“ಚಿತ್ರಾಪುರದ ದೇವಿ ಭಕ್ತಿ ಸುಗಿಪು ಬಿಡುಗಡೆ”

ಮಂಗಳೂರು : ಶ್ರೀ ವಿದ್ಯೆಂದ್ರತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ಶ್ರೀಖಾರ್ ಮ್ಯೂಸಿಕ್ ಪ್ರೊಡಕ್ಷನ್ಸ್ ಅರ್ಪಿಸುವ “ಚಿತ್ರಾಪುರದ ದೇವಿ” ಭಕ್ತಿ ಸುಗಿಪು ಚಿತ್ರಾಪುರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂಧರ್ಭ ಬಿಡುಗಡೆಗೊಳಿಸಲಾಯಿತು. ಮಂಜುಶ್ರೀ ಕಾರ್ತಿಕೇಯ ಇವರ ಕಂಠದಲ್ಲಿ ಮೂಡಿಬಂದ ಸುಮಧುರ ಗೀತೆಯ ಸಾಹಿತ್ಯವನ್ನು ಅಶೋಕ್‌ ಪೂಜಾರಿ ಮುಂಬೈ ಬರೆದಿದ್ದು, ಕೆ. ರವಿಶಂಕರ್ ಮಂಗಳೂರು ಇವರು ರಾಗ ಸಂಯೋಜನೆ ಹಾಗೂ ಸಂಗೀತ ಸಂಯೋಜನೆಯನ್ನು ಶಿನೋಯ್‌ ವಿ ಜೋಸೆಫ್ ಮಾಡಿದ್ದಾರೆ. ವರುಣ್ ರಾವ್ ಇವರ ಕೊಳಲು ವಾದನ, ರಾಜೇಶ್ ಭಾಗವತ್‌ ತಬಲ ಹಾಗೂ ಸುಮುಖ್ ಆಚಾರ್ಯ […]

ಶನೇಶ್ವರ ದೇವಸ್ಥಾನ ಟ್ರಸ್ಟ್ ಕಾಡುಬೆಟ್ಟು: ವಾರ್ಷಿಕ ಮಹೋತ್ಸವ

ಉಡುಪಿ ಶ್ರೀ ಅಬ್ಬಗ ಧಾರಗ ವೀರಭದ್ರ ಮತ್ತು ಶನೇಶ್ವರ ದೇವಸ್ಥಾನ ಟ್ರಸ್ಟ್ ಕಾಡುಬೆಟ್ಟು ಉಡುಪಿಯಲ್ಲಿ ಶನಿವಾರ ಶ್ರೀ ದೇವರ ದಿವ್ಯ ಸನ್ನಿಧಿಯಾದ ಶ್ರೀ ವೀರಭದ್ರ ಸಹಪಾರಿವಾರ, ಶ್ರೀ ಶನೈಶ್ವರ ದೇವರ, ನಾಗದೇವರ ಸನ್ನಿಧಿಯಲ್ಲಿ. ವಾರ್ಷಿಕ ಮಹೋತ್ಸವ ಅಂಗವಾಗಿ ಶ್ರೀದೇವರಿಗೆ ಕಲಶಾಭಿಷೇಕ, ಗಣಯಾಗ, ಸಾನಿಧ್ಯ ಹವನ, ಇತ್ಯಾದಿ ಧಾರ್ಮಿಕ ಪೂಜಾ ಕಾರ್ಯಕ್ರಮವನ್ನು ಕೊರಂಗ್ರಪಾಡಿ ವಿಧ್ವಾನ್ ಕೆ.ಪಿ.ಕುಮಾರ್, ಗುರುತಂತ್ರಿಯವರ ಮಾರ್ಗದರ್ಶನದಲ್ಲಿ ಅರ್ಚಕರು ನೆಡೆಸಿಕೊಟ್ಟರು. ಟ್ರಸ್ಟಿನ ಅಧ್ಯಕ್ಷರು, ವಿಶ್ವಸ್ಥ ಮಂಡಳಿಯ ಸದಸ್ಯರು ಇದ್ದರು. ನೂರಾರು ಭಕ್ತರೂ ಉಪಸ್ಥರಿದ್ದರು.ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ […]

ಜಿಲ್ಲೆಯಲ್ಲಿ 2,73,548 ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆ ವಿತರಣೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ 

ಉಡುಪಿ: ಮಾರ್ಚ್ 13 ರಂದು ರಾಷ್ಟಿಯ ಜಂತುಹುಳ ನಿವಾರಣಾ ದಿನದ ಅಂಗವಾಗಿ ಜಿಲ್ಲೆಯ 1 ರಿಂದ 19 ವರ್ಷದೊಳಗಿನ 2,73,548 ಮಕ್ಕಳಿಗೆ Albendazole ಮಾತ್ರೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಜಂತುಹುಳುಗಳು 1 ರಿಂದ 19 ವರ್ಷದೊಳಗಿನ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ, ಆ ಮಕ್ಕಳಲ್ಲಿ ಹೊಟ್ಟೆನೋವು, ಭೇದಿ, ಹಸಿವಿಲ್ಲದಿರುವುದು ಹಾಗೂ ಸುಸ್ತು ಇಂತಹ ಲಕ್ಷಣಗಳು ಕಂಡುಬರುತ್ತವೆ. ಇದರಿಂದಾಗಿ ಅವರಲ್ಲಿ ರಕ್ತಹೀನತೆ, ಪೌಷ್ಠಿಕಾಹಾರದ ಕೊರತೆ ಉಂಟಾಗುತ್ತಿದ್ದು, ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ತೊಂದರೆ ಕಾಣಿಸಿಕೊಳ್ಳಬಹುದು. Albendazole […]

ರಾಜಮೌಳಿ ಅವರ RRR ಚಿತ್ರದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ

ಲಾಸ್ ಏಂಜಲೀಸ್: ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. ಈ ಹಾಡಿಗೆ ಈಗಾಗಲೇ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ಸ್, ಗೋಲ್ಡನ್ ಗ್ಲೋಬ್, ಹಾಲಿವುಡ್ ಮ್ಯೂಸಿಕ್ ಇನ್ ಮಿಡಿಯಾ ಅವಾರ್ಡ್ಸ್ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿದೆ

ದೇಶದಲ್ಲಿ ಚಿನ್ನ, ಬೆಳ್ಳಿ ದರ ಮತ್ತೆ ಹೆಚ್ಚಳ: ಗ್ರಾಹಕರಿಗೆ ಶಾಕ್

ಮುಂಬೈ: ಇಳಿಕೆಯಾಗಿದ್ದ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಚಿನ್ನ ಮತ್ತು ಬೆಳ್ಳಿ ತುಟ್ಟಿಯಾಗಿದೆ. 24 ಕ್ಯಾರೆಟ್ 1 ಗ್ರಾಂ ಚಿನ್ನದ ದರ 5689 ರೂಪಾಯಿಗೆ ತಲುಪಿದೆ. ಬೆಂಗಳೂರಿನಲ್ಲಿ 1 ಗ್ರಾಂ ಚಿನ್ನದ ದರ 5694 ರೂಪಾಯಿ ಆಗಿದೆ. ಒಂದು ಗ್ರಾಂ ಚಿನ್ನದ ದರದಲ್ಲಿ 75 ರೂಪಾಯಿ ಏರಿಕೆಯಾಗಿದೆ. ಇದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 52, 200 ರೂಪಾಯಿ ತಲುಪಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 56, 940 ರೂಪಾಯಿಗೆ […]