರೀಡೆ ಮಾನ್ಯತೆಯ ಅಂತಿಮ ಪಟ್ಟಿಯಲ್ಲಿ! ಕಂಬಳ ಪ್ರಿಯರು ಖುಷ್

ಬೆಂಗಳೂರು: ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಲಾಗಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ. ರಾಜ್ಯ ಸರ್ಕಾರದಿಂದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ಘೋಷಣೆಯಾದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ ಸಿಗುವ ಸೌಲಭ್ಯಗಳು ಕೂಡ ಕಂಬಳ ಕ್ರೀಡೆಗಳಿಗೂ ಸಿಗಲಿವೆ. ಕಂಬಳಕ್ಕೆ ರಾಜ್ಯ ಕ್ರೀಡೆಯ ಮಾನ್ಯತೆ ಅಂತಿಮ ಹಂತದಲ್ಲಿದ್ದು, ಕಂಬಳ ಅಸೋಸಿಯೇಷನ್ ನೇಮಕ ಪಟ್ಟಿಯನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ಸಮಿತಿಯ […]