ಬ್ರಹ್ಮಾವರ: ಎಸ್. ಎಂ.ಎಸ್ ಕಾಲೇಜಿನಲ್ಲಿ ಫುಡ್ ಫೆಸ್ಟ್ 2023

ಬ್ರಹ್ಮಾವರ: ಎಸ್.ಎಂ.ಎಸ್.ಕಾಲೇಜಿನ ವಿದ್ಯಾರ್ಥಿ ಸಂಘದ ವತಿಯಿಂದ ಫುಡ್ ಫೆಸ್ಟ್ 2023 ಕಾರ್ಯಕ್ರಮವು ಏಪ್ರಿಲ್ 8 ರಂದು ಅದ್ದೂರಿಯಾಗಿ ನೆರವೇರಿತು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು 18 ತಂಡಗಳಲ್ಲಿ 200 ಕ್ಕೂ ಅಧಿಕ ಆಹಾರ ಪದಾರ್ಥಗಳನ್ನು ತಯಾರಿಸಿ ತೀರ್ಪುಗಾರರ ಹಾಗೂ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ಕಾರ್ಯಕ್ರಮದಲ್ಲಿ ಓ.ಎಸ್.ಸಿ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ, ಕಾಲೇಜಿನ ಸಂಚಾಲಕರಾದ ರೆ.ಫಾ ಎಂ.ಸಿ.ಮಥಾಯ್, ಓ.ಎಸ್.ಸಿ.ಶಿಕ್ಷಣ ಸಮೂಹ ಸಂಸ್ಥೆಯ ಉಪಾಧ್ಯಕ್ಷ ರೆ.ಫಾ. ಲಾರೆನ್ಸ್ ಡಿಸೋಜ, ಪ್ರಧಾನ ಕಾರ್ಯದರ್ಶಿ ಅಲೆನ್ ರೋಹನ್ ವಾಜ್, ಕಾರ್ಯದರ್ಶಿ ಅಲ್ವರಿಸ್ ಡಿಸಿಲ್ವಾ, […]

ಶತಾಯುಷಿ ಮತದಾರರ ಆಹ್ವಾನ ಅಭಿಯಾನಕ್ಕೆ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಚಾಲನೆ

ಕುಂದಾಪುರ: ಉಡುಪಿ ಜಿಲ್ಲೆಯ 209 ಮಂದಿ ಶತಾಯುಷಿ ಮತದಾರರಿಗೆ ಮೇ 10 ರಂದು ನಡೆಯುವ ಮತದಾನದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸುವ ಜಿಲ್ಲಾ ಸ್ವೀಪ್‌ ಸಮಿತಿಯ ವಿಶೇಷ ಅಭಿಯಾನಕ್ಕೆ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಅವರು ಸೋಮವಾರ ತಲ್ಲೂರು ಗ್ರಾ.ಪಂ. ನ ಉಪ್ಪಿನಕುದ್ರುವಿನಲ್ಲಿ 101 ವರ್ಷದ ಆಲಿಸ್‌ ಅವರಿಗೆ ಆಹ್ವಾನ ಪತ್ರ ನೀಡಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿ ಕಾರಿಗಳು, ಇದು ವಿಶೇಷ ಅಭಿಯಾನ. ಈವರೆಗಿನ ಎಲ್ಲ ಚುನಾವಣೆಗಳಲ್ಲಿ ಭಾಗವಹಿಸಿ ರುವ ಆಲಿಸ್‌ ಅವರನ್ನು ಸಮ್ಮಾನಿಸಿದ್ದೇವೆ. ಇದೊಂದು ಖುಷಿಯ ಸಂಗತಿ. ಪ್ರಜಾಪ್ರಭುತ್ವ […]

ಗರಿಗೆದರಿದ ಕಾರ್ಕಳ ಸ್ವರ್ಧಾಕಣಕ್ಕಿಳಿದ ಜೈ ಹನುಮಾನ್ ಸೇನೆ..!!

