ಉಡುಪಿ: ಸೆ.14ರಂದು ಕೇರಳ ಸಮಾಜಂ ಉಡುಪಿ ವತಿಯಿಂದ “ಓಣಂ ಸಂಭ್ರಮಾಚರಣೆ”

ಉಡುಪಿ: ಕೇರಳ ಸಮಾಜಂ ಉಡುಪಿ ಇದರ ಆಶ್ರಯದಲ್ಲಿ ಪ್ರಥಮ ವರ್ಷದ “ಓಣಂ ಸಂಭ್ರಮಾಚರಣೆ”ಯನ್ನು ಇದೇ ಸೆಪ್ಟೆಂಬರ್ 14ರ ಭಾನುವಾರದಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಕೇರಳ ಸಮಾಜಂನ ಅಧ್ಯಕ್ಷ ಅರುಣ್ ಕುಮಾರ್ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಯಶ್‌ಪಾಲ್ ಸುವರ್ಣ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ,ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ […]

ಮಂಗಳೂರು: ನಕಲಿ ದಾಖಲೆ ಬಳಸಿ ವಂಚಿಸಿದ ವ್ಯಕ್ತಿಗಳ ಬಂಧನ

ಮಂಗಳೂರು: ಆಧಾರ್ ಕಾರ್ಡ್‌ಗಳು ಮತ್ತು ಭೂ ಸಂಬಂಧಿತ ದಾಖಲೆಗಳನ್ನು ನಕಲಿ ಮಾಡುವ ಮೂಲಕ ಸರ್ಕಾರಿ ಇಲಾಖೆಗಳು ಮತ್ತು ನ್ಯಾಯಾಲಯಗಳನ್ನು ವಂಚಿಸಿದ ಆರೋಪದ ಮೇಲೆ 46 ವರ್ಷದ ವ್ಯಕ್ತಿಯನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚನೆ ಹಲವಾರು ಪ್ರಕರಣಗಳು ಮತ್ತು ಸರ್ಕಾರಿ ದಾಖಲೆಗಳ ಮೇಲೆ ಪರಿಣಾಮ ಬೀರಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಸುಳಿವು ದೊರೆತ ಹಿನ್ನೆಲೆಯಲ್ಲಿ, ಉರ್ವಾ ಪೊಲೀಸರು ಮುಲ್ಕಿಯ ಬಪ್ಪನಾಡು ಗ್ರಾಮದ ನಿವಾಸಿ ಅಬ್ದುಲ್ ರೆಹಮಾನ್ ಎಂಬಾತನನ್ನು ರಸ್ತೆಬದಿಯಲ್ಲಿ ಕಾಯುತ್ತಿದ್ದಾಗ ಬಂಧಿಸಿದರು. ವಿಚಾರಣೆಯ ಸಮಯದಲ್ಲಿ, ಕೊಡಿಯಾಲ್‌ಬೈಲ್‌ನಲ್ಲಿ ಅಂಗಡಿಯನ್ನು […]

ಆಗುಂಬೆ ಘಾಟಿಯಲ್ಲಿ ಎರಡು ಗಂಟೆಗಳ ಕಾಲ ಕೆಟ್ಟು ನಿಂತ ಬಸ್:ಸಂಚಾರ ವ್ಯತ್ಯಯ

ಉಡುಪಿ: ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ಸೊಂದು ಎರಡು ಗಂಟೆಗಳಿಗೂ ಹೆಚ್ಚು ಕಾಲ ಕೆಟ್ಟು ನಿಂತ ಪರಿಣಾಮ ಘಾಟಿಯಲ್ಲಿ ಸಂಚಾರ ವ್ಯತ್ಯಯವಾಗಿದೆ. ಸೆ.10 ರಾತ್ರಿ ಸುಮಾರು 7.30 ರ ಹೊತ್ತಿಗೆ ಉಡುಪಿ-ಶಿವಮೊಗ್ಗ ಎಕ್ಸ್ ಪ್ರೆಸ್ ಬಸ್ಸೊಂದು ಕೆಟ್ಟು ನಿಂತಿದೆ. ನಡು ರಸ್ತೆಯಲ್ಲೇ ಬಸ್ಸು ನಿಂತಿದ್ದರಿಂದ ಇತರ ವಾಹನಗಳು ಮುಂದಕ್ಕೆ ಹೋಗಲು ಸಾಧ್ಯವಾಗಲಿಲ್ಲ.ಇದರಿಂದ ಸಂಚಾರ ವ್ಯತ್ಯಯವಾಗಿದ್ದು ನೂರಾರು ಪ್ರಯಾಣಿಕರು ತೊಂದರೆ ಅನುಭವಿಸಿದರು.ರಾತ್ರಿ 9.30 ರ ವರೆಗೂ ಬಸ್ಸು ರಸ್ತೆ ಮಧ್ಯದಲ್ಲಿ ನಿಂತಿತ್ತು.ಕೊನೆಗೆ ಆಗುಂಬೆ ಘಾಟಿಯಲ್ಲಿ ಸಂಚಾರ ಸುಗಮವಾಗಿಸುವ […]

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತಷ್ಟು ಅಬ್ಬರಿಸಲಿದೆ ಮಳೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತಷ್ಟು ಅಬ್ಬರಿಸಲಿದೆ. 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಮಂಡ್ಯ, ಮೈಸೂರು, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗಾ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ. ಗೋಕರ್ಣ, ಸಿದ್ದಾಪುರ, ಕುಮಟಾ, ಹಳಿಯಾಳದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ […]

ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸಿ ಮತ್ತೆರಡು ಪಿಐಎಲ್ ಅರ್ಜಿ

ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸಿ ಮತ್ತೆರಡು ಪಿಐಎಲ್ ಅರ್ಜಿ ಸಲ್ಲಿಕೆಯಾಗಿದೆ. ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ ಈಗಾಗಲೇ ಹೈಕೋರ್ಟ್‌ ಮೆಟ್ಟಿಲೇರಿರುವುದು ಎಲ್ಲರಿಗೂ ತಿಳಿದಿದೆ. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ಹೈಕೋರ್ಟ್‌ನಲ್ಲಿ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ. ಹಿಂದೂ ಅಲ್ಲದ ಬಾನು ಮುಷ್ತಾಕ್‌ರನ್ನು […]