ಕಾರ್ಕಳ: ಗರಿಗೆದರಿದ ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಜೈ ಹನುಮಾನ್ ಸೇನೆಯು ಪಕ್ಷೇತರವಾಗಿ ಸ್ವರ್ಧಿಸುತ್ತಿದೆ. ರಾಜ್ಯ ವ್ಯಾಪ್ತಿಯ ನಾಲ್ಕು ಕಡೆ ಅಭ್ಯರ್ಥಿಗಳನ್ನು ಸ್ವರ್ಧಾ ಕಣಕ್ಕೆ ಇಳಿಸಲಿದೆ ಎಂದು ಜೈ ಹನುಮಾನ್ ಸೇನೆಯ ರಾಜ್ಯ ಸಂಚಾಲಕ ಹನುಮಂತಪ್ಪ ತಿಳಿಸಿದ್ದಾರೆ. ನಗರದ ಪ್ರಕಾಶ್ ಹೋಟೆಲ್ ನಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದೂ ಧರ್ಮವು ವಸುದೈವ ಕುಟುಂಬಕಂ ಎಂಬ ತತ್ತ್ವವವನ್ನು ನಂಬಿಕೊಂಡು ಅದರ ಆಧಾರದ ಮೇಲೆ ನಿಂತು ಇಂದು ವಿಶ್ವಮಟ್ಟದಲ್ಲಿ ಜ್ವಾಜಲ್ಯಮಾನವಾಗಿ ಪ್ರಜ್ವಲಿಸುತ್ತಿದೆ. ಮನುಷ್ಯ ಜಾತಿ ಒಂದೇ ಎನ್ನುವುದು […]

ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ

ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ಚುನಾವಣೆಯಲ್ಲಿ ಅಭ್ಯರ್ಥಿಗಳ ಘೋಷಣೆಯನ್ನು ಪಕ್ಷ ವಿಳಂಬ ಮಾಡುತ್ತಿದೆ ಎಂಬ ಊಹಾಪೋಹಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ನಾನು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಈಶ್ವರಪ್ಪ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಕಳೆದ 40 ವರ್ಷಗಳಲ್ಲಿ ಪಕ್ಷ ನನಗೆ ಸಾಕಷ್ಟು ಜವಾಬ್ದಾರಿ ನೀಡಿದೆ. ನಾನು ಬೂತ್ ಉಸ್ತುವಾರಿ ಮಟ್ಟದಿಂದ ಪಕ್ಷದ ರಾಜ್ಯ […]

ಮಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗಾಗಿ ಚಾಮರ ಫೌಂಡೇಶನ್ ವತಿಯಿಂದ ಉಚಿತ ಬೇಸಿಗೆ ಶಿಬಿರ

ಮಂಗಳೂರು: ದಿ.ಯತೀಶ್ ವೈ ಶೆಟ್ಟಿ ನೆನಪಿನಲ್ಲಿ ಚಾಮರ ಫೌಂಡೇಶನ್(ರಿ) ನಡೆಸುವ ಆರು ದಿನಗಳ ಉಚಿತ ಬೇಸಿಗೆ ಶಿಬಿರ ಬೇಸಿಗೆಗೊಂದು ಚಾಮರ 2023 ಬೈಕಂಪಾಡಿಯ ಮೊಗವೀರ ಸಮುದಾಯ ಭವನದಲ್ಲಿ ಎಪ್ರಿಲ್ 11 ರಂದು ಆರಂಭಗೊಂಡಿತು. ಸರಳವಾಗಿ ನಡೆದ ಉದ್ಘಾಟನಾ ಕಾರ್ಯಕ್ರಮವನ್ನು ಶಿಬಿರದ ಮಕ್ಕಳೇ ದೀಪ ಬೆಳಗುವುದರ ಮೂಲಕ ಆರಂಭಿಸಿದರು. ಮಿಥುನ್ ಶ್ರಿಯಂ, ರಾಜೀವ ಕಾಂಚನ್, ಶಿರಿಶ್ ಕುಮಾರ್ ಹಾಗು ರಚನಾ ಉಪಸ್ಥಿತರಿದ್ದರು. ಸುಮಾರು 130 ವಿದ್ಯಾರ್ಥಿಗಳು ಈ ಬೇಸಿಗೆ ಶಿಬಿರದ ಭಾಗವಹಿಸಿದ್ದು, ಈ ಬೇಸಿಗೆ ಶಿಬಿರವನ್ನು ವಿಶೇಷವಾಗಿ ಸುತ್ತಮುತ್ತಲಿನ […